ಬ್ರೇಕಿಂಗ್ ನ್ಯೂಸ್
09-04-25 06:21 pm Bangalore Correspondent ಕರ್ನಾಟಕ
ಬೆಂಗಳೂರು, ಎ.9 : ಈಗಾಗಲೇ ಮುಡಾ ಹಗರಣದಲ್ಲಿ ಸಿಲುಕಿ ಇಡಿ ತನಿಖೆ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಗಣಿ ಗುತ್ತಿಗೆ ನವೀಕರಣ ಹೆಸರಲ್ಲಿ 500 ಕೋಟಿ ರೂ. ಕಿಕ್ಬ್ಯಾಕ್ ಪಡೆದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಪ್ರಾಸಿಕ್ಯೂಷನ್ ಅನುಮತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
2015ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಸಿದ್ದರಾಮಯ್ಯ ಅವರು 8 ಗಣಿ ಗುತ್ತಿಗೆಯನ್ನು ಹರಾಜು ಹಾಕುವ ಬದಲಿಗೆ ನವೀಕರಣ ಮಾಡಿದ್ದರು. ಗಣಿ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಗಣಿ ಕಂಪೆನಿಗಳ ಲೈಸೆನ್ಸ್ ನವೀಕರಣ ಮಾಡಲಾಗಿತ್ತು. ಸಾಕಷ್ಟು ವರ್ಷಗಳಿಂದ ಬಾಕಿ ಇದ್ದ ಲೈಸೆನ್ಸ್ ನವೀಕರಣ ಮಾಡಿದ್ದು ಇದಕ್ಕಾಗಿ ಕಿಕ್ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸುಮಾರು 500 ಕೋಟಿ ರೂ. ಕಿಕ್ಬ್ಯಾಕ್ ಪಡೆದಿದ್ದಾರೆ ಎಂದು ರಾಮಮೂರ್ತಿ ಗೌಡ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ನಿರ್ಧಾರದಿಂದ ಸರ್ಕಾರಕ್ಕೆ 5000 ಕೋಟಿ ನಷ್ಟ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಸಿದ್ದರಾಮಯ್ಯ ಅವರನ್ನು ಪ್ರಾಸಿಕ್ಯೂಷನ್ ಒಳಪಡಿಸಲು ಅನುಮತಿ ನೀಡಿ ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ಸೆಕ್ಷನ್ 7, 9, 11, 12 ಮತ್ತು 15 ಅಡಿ ಪ್ರಾಸಿಕ್ಯೂಚನ್ಗೆ ಅನುಮತಿ ಕೊಡಿ ಎಂದು ಮನವಿ ಮಾಡಲಾಗಿದೆ.
ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 59, 61, 42, 201, 227, 228, 229, 239, 314, 316 (5) 318 (1), 319, 322, 324 (2), 324 (3), 335, 336, 338, 340 ರಡಿ ಕೇಸು ದಾಖಲಿಸಿ ತನಿಖೆ ನಡೆಸಲು ಪೂರ್ವಾನುಮತಿ ನೀಡುವಂತೆ ರಾಮಮೂರ್ತಿ ಗೌಡ ಮನವಿ ಮಾಡಿದ್ದಾರೆ.
ದೂರುದಾರರ ಜೊತೆ ರಾಜ್ಯಪಾಲರು ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಆ ನಂತರ ದೂರಿನ ಮೇಲೆ ಸಹಿ ಮಾಡಿ ಕಾನೂನು ವಿಭಾಗದ ಅಭಿಪ್ರಾಯಕ್ಕೆ ಕಳುಹಿಸಿದ್ದಾರೆ. ಅಲ್ಲದೆ, ಸಾಲಿಸಿಟರ್ ಜನರಲ್ ಬಳಿ ಚರ್ಚೆ ನಡೆಸಿ ತೀರ್ಮಾನ ಮಾಡುವುದಾಗಿ ರಾಜ್ಯಪಾಲರು ದೂರುದಾರರಿಗೆ ಭರವಸೆ ನೀಡಿದ್ದಾರೆ. ದಾಖಲೆ ಪರಿಶೀಲಿಸಿ ವರದಿ ನೀಡುವಂತೆ ಸಾಲಿಸಿಟರ್ ಜನರಲ್ಗೆ ತಿಳಿಸಿದ್ದಾರೆ.
Karnataka Chief Minister Siddaramaiah is facing fresh controversy after social activist H Ramamurthy Gowda submitted a formal request to Governor Thaawarchand Gehlot, seeking sanction to prosecute the Chief Minister under the Prevention of Corruption Act, 1988.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am