ಬ್ರೇಕಿಂಗ್ ನ್ಯೂಸ್
05-04-25 08:12 pm HK News Desk ಕರ್ನಾಟಕ
ಕುಶಾಲನಗರ, ಎ.5 : ಕಾಂಗ್ರೆಸಿನ ಇಬ್ಬರು ಶಾಸಕರ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಆರೋಪಿಸಿ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಡಿವೈಎಸ್ಪಿ ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇಬ್ಬರು ಶಾಸಕರ ಮೇಲೆ ಎಫ್ಐಆರ್ ದಾಖಲಿಸಬೇಕೆಂದು ಆಗ್ರಹಿಸಿ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕುಶಾಲನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಲಾಗಿದ್ದು ಈ ಕೂಡಲೇ ಕಾಂಗ್ರೆಸ್ ಶಾಸಕರ ಮೇಲೆ ಎಫ್ಐಆರ್ ದಾಖಲಿಸಬೇಕೆಂದು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಅರ್ಧ ಗಂಟೆ ಕಾಲ ರಸ್ತೆ ಬಂದ್ ಮಾಡಿದ ಬಳಿಕ ಪ್ರತಿಭಟನೆಗೆ ನೇತೃತ್ವ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಂಸದ ಪ್ರತಾಪಸಿಂಹ, ಮೈಸೂರು ಸಂಸದ ಯದುವೀರ್ ಸೇರಿದಂತೆ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ, ಕಾರ್ಯಕರ್ತರು ಪೊಲೀಸರ ಕ್ರಮಕ್ಕೆ ಅಡ್ಡಿಪಡಿಸಿದ್ದು ತೀವ್ರ ಜಟಾಪಟಿ ನಡೆದಿದೆ. 500 ಕ್ಕೂ ಹೆಚ್ಚು ಪೊಲೀಸರು ಸೇರಿದ್ದು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.





ಇದಕ್ಕು ಮುನ್ನ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸಿನ ಇಬ್ಬರು ಶಾಸಕರು ಕಿರುಕುಳ ನೀಡಿದ್ದು ಇದರಿಂದ ನೊಂದಿದ್ದ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಕಾರಣ ಯಾರೆಂದು ಅವರು ಸ್ಪಷ್ಟವಾಗಿ ಬರೆದಿದ್ದಾರೆ. ಆದರೆ ನಿನ್ನೆ ಬೆಂಗಳೂರಿನ ಪೊಲೀಸರು ಎಫ್ಐಆರ್ ನಲ್ಲಿ ಶಾಸಕರ ಹೆಸರು ಸೇರಿಸಿಲ್ಲ. ಇದು ಅಕ್ಷಮ್ಯ ಅಪರಾಧ. ಪೊಲೀಸರ ಮೇಲೆ ಎಷ್ಟು ಒತ್ತಡ ಇದೆ ಎಂದು ಇದರಿಂದ ಗೊತ್ತಾಗುತ್ತದೆ ಎಂದರು.
ಕುಶಾಲನಗರದಲ್ಲಿ ವಿನಯ್ ಕುಟುಂಬ ಸದಸ್ಯರನ್ನ ವಿಜಯೇಂದ್ರ ಭೇಟಿಯಾಗಿ ಸಾಂತ್ವನ ಹೇಳಿದರು. ಪ್ರತಿಭಟನೆಗೂ ಮುನ್ನ ಮಾಜಿ ಸಂಸದ ಪ್ರತಾಪಸಿಂಹ ತನ್ನ ಫೇಸ್ಬುಕ್ ಖಾತೆಯಲ್ಲಿ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಸೋದರ ಜೀವನ್ ಪೊಲೀಸರಿಗೆ ನೀಡಿದ್ದ ದೂರಿನ ಪತ್ರವನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಕೊಡಗಿನ ಕಾಂಗ್ರೆಸ್ ಶಾಸಕರಾದ ಎ.ಎಸ್ ಪೊನ್ನಣ್ಣ ಮತ್ತು ಮಂಥರ್ ಗೌಡ ಹೆಸರು ಇರುವುದನ್ನು ರೌಂಡ್ ಮಾಡಿ ತೋರಿಸಿದ್ದಲ್ಲದೆ, ಹೆಸರು ಉಲ್ಲೇಖ ಆಗಿದ್ದರೂ ಪೊಲೀಸರು ಯಾಕೆ ಎಫ್ಐಆರ್ ನಲ್ಲಿ ಸೇರಿಸಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
The BJP demanded the naming of two Congress MLAs in the FIR in connection with the alleged suicide, even as CM Siddaramaiah accused them of doing politics over death
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am