ಬ್ರೇಕಿಂಗ್ ನ್ಯೂಸ್
09-04-25 04:05 pm HK News Desk ಕರ್ನಾಟಕ
ಬೆಂಗಳೂರು, ಎ.9 : ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ ಎಪ್ರಿಲ್ 12ರಿಂದ ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಘೋಷಣೆ ಮಾಡಿದರು.
ತುಮಕೂರಿನಲ್ಲಿ ರೈಲ್ವೇ ಗೇಟ್ ಮೇಲ್ಸೇತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ರೈಲ್ವೇ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಇದೇ 12 ರಂದು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಒಂದು ಹೊಸ ರೈಲು ಬಿಡುತ್ತಿದ್ದೇವೆ. ದಿನಕ್ಕೆ ನಾಲ್ಕು ಬಾರಿ ಹೋಗಿ ಬರುವಂತಹ ಕೆಲಸ ಆಗಲಿದೆ ಎಂದು ಅವರು ಹೇಳಿದರು.
ಬಟವಾಡಿ ಗೇಟ್ನಲ್ಲಿ ಇವತ್ತು 27 ಕೋಟಿ ರೂ. ವೆಚ್ಚದಲ್ಲಿ ಕೆಲಸ ಆರಂಭಿಸಲಾಗಿದೆ. ಬಡ್ಡಿಹಳ್ಳಿ ಬಳಿ 43 ಕೋಟಿ ರೂ. ವೆಚ್ಚದಲ್ಲಿ, ಮೈದಾಳದ ಬಳಿ 51 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ಮಾಡಲಾಗುತ್ತಿದೆ. 650 ಕೋಟಿ ರೂ. ವೆಚ್ಚದ 22 ಮೇಲ್ಸೇತುವೆ ಮತ್ತು ಕೆಳಸೇತುವೆ ಕಾಮಗಾರಿ ಪ್ರಾರಂಭ ಮಾಡಲಾಗುತ್ತಿದೆ. 23 ಕಾಮಗಾರಿಗಳ ಪೈಕಿ ಈಗಾಗಲೇ 10 ಕಾಮಗಾರಿಗೆ ಚಾಲನೆ ಕೊಡಲಾಗಿದೆ. ಹಂತ ಹಂತವಾಗಿ ಕೆಲಸಗಳನ್ನು ಪ್ರಾರಂಭ ಮಾಡಲಾಗುತ್ತದೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಬಂದ ಮೇಲೆ ರೈಲ್ವೇ ಇಲಾಖೆಗೆ ಒಂದು ಕಾಯಕಲ್ಪ ಕೊಟ್ಟಿದ್ದಾರೆ ಎಂದು ಸೋಮಣ್ಣ ಹೇಳಿದರು.
ಕರ್ನಾಟಕದಲ್ಲಿ ಇದ್ದಂತಹ 33 ಸಾವಿರ ಕೋಟಿ ರೂ. ವೆಚ್ಚದ ಯೋಜನೆಗಳನ್ನ ನಾವು (ಕೇಂದ್ರ ಸರ್ಕಾರ) ಕೈಗೆತ್ತಿಕೊಂಡಿದ್ದೇವೆ. ಇದೇ 11 ರಂದು ಹಾವೇರಿಯಿಂದ ಬೆಂಗಳೂರಿಗೆ ವಂದೇ ಭಾರತ್ ರೈಲಿಗೆ ಚಾಲನೆ ಕೊಡುತ್ತಿದ್ದೇವೆ. ಮುಂದಿನ 15 ದಿನಗಳಲ್ಲಿ ಗದಗ, ವಾಡಿ, ಕುಷ್ಠಗಿ, ಯಲಬುರ್ಗಾ ರೈಲು ಸಂಚಾರ ಲೋಕಾರ್ಪಣೆ ಮಾಡುತ್ತೇವೆ. ಅನೇಕ ರೈಲ್ವೆ ಯೋಜನೆಗಳನ್ನು ಲೋಕಾರ್ಪಣೆ ಮಾಡುವಂತಹ ಕೆಲಸ ಈಗಾಗಲೇ ಆಗಿದೆ ಎಂದು ಸೋಮಣ್ಣ ಹೇಳಿದರು.
New Train Service Launched, Bangalore to Kukke Subrahmanya, Vande Bharat Train from Haveri Announced by Minister Somanna.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm