ಬ್ರೇಕಿಂಗ್ ನ್ಯೂಸ್
05-04-25 02:47 pm HK News Satff ಕರ್ನಾಟಕ
ಬೆಂಗಳೂರು, ಎ.5: ಬಿಜೆಪಿಯಲ್ಲಿ ರೆಬಲ್ ಆಗಿ ಪಕ್ಷದಿಂದಲೇ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗ ಬಹುತೇಕ ಒಂಟಿಯಾಗಿದ್ದಾರೆ. ವಿಜಯದಶಮಿ ವೇಳೆಗೆ ಹೊಸ ಪಕ್ಷ ಕಟ್ಟುತ್ತೇನೆ ಎಂದು ಹೇಳಿದ್ದರೂ, ಅವರ ಜೊತೆಗಿದ್ದವರೇ ಹೊಸ ಪಕ್ಷ ಸೇರಿಕೊಳ್ಳುವ ಸಾಧ್ಯತೆ ಇಲ್ಲ. ಜೊತೆಗಿದ್ದವರೇ ಕೈಕೊಡುವ ಸೂಚನೆ ಲಭಿಸಿದೆ.
ಯತ್ನಾಳ್ ಜೊತೆಗಿದ್ದ ಶಾಸಕರು, ಆಪ್ತರು ಈಗ ನಿಧಾನವಾಗಿ ಯತ್ನಾಳ್ ಅವರಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ನಡೆದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಶಿವಮೊಗ್ಗದ ತಮ್ಮ ನಿವಾಸದಲ್ಲಿ ಮಾತನಾಡಿರುವ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ, ಯತ್ನಾಳ್ ಉಚ್ಚಾಟನೆ ಬಗ್ಗೆಯೂ ಮಾತನಾಡಿದ್ದು, ಅವರನ್ನು ಈಗ ಪಕ್ಷದಿಂದ ವರಿಷ್ಠರು ಉಚ್ಚಾಟಿಸಿದ್ದಾರೆ, ವರಿಷ್ಠರ ನಿರ್ಣಯಕ್ಕೆ ತಾವು ಬದ್ಧರಾಗಿರುತ್ತೇವೆ. ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ಅವರೊಟ್ಟಿಗೆ ಹೋಗುವ ಆಲೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಕ್ಫ್ ಹೋರಾಟದಲ್ಲಿ ಯತ್ನಾಳ್ ಪ್ರಮುಖ ಪಾತ್ರ ವಹಿಸಿದ್ದು ನಿಜ, ಆದರೆ ಅವರನ್ನು ಈಗ ಪಕ್ಷದಿಂದ ವರಿಷ್ಠರು ಉಚ್ಚಾಟಿಸಿದ್ದಾರೆ. ವರಿಷ್ಠರ ನಿರ್ಣಯವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಯತ್ನಾಳ್ ಜೊತೆಗಿದ್ದ ಶಾಸಕರು ಕ್ರಮೇಣ ಯತ್ನಾಳ್ ಅವರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಮಾತನಾಡಿದ್ದ ರಮೇಶ್ ಜಾರಕಿಹೊಳಿ, ಪಕ್ಷಕ್ಕೆ ಮುಜುಗರ ಉಂಟಾಗುವಂತಹ ಹೇಳಿಕೆಗಳನ್ನು ನೀಡದಂತೆ ಯತ್ನಾಳ್ ಅವರಿಗೆ ತಿಳಿಹೇಳುವುದಾಗಿ ಹೇಳಿದ್ದರು.
Basanagouda Patil Yatnal, a rebel MLA expelled from the BJP, is now largely alone. Although he had stated that he would form a new party by Vijaya Dashami, those who were once with him indicate that they are unlikely to join this new venture. Signals have emerged that his former associates are beginning to distance themselves from him.
01-06-25 10:08 pm
HK News Desk
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
02-06-25 12:51 pm
Mangalore Correspondent
Mangalore Muslim Leaders, Dinesh Gundurao: ಕೋ...
01-06-25 12:32 pm
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
02-06-25 04:01 pm
Mangalore Correspondent
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm