ಬ್ರೇಕಿಂಗ್ ನ್ಯೂಸ್
09-04-25 04:05 pm HK News Desk ಕರ್ನಾಟಕ
ಬೆಂಗಳೂರು, ಎ.9 : ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ ಎಪ್ರಿಲ್ 12ರಿಂದ ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಘೋಷಣೆ ಮಾಡಿದರು.
ತುಮಕೂರಿನಲ್ಲಿ ರೈಲ್ವೇ ಗೇಟ್ ಮೇಲ್ಸೇತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ರೈಲ್ವೇ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಇದೇ 12 ರಂದು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಒಂದು ಹೊಸ ರೈಲು ಬಿಡುತ್ತಿದ್ದೇವೆ. ದಿನಕ್ಕೆ ನಾಲ್ಕು ಬಾರಿ ಹೋಗಿ ಬರುವಂತಹ ಕೆಲಸ ಆಗಲಿದೆ ಎಂದು ಅವರು ಹೇಳಿದರು.
ಬಟವಾಡಿ ಗೇಟ್ನಲ್ಲಿ ಇವತ್ತು 27 ಕೋಟಿ ರೂ. ವೆಚ್ಚದಲ್ಲಿ ಕೆಲಸ ಆರಂಭಿಸಲಾಗಿದೆ. ಬಡ್ಡಿಹಳ್ಳಿ ಬಳಿ 43 ಕೋಟಿ ರೂ. ವೆಚ್ಚದಲ್ಲಿ, ಮೈದಾಳದ ಬಳಿ 51 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ಮಾಡಲಾಗುತ್ತಿದೆ. 650 ಕೋಟಿ ರೂ. ವೆಚ್ಚದ 22 ಮೇಲ್ಸೇತುವೆ ಮತ್ತು ಕೆಳಸೇತುವೆ ಕಾಮಗಾರಿ ಪ್ರಾರಂಭ ಮಾಡಲಾಗುತ್ತಿದೆ. 23 ಕಾಮಗಾರಿಗಳ ಪೈಕಿ ಈಗಾಗಲೇ 10 ಕಾಮಗಾರಿಗೆ ಚಾಲನೆ ಕೊಡಲಾಗಿದೆ. ಹಂತ ಹಂತವಾಗಿ ಕೆಲಸಗಳನ್ನು ಪ್ರಾರಂಭ ಮಾಡಲಾಗುತ್ತದೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಬಂದ ಮೇಲೆ ರೈಲ್ವೇ ಇಲಾಖೆಗೆ ಒಂದು ಕಾಯಕಲ್ಪ ಕೊಟ್ಟಿದ್ದಾರೆ ಎಂದು ಸೋಮಣ್ಣ ಹೇಳಿದರು.
ಕರ್ನಾಟಕದಲ್ಲಿ ಇದ್ದಂತಹ 33 ಸಾವಿರ ಕೋಟಿ ರೂ. ವೆಚ್ಚದ ಯೋಜನೆಗಳನ್ನ ನಾವು (ಕೇಂದ್ರ ಸರ್ಕಾರ) ಕೈಗೆತ್ತಿಕೊಂಡಿದ್ದೇವೆ. ಇದೇ 11 ರಂದು ಹಾವೇರಿಯಿಂದ ಬೆಂಗಳೂರಿಗೆ ವಂದೇ ಭಾರತ್ ರೈಲಿಗೆ ಚಾಲನೆ ಕೊಡುತ್ತಿದ್ದೇವೆ. ಮುಂದಿನ 15 ದಿನಗಳಲ್ಲಿ ಗದಗ, ವಾಡಿ, ಕುಷ್ಠಗಿ, ಯಲಬುರ್ಗಾ ರೈಲು ಸಂಚಾರ ಲೋಕಾರ್ಪಣೆ ಮಾಡುತ್ತೇವೆ. ಅನೇಕ ರೈಲ್ವೆ ಯೋಜನೆಗಳನ್ನು ಲೋಕಾರ್ಪಣೆ ಮಾಡುವಂತಹ ಕೆಲಸ ಈಗಾಗಲೇ ಆಗಿದೆ ಎಂದು ಸೋಮಣ್ಣ ಹೇಳಿದರು.
New Train Service Launched, Bangalore to Kukke Subrahmanya, Vande Bharat Train from Haveri Announced by Minister Somanna.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am