ಬ್ರೇಕಿಂಗ್ ನ್ಯೂಸ್
04-04-25 12:00 pm Bangalore Correspondent ಕರ್ನಾಟಕ
ಬೆಂಗಳೂರು, ಎ.4 : ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ಆಗಿರುವುದನ್ನು ಮಾಜಿ ಪ್ರಧಾನಿ, ಹಿರಿಯ ಸಂಸದ ಎಚ್ಡಿ ದೇವೇಗೌಡ ಶ್ಲಾಘಿಸಿದ್ದು, ಈ ಮಸೂದೆಯಿಂದ ಯಾವುದೇ ಮುಸ್ಲಿಂ ಧಾರ್ಮಿಕ ಆಚರಣೆಗಳಿಗೆ ಅಡ್ಡಿಯಾಗುವುದಿಲ್ಲ ಎಂದು ಹೇಳಿದ್ದಾರೆ.
ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಬಳಿಕ ಎಚ್.ಡಿ ದೇವೇಗೌಡ ಮಾತನಾಡಿದ್ದು ನೂತನ ವಕ್ಫ್ ಮಸೂದೆಯನ್ನು ಬಲವಾಗಿ ಬೆಂಬಲಿಸಿದರು. ಈ ಕಾಯ್ದೆ ಮುಸ್ಲಿಂ ಧಾರ್ಮಿಕ ಆಚರಣೆಗಳಿಗೆ ಅಡ್ಡಿಯಾಗುವುದಿಲ್ಲ. ಆದರೆ ಆದಾಯ ಮತ್ತು ಆಡಳಿತ ವಿಷಯಗಳಿಗೆ ಕಟ್ಟುನಿಟ್ಟಾಗಿ ಸಂಬಂಧಿಸಿದೆ ಎಂದು ಸ್ಪಷ್ಟಪಡಿಸಿದರು.
ವಕ್ಫ್ ಮಂಡಳಿಗಳ ಅಡಿಯಲ್ಲಿರುವ ಆಸ್ತಿಗಳ ಆಡಳಿತವನ್ನು ನಿಯಂತ್ರಿಸುವ ಗುರಿಯನ್ನು ಈ ಕಾಯ್ದೆ ಹೊಂದಿದೆ. ಪ್ರಸ್ತುತ ದೇಶಾದ್ಯಂತ 9.4 ಲಕ್ಷ ಎಕರೆಗಳಷ್ಟು ವಿಸ್ತಾರವಾಗಿರುವ 8.7 ಲಕ್ಷ ಆಸ್ತಿಗಳನ್ನು ಈ ಕಾಯ್ದೆ ನಿಯಂತ್ರಿಸುತ್ತದೆ. 1.2 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮರು ಸ್ವಾಧೀನ ಪಡಿಸಿಕೊಳ್ಳಬೇಕಾಗಿದೆ. ಮಸೂದೆಯು ವಕ್ಫ್ ಆಸ್ತಿಯನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಂಡಿರುವ ಶ್ರೀಮಂತರಿಂದ ಬಡ ಮುಸ್ಲಿಮರನ್ನು ರಕ್ಷಿಸುತ್ತದೆ. ನ್ಯಾಯದ ಹಿತದೃಷ್ಟಿಯಿಂದ, ನೂತನ ಮಸೂದೆಯನ್ನು ನಮ್ಮ ಸಂವಿಧಾನದ ಮೂಲ ತತ್ವಗಳಿಗೆ ಹೊಂದಿಕೆ ಮಾಡಲಾಗಿದೆ ಎಂದು ದೇವೇಗೌಡರು ಒತ್ತಿ ಹೇಳಿದರು.
ಮುಸ್ಲಿಂ ನಾಗರಿಕರು ಸಹ ಈ ದೇಶದ ಸಮಾನ ನಾಗರಿಕರು. ಅವರ ಹಿತಾಸಕ್ತಿಗಳನ್ನು ಸರ್ಕಾರವು ರಕ್ಷಿಸಬೇಕು ಮತ್ತು ಮಸೂದೆಯು ಅದನ್ನೇ ಮಾಡುತ್ತದೆ. ವಕ್ಫ್ ಆಸ್ತಿಗಳ ಐತಿಹಾಸಿಕ ದುರುಪಯೋಗದ ಬಗ್ಗೆ ವಿಷಾದ ವ್ಯಕ್ತಪಡಿಸಿದ ಅವರು, ಒಮ್ಮೆ ವಕ್ಫ್ ಆಸ್ತಿ ಎಂದರೆ ಅದು ಶಾಶ್ವತವಾಗಿ ವಕ್ಫ್ ಎಂಬ ಉಲ್ಲಂಘನೆಯನ್ನು ಅವರು ಎತ್ತಿ ತೋರಿಸಿದರು. ಅಲ್ಲಾಹನ ಹೆಸರಿನಲ್ಲಿ ದಾನ ಮಾಡಿದ ಆಸ್ತಿಗಳನ್ನು ಪ್ರಬಲ ಮಧ್ಯವರ್ತಿಗಳು, ವಿಶೇಷವಾಗಿ ಕರ್ನಾಟಕದಂತಹ ರಾಜ್ಯಗಳಲ್ಲಿ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಅವರು ಗಮನಸೆಳೆದರು. ಕಳೆದ ದಶಕಗಳಲ್ಲಿ ಸಮೀಕ್ಷೆಗಳ ನಂತರ ಸಮೀಕ್ಷೆಗಳು, ಘಟನೆಗಳ ನಂತರ ಘಟನೆಗಳು ನಮಗೆ ಇದನ್ನು ತಿಳಿಸಿವೆ ಎಂದು ಹೇಳಿದರು.
Voicing support for the Waqf (Amendment) Bill, 2025, former prime minister H D Deve Gowda on Thursday said that it does not interfere with religious practices of Muslims.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am