ಬ್ರೇಕಿಂಗ್ ನ್ಯೂಸ್
07-04-25 08:49 pm HK News Desk ಕರ್ನಾಟಕ
ಹುಬ್ಬಳ್ಳಿ , ಏ 07: ಭೀಕರ ರಸ್ತೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಹೊರವಲಯದ ನೂಲ್ವಿ ಕ್ರಾಸ್ ಬಳಿ ನಡೆದಿದೆ.
ವರೂರುನಿಂದ ಹುಬ್ಬಳ್ಳಿ ಕಡೆ ಬರುತಿದ್ದ ಕ್ವಿಡ್ ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಕಾರು ನುಜ್ಜು ಗುಜ್ಜಾಗಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೊಬ್ಬರಿಗೆ ಗಂಭೀರ ಗಾಯವಾಗಿದ್ದು, ಕೆಎಂಸಿಆರ್ ಐ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹುಬ್ಬಳ್ಳಿ ಲಿಂಗರಾಜನಗರದ ಶಂಕುತಲಾ ಹಿರೇಮಠ ಎಂಬುವರ ಕುಟುಂಬಸ್ಥರು ಒಂದೇ ಕಾರಿನಲ್ಲಿ ಐವರು ಪ್ರಯಾಣ ಬೆಳೆಸಿದ್ದರು. ಮೃತರಲ್ಲಿ ಒಬ್ಬರಾದ ಶಂಕುತಲಾ ಹಿರೇಮಠ ಖಾಸಗಿ ಪ್ರೌಢ ಶಾಲಾ ವಿಭಾಗದ ನಿವೃತ್ತ ಶಿಕ್ಷಕಿಯಾಗಿದ್ದರು.
ಮೃತರನ್ನು ಹುಬ್ಬಳ್ಳಿ ಲಿಂಗರಾಜ್ ನಗರ ನಿವಾಸಿಗಳಾದ ಒಂದೇ ಕುಟುಂಬದ ಸುಜಾತಾ ಹಿರೇಮಠ (61), ಶಂಕುತಲಾ ಹಿರೇಮಠ್ (75), ಸಂಪತ್ ಕುಮಾರಿ ಹಿರೇಮಠ (60) ಹಾಗೂ ಗಾಯತ್ರಿ ಹಿರೇಮಠ್ (65) ಎಂದು ಗುರುತಿಸಲಾಗಿದೆ. ಗಾಯಗೊಂಡ ವ್ಯಕ್ತಿ ವೀರಬಸಯ್ಯ (69) ಇವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದರು. ಈ ಕುರಿತಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Four members of family were killed and another was injured in an accident at Noolvi cross, near Hubballi.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm