ಬ್ರೇಕಿಂಗ್ ನ್ಯೂಸ್
09-04-25 09:21 pm HK News Desk ಕರ್ನಾಟಕ
ವಿಜಯಪುರ, ಏ 09: ಜಿಲ್ಲೆಯ ನಿಡಗುಂದಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬಿಎಸ್ಎಫ್ ಯೋಧ ಮತ್ತು ಅಂಬ್ಯುಲೆನ್ಸ್ ಚಾಲಕ ಸಾವನ್ನಪ್ಪಿ, ಇತರರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.
ರಸ್ತೆ ದಾಟುವ ವೇಳೆ ಬೈಕ್ ಗೆ ಡಿಕ್ಕಿ ಹೊಡೆದ ಲಾರಿ ಬೈಕ್ಅನ್ನ ಎಳೆದುಕೊಂಡು ಮುಂದಕ್ಕೆ ಹೋಗಿದೆ. ಅಲ್ಲದೆ, ಎದುರಿಗೆ ಬರುತ್ತಿದ್ದ ಅಂಬ್ಯುಲೆನ್ಸ್ ಗೂ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಆಂಬ್ಯುಲೆನ್ಸ್ ಚಾಲಕ ಮತ್ತು ಬೈಕ್ನಲ್ಲಿದ್ದ ಬಿಎಸ್ಎಫ್ ಯೋಧ ಸಾವನ್ನಪ್ಪಿದ್ದಾರೆ. ಮುದ್ದೇಬಿಹಾಳ ತಾಲೂಕಿನ ಕಾಳಗಿ ಗ್ರಾಮದ ಬಿಎಸ್ಎಫ್ ಯೋಧ ಮೌನೇಶ ರಾಠೋಡ್ (35) ಮೃತ ಯೋಧ ಎಂದು ಗುರುತಿಸಲಾಗಿದೆ.
ಲಾರಿ ರಭಸವಾಗಿ ಎದುರಿನಿಂದ ಗುದ್ದಿದ ಪರಿಣಾಮ ಅಂಬ್ಯುಲೆನ್ಸ್ ಸಹ ನಜ್ಜುಗುಜ್ಜಾಗಿದೆ. ಆಂಬ್ಯುಲೆನ್ಸ್ನಲ್ಲಿ ಸಿಲುಕಿದ್ದ ಚಾಲಕ ಸಹಾಯಕನನ್ನು ಕ್ರೇನ್ ಸಹಾಯದಿಂದ ಹೊರ ತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಂಬ್ಯುಲೆನ್ಸ್ ಚಾಲಕ ಕೇರಳದ ಕೊಟ್ಟಾಯಂ ನಿವಾಸಿ ರಿತೇಶ್ ಪ್ರಸಾದ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ರಸ್ತೆ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಹೀಗಾಗಿ ಅಪಘಾತಕ್ಕೀಡಾದ ಲಾರಿ, ಆಂಬ್ಯುಲೆನ್ಸ್ ಹಾಗೂ ಬೈಕ್ಅನ್ನು ಸ್ಥಳದಿಂದ ತೆರವು ಮಾಡಿ ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಘಟನೆಯಲ್ಲಿ ಆಂಬ್ಯುಲೆನ್ಸ್ ಸಹಾಯಕ ಮತ್ತು ಲಾರಿ ಕ್ಲೀನರ್ಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದರು. ನಿಡಗುಂದಿ ಪೊಲೀಸರು ಅಪಘಾತದ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic series of road accidents near Nidagundi town on Wednesday morning, a Border Security Force (BSF) jawan and an ambulance driver lost their lives after a lorry rammed into multiple vehicles on National Highway 50. The deceased have been identified as Maunesh Rathod (35), a BSF jawan from Kalgi village in Muddebihal taluk, and Ritesh (35), an ambulance driver originally from Kerala.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm