ಬ್ರೇಕಿಂಗ್ ನ್ಯೂಸ್
09-04-25 06:21 pm Bangalore Correspondent ಕರ್ನಾಟಕ
ಬೆಂಗಳೂರು, ಎ.9 : ಈಗಾಗಲೇ ಮುಡಾ ಹಗರಣದಲ್ಲಿ ಸಿಲುಕಿ ಇಡಿ ತನಿಖೆ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಗಣಿ ಗುತ್ತಿಗೆ ನವೀಕರಣ ಹೆಸರಲ್ಲಿ 500 ಕೋಟಿ ರೂ. ಕಿಕ್ಬ್ಯಾಕ್ ಪಡೆದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಪ್ರಾಸಿಕ್ಯೂಷನ್ ಅನುಮತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
2015ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಸಿದ್ದರಾಮಯ್ಯ ಅವರು 8 ಗಣಿ ಗುತ್ತಿಗೆಯನ್ನು ಹರಾಜು ಹಾಕುವ ಬದಲಿಗೆ ನವೀಕರಣ ಮಾಡಿದ್ದರು. ಗಣಿ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಗಣಿ ಕಂಪೆನಿಗಳ ಲೈಸೆನ್ಸ್ ನವೀಕರಣ ಮಾಡಲಾಗಿತ್ತು. ಸಾಕಷ್ಟು ವರ್ಷಗಳಿಂದ ಬಾಕಿ ಇದ್ದ ಲೈಸೆನ್ಸ್ ನವೀಕರಣ ಮಾಡಿದ್ದು ಇದಕ್ಕಾಗಿ ಕಿಕ್ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸುಮಾರು 500 ಕೋಟಿ ರೂ. ಕಿಕ್ಬ್ಯಾಕ್ ಪಡೆದಿದ್ದಾರೆ ಎಂದು ರಾಮಮೂರ್ತಿ ಗೌಡ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ನಿರ್ಧಾರದಿಂದ ಸರ್ಕಾರಕ್ಕೆ 5000 ಕೋಟಿ ನಷ್ಟ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಸಿದ್ದರಾಮಯ್ಯ ಅವರನ್ನು ಪ್ರಾಸಿಕ್ಯೂಷನ್ ಒಳಪಡಿಸಲು ಅನುಮತಿ ನೀಡಿ ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ಸೆಕ್ಷನ್ 7, 9, 11, 12 ಮತ್ತು 15 ಅಡಿ ಪ್ರಾಸಿಕ್ಯೂಚನ್ಗೆ ಅನುಮತಿ ಕೊಡಿ ಎಂದು ಮನವಿ ಮಾಡಲಾಗಿದೆ.
ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 59, 61, 42, 201, 227, 228, 229, 239, 314, 316 (5) 318 (1), 319, 322, 324 (2), 324 (3), 335, 336, 338, 340 ರಡಿ ಕೇಸು ದಾಖಲಿಸಿ ತನಿಖೆ ನಡೆಸಲು ಪೂರ್ವಾನುಮತಿ ನೀಡುವಂತೆ ರಾಮಮೂರ್ತಿ ಗೌಡ ಮನವಿ ಮಾಡಿದ್ದಾರೆ.
ದೂರುದಾರರ ಜೊತೆ ರಾಜ್ಯಪಾಲರು ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಆ ನಂತರ ದೂರಿನ ಮೇಲೆ ಸಹಿ ಮಾಡಿ ಕಾನೂನು ವಿಭಾಗದ ಅಭಿಪ್ರಾಯಕ್ಕೆ ಕಳುಹಿಸಿದ್ದಾರೆ. ಅಲ್ಲದೆ, ಸಾಲಿಸಿಟರ್ ಜನರಲ್ ಬಳಿ ಚರ್ಚೆ ನಡೆಸಿ ತೀರ್ಮಾನ ಮಾಡುವುದಾಗಿ ರಾಜ್ಯಪಾಲರು ದೂರುದಾರರಿಗೆ ಭರವಸೆ ನೀಡಿದ್ದಾರೆ. ದಾಖಲೆ ಪರಿಶೀಲಿಸಿ ವರದಿ ನೀಡುವಂತೆ ಸಾಲಿಸಿಟರ್ ಜನರಲ್ಗೆ ತಿಳಿಸಿದ್ದಾರೆ.
Karnataka Chief Minister Siddaramaiah is facing fresh controversy after social activist H Ramamurthy Gowda submitted a formal request to Governor Thaawarchand Gehlot, seeking sanction to prosecute the Chief Minister under the Prevention of Corruption Act, 1988.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm