ಬ್ರೇಕಿಂಗ್ ನ್ಯೂಸ್
05-04-25 08:12 pm HK News Desk ಕರ್ನಾಟಕ
ಕುಶಾಲನಗರ, ಎ.5 : ಕಾಂಗ್ರೆಸಿನ ಇಬ್ಬರು ಶಾಸಕರ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಆರೋಪಿಸಿ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಡಿವೈಎಸ್ಪಿ ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇಬ್ಬರು ಶಾಸಕರ ಮೇಲೆ ಎಫ್ಐಆರ್ ದಾಖಲಿಸಬೇಕೆಂದು ಆಗ್ರಹಿಸಿ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕುಶಾಲನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಲಾಗಿದ್ದು ಈ ಕೂಡಲೇ ಕಾಂಗ್ರೆಸ್ ಶಾಸಕರ ಮೇಲೆ ಎಫ್ಐಆರ್ ದಾಖಲಿಸಬೇಕೆಂದು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಅರ್ಧ ಗಂಟೆ ಕಾಲ ರಸ್ತೆ ಬಂದ್ ಮಾಡಿದ ಬಳಿಕ ಪ್ರತಿಭಟನೆಗೆ ನೇತೃತ್ವ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಂಸದ ಪ್ರತಾಪಸಿಂಹ, ಮೈಸೂರು ಸಂಸದ ಯದುವೀರ್ ಸೇರಿದಂತೆ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ, ಕಾರ್ಯಕರ್ತರು ಪೊಲೀಸರ ಕ್ರಮಕ್ಕೆ ಅಡ್ಡಿಪಡಿಸಿದ್ದು ತೀವ್ರ ಜಟಾಪಟಿ ನಡೆದಿದೆ. 500 ಕ್ಕೂ ಹೆಚ್ಚು ಪೊಲೀಸರು ಸೇರಿದ್ದು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.





ಇದಕ್ಕು ಮುನ್ನ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸಿನ ಇಬ್ಬರು ಶಾಸಕರು ಕಿರುಕುಳ ನೀಡಿದ್ದು ಇದರಿಂದ ನೊಂದಿದ್ದ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಕಾರಣ ಯಾರೆಂದು ಅವರು ಸ್ಪಷ್ಟವಾಗಿ ಬರೆದಿದ್ದಾರೆ. ಆದರೆ ನಿನ್ನೆ ಬೆಂಗಳೂರಿನ ಪೊಲೀಸರು ಎಫ್ಐಆರ್ ನಲ್ಲಿ ಶಾಸಕರ ಹೆಸರು ಸೇರಿಸಿಲ್ಲ. ಇದು ಅಕ್ಷಮ್ಯ ಅಪರಾಧ. ಪೊಲೀಸರ ಮೇಲೆ ಎಷ್ಟು ಒತ್ತಡ ಇದೆ ಎಂದು ಇದರಿಂದ ಗೊತ್ತಾಗುತ್ತದೆ ಎಂದರು.
ಕುಶಾಲನಗರದಲ್ಲಿ ವಿನಯ್ ಕುಟುಂಬ ಸದಸ್ಯರನ್ನ ವಿಜಯೇಂದ್ರ ಭೇಟಿಯಾಗಿ ಸಾಂತ್ವನ ಹೇಳಿದರು. ಪ್ರತಿಭಟನೆಗೂ ಮುನ್ನ ಮಾಜಿ ಸಂಸದ ಪ್ರತಾಪಸಿಂಹ ತನ್ನ ಫೇಸ್ಬುಕ್ ಖಾತೆಯಲ್ಲಿ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಸೋದರ ಜೀವನ್ ಪೊಲೀಸರಿಗೆ ನೀಡಿದ್ದ ದೂರಿನ ಪತ್ರವನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಕೊಡಗಿನ ಕಾಂಗ್ರೆಸ್ ಶಾಸಕರಾದ ಎ.ಎಸ್ ಪೊನ್ನಣ್ಣ ಮತ್ತು ಮಂಥರ್ ಗೌಡ ಹೆಸರು ಇರುವುದನ್ನು ರೌಂಡ್ ಮಾಡಿ ತೋರಿಸಿದ್ದಲ್ಲದೆ, ಹೆಸರು ಉಲ್ಲೇಖ ಆಗಿದ್ದರೂ ಪೊಲೀಸರು ಯಾಕೆ ಎಫ್ಐಆರ್ ನಲ್ಲಿ ಸೇರಿಸಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
The BJP demanded the naming of two Congress MLAs in the FIR in connection with the alleged suicide, even as CM Siddaramaiah accused them of doing politics over death
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm