ಬ್ರೇಕಿಂಗ್ ನ್ಯೂಸ್
09-04-25 09:31 pm HK News Desk ಕರ್ನಾಟಕ
ಶಿವಮೊಗ್ಗ, ಎ.9 : ಶಿವಮೊಗ್ಗ ಸ್ಮಾರ್ಟ್ ಸಿಟಿ ಚೀಫ್ ಇಂಜಿನಿಯರ್ ಒಬ್ಬರು ಗುತ್ತಿಗೆ ಕಾಮಗಾರಿಯ ಬಿಲ್ ಪಾಸ್ ಮಾಡಲು ಒಂದು ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಸ್ಮಾರ್ಟ್ ಸಿಟಿಯ ಪ್ರಭಾರ ಚೀಫ್ ಇಂಜಿನಿಯರ್ ಕೃಷ್ಣಪ್ಪ ಸಿಕ್ಕಿಬಿದ್ದವರು.
ಶಿವಮೊಗ್ಗ ಸ್ಮಾರ್ಟ್ ಸಿಟಿಯಲ್ಲಿ ಎಲ್ಇಡಿ ಪರದೆಯ ಅಳವಡಿಕೆ ಹಾಗೂ ನಿರ್ವಹಣೆ ಮಾಡುತ್ತಿದ್ದ ಖಾಸಗಿ ಕಂಪನಿಯಿಂದ ಬಿಲ್ ಪಾಸ್ ಮಾಡಲು ಇಂಜಿನಿಯರ್ 1 ಲಕ್ಷ ರೂ. ಲಂಚ ಕೇಳಿದ್ದರು ಎಂದು ದೂರು ಬಂದಿತ್ತು. ಲಂಚದ ಹಣವನ್ನು ಸ್ಮಾರ್ಟ್ ಸಿಟಿ ಕಚೇರಿ ಆವರಣದಲ್ಲಿ ಪಡೆಯುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಖಾಸಗಿ ಕಂಪನಿಯು ಶಿವಮೊಗ್ಗ ಸ್ಮಾರ್ಟ್ ಸಿಟಿಯ ವ್ಯಾಪ್ತಿಯಲ್ಲಿ 7 ಕಡೆ ಡಿಸ್ಪ್ಲೇ ಬೋರ್ಡ್ ಅಳವಡಿಸಿ, ಅದರ ನಿರ್ವಹಣೆಯನ್ನು 5 ವರ್ಷ ಕಾಲ ಮಾಡಿತ್ತು. ಇವರಿಗೆ ಸ್ಮಾರ್ಟ್ ಸಿಟಿಯಿಂದ 11,16,100 ರೂ. ಬಿಲ್ ಪಾವತಿ ಮಾಡಬೇಕಾಗಿತ್ತು. ಇದಕ್ಕಾಗಿ ಕೃಷ್ಣಪ್ಪ ರೂ. 1 ಲಕ್ಷ ಹಣ ಲಂಚ ನೀಡುವಂತೆ ಕೇಳಿದ್ದರು. ಅದನ್ನು ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬುಧವಾರ (ಏಪ್ರಿಲ್ 9) ಕೃಷ್ಣಪ್ಪ ಅವರ ವೃತ್ತಿಯ ಕೊನೆ ದಿನವಾಗಿತ್ತು. ಕೃಷ್ಣಪ್ಪ ಅವರು ತಮ್ಮ ಹುದ್ದೆಯಿಂದ ಬಿಡುಗಡೆ ಹೊಂದಿ ಪಾಲಿಕೆ ಆಯುಕ್ತರಿಗೆ ಚಾರ್ಜ್ ವಹಿಸಬೇಕಿತ್ತು. ಇದೇ ವೇಳೆಯಲ್ಲಿ ಲಂಚದ ಹಣಕ್ಕೆ ಕೈಯೊಡ್ಡಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
Karnataka Lokayukta Police on Wednesday trapped and arrested M. Krishnappa, in-charge Chief Engineer of Shivamogga Smart City project, while accepting a bribe of ₹1 lakh from a representative of a private firm.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm