ಬ್ರೇಕಿಂಗ್ ನ್ಯೂಸ್
09-04-25 04:05 pm HK News Desk ಕರ್ನಾಟಕ
ಬೆಂಗಳೂರು, ಎ.9 : ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ ಎಪ್ರಿಲ್ 12ರಿಂದ ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಘೋಷಣೆ ಮಾಡಿದರು.
ತುಮಕೂರಿನಲ್ಲಿ ರೈಲ್ವೇ ಗೇಟ್ ಮೇಲ್ಸೇತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ರೈಲ್ವೇ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಇದೇ 12 ರಂದು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಒಂದು ಹೊಸ ರೈಲು ಬಿಡುತ್ತಿದ್ದೇವೆ. ದಿನಕ್ಕೆ ನಾಲ್ಕು ಬಾರಿ ಹೋಗಿ ಬರುವಂತಹ ಕೆಲಸ ಆಗಲಿದೆ ಎಂದು ಅವರು ಹೇಳಿದರು.
ಬಟವಾಡಿ ಗೇಟ್ನಲ್ಲಿ ಇವತ್ತು 27 ಕೋಟಿ ರೂ. ವೆಚ್ಚದಲ್ಲಿ ಕೆಲಸ ಆರಂಭಿಸಲಾಗಿದೆ. ಬಡ್ಡಿಹಳ್ಳಿ ಬಳಿ 43 ಕೋಟಿ ರೂ. ವೆಚ್ಚದಲ್ಲಿ, ಮೈದಾಳದ ಬಳಿ 51 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ಮಾಡಲಾಗುತ್ತಿದೆ. 650 ಕೋಟಿ ರೂ. ವೆಚ್ಚದ 22 ಮೇಲ್ಸೇತುವೆ ಮತ್ತು ಕೆಳಸೇತುವೆ ಕಾಮಗಾರಿ ಪ್ರಾರಂಭ ಮಾಡಲಾಗುತ್ತಿದೆ. 23 ಕಾಮಗಾರಿಗಳ ಪೈಕಿ ಈಗಾಗಲೇ 10 ಕಾಮಗಾರಿಗೆ ಚಾಲನೆ ಕೊಡಲಾಗಿದೆ. ಹಂತ ಹಂತವಾಗಿ ಕೆಲಸಗಳನ್ನು ಪ್ರಾರಂಭ ಮಾಡಲಾಗುತ್ತದೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಬಂದ ಮೇಲೆ ರೈಲ್ವೇ ಇಲಾಖೆಗೆ ಒಂದು ಕಾಯಕಲ್ಪ ಕೊಟ್ಟಿದ್ದಾರೆ ಎಂದು ಸೋಮಣ್ಣ ಹೇಳಿದರು.
ಕರ್ನಾಟಕದಲ್ಲಿ ಇದ್ದಂತಹ 33 ಸಾವಿರ ಕೋಟಿ ರೂ. ವೆಚ್ಚದ ಯೋಜನೆಗಳನ್ನ ನಾವು (ಕೇಂದ್ರ ಸರ್ಕಾರ) ಕೈಗೆತ್ತಿಕೊಂಡಿದ್ದೇವೆ. ಇದೇ 11 ರಂದು ಹಾವೇರಿಯಿಂದ ಬೆಂಗಳೂರಿಗೆ ವಂದೇ ಭಾರತ್ ರೈಲಿಗೆ ಚಾಲನೆ ಕೊಡುತ್ತಿದ್ದೇವೆ. ಮುಂದಿನ 15 ದಿನಗಳಲ್ಲಿ ಗದಗ, ವಾಡಿ, ಕುಷ್ಠಗಿ, ಯಲಬುರ್ಗಾ ರೈಲು ಸಂಚಾರ ಲೋಕಾರ್ಪಣೆ ಮಾಡುತ್ತೇವೆ. ಅನೇಕ ರೈಲ್ವೆ ಯೋಜನೆಗಳನ್ನು ಲೋಕಾರ್ಪಣೆ ಮಾಡುವಂತಹ ಕೆಲಸ ಈಗಾಗಲೇ ಆಗಿದೆ ಎಂದು ಸೋಮಣ್ಣ ಹೇಳಿದರು.
New Train Service Launched, Bangalore to Kukke Subrahmanya, Vande Bharat Train from Haveri Announced by Minister Somanna.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm