ಬ್ರೇಕಿಂಗ್ ನ್ಯೂಸ್
02-04-25 10:48 pm HK News Desk ಕರ್ನಾಟಕ
ಹುಬ್ಬಳ್ಳಿ , ಏ 02 : 20 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಆಕೆಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇಲೆ ಮಾಜಿ ಪ್ರಿಯಕರನನ್ನ ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ಈ ಘಟನೆ ನಡೆದಿದ್ದು, ಈ ಹಿಂದೆ ವಿದ್ಯಾರ್ಥಿನಿ ಜೊತೆ ಸಂಬಂಧ ಹೊಂದಿದ್ದ 23 ವರ್ಷದ ಆರೋಪಿಯನ್ನ ಬಂಧಿಸಲಾಗಿದೆ.
ಯುವತಿ ಕುಂದಗೋಳ ಮೂಲದವರಾಗಿದ್ದು, ನಗರದ ವಿದ್ಯಾಪೀಠ ಹಾಸ್ಟೆಲ್ನಲ್ಲಿ ವಾಸವಿದ್ದರು. ಪ್ಯಾರಾಮೆಡಿಕಲ್ ಕೋರ್ಸ್ ಮಾಡುತ್ತಿದ್ದರು. ಆರೋಪಿ ಸಿರಾಜ್ ಪ್ರೀತಿಸುವಂತೆ ಕಿರುಕುಳ ನೀಡಿದ್ದರಿಂದ ಮಂಗಳವಾರ ರಾತ್ರಿ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೆಎಂಸಿ–ಆರ್ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆಸ್ಪತ್ರೆಗೆ ತೆರಳಿ, ಯುವತಿಯ ಕುಟುಂಬದವರಿಗೆ ಮಾಹಿತಿ ನೀಡಿದ್ದರು.
‘ಕುಂದಗೋಳ ಪಟ್ಟಣದ ಒಂದೇ ಬಡವಾಣೆಯವರಾದ ಯುವಕ, ಯುವತಿ ನಡುವೆ ಮೊದಲಿನಿಂದಲೂ ಪರಿಚಯವಿತ್ತು. ಯುವಕ ಪ್ರೀತಿಸುವಂತೆ ಒತ್ತಾಯಿಸಿ, ಹಲ್ಲೆ ನಡೆಸಿದ್ದ. ಪ್ರೀತಿಸಲು ನಿರಾಕರಿಸಿದರೆ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದ. ಮನನೊಂದು ಯುವತಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಯುವತಿ ಪೋಷಕರು ಯುವಕನ ವಿರುದ್ಧ ದೂರು ನೀಡಿದ್ದು, ವಿಚಾರಣೆ ನಡೆಯುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ, ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆ ಮತ್ತು ಆರೋಪಿ ಈ ಹಿಂದೆ ಸಂಬಂಧದಲ್ಲಿದ್ದರು ಎಂದು ಹೇಳಿದ್ದಾರೆ.
A 20-year-old paramedical college student attempted suicide by consuming pills after allegedly being harassed and blackmailed with her photographs by an acquaintance, police said on Wednesday. Following the incident on Tuesday, the 23-year-old accused, who was previously in a relationship with her, was arrested, they added.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm