ಬ್ರೇಕಿಂಗ್ ನ್ಯೂಸ್
09-04-25 09:21 pm HK News Desk ಕರ್ನಾಟಕ
ವಿಜಯಪುರ, ಏ 09: ಜಿಲ್ಲೆಯ ನಿಡಗುಂದಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬಿಎಸ್ಎಫ್ ಯೋಧ ಮತ್ತು ಅಂಬ್ಯುಲೆನ್ಸ್ ಚಾಲಕ ಸಾವನ್ನಪ್ಪಿ, ಇತರರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.
ರಸ್ತೆ ದಾಟುವ ವೇಳೆ ಬೈಕ್ ಗೆ ಡಿಕ್ಕಿ ಹೊಡೆದ ಲಾರಿ ಬೈಕ್ಅನ್ನ ಎಳೆದುಕೊಂಡು ಮುಂದಕ್ಕೆ ಹೋಗಿದೆ. ಅಲ್ಲದೆ, ಎದುರಿಗೆ ಬರುತ್ತಿದ್ದ ಅಂಬ್ಯುಲೆನ್ಸ್ ಗೂ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಆಂಬ್ಯುಲೆನ್ಸ್ ಚಾಲಕ ಮತ್ತು ಬೈಕ್ನಲ್ಲಿದ್ದ ಬಿಎಸ್ಎಫ್ ಯೋಧ ಸಾವನ್ನಪ್ಪಿದ್ದಾರೆ. ಮುದ್ದೇಬಿಹಾಳ ತಾಲೂಕಿನ ಕಾಳಗಿ ಗ್ರಾಮದ ಬಿಎಸ್ಎಫ್ ಯೋಧ ಮೌನೇಶ ರಾಠೋಡ್ (35) ಮೃತ ಯೋಧ ಎಂದು ಗುರುತಿಸಲಾಗಿದೆ.





ಲಾರಿ ರಭಸವಾಗಿ ಎದುರಿನಿಂದ ಗುದ್ದಿದ ಪರಿಣಾಮ ಅಂಬ್ಯುಲೆನ್ಸ್ ಸಹ ನಜ್ಜುಗುಜ್ಜಾಗಿದೆ. ಆಂಬ್ಯುಲೆನ್ಸ್ನಲ್ಲಿ ಸಿಲುಕಿದ್ದ ಚಾಲಕ ಸಹಾಯಕನನ್ನು ಕ್ರೇನ್ ಸಹಾಯದಿಂದ ಹೊರ ತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಂಬ್ಯುಲೆನ್ಸ್ ಚಾಲಕ ಕೇರಳದ ಕೊಟ್ಟಾಯಂ ನಿವಾಸಿ ರಿತೇಶ್ ಪ್ರಸಾದ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ರಸ್ತೆ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಹೀಗಾಗಿ ಅಪಘಾತಕ್ಕೀಡಾದ ಲಾರಿ, ಆಂಬ್ಯುಲೆನ್ಸ್ ಹಾಗೂ ಬೈಕ್ಅನ್ನು ಸ್ಥಳದಿಂದ ತೆರವು ಮಾಡಿ ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಘಟನೆಯಲ್ಲಿ ಆಂಬ್ಯುಲೆನ್ಸ್ ಸಹಾಯಕ ಮತ್ತು ಲಾರಿ ಕ್ಲೀನರ್ಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದರು. ನಿಡಗುಂದಿ ಪೊಲೀಸರು ಅಪಘಾತದ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic series of road accidents near Nidagundi town on Wednesday morning, a Border Security Force (BSF) jawan and an ambulance driver lost their lives after a lorry rammed into multiple vehicles on National Highway 50. The deceased have been identified as Maunesh Rathod (35), a BSF jawan from Kalgi village in Muddebihal taluk, and Ritesh (35), an ambulance driver originally from Kerala.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am