ಬ್ರೇಕಿಂಗ್ ನ್ಯೂಸ್
09-04-25 09:31 pm HK News Desk ಕರ್ನಾಟಕ
ಶಿವಮೊಗ್ಗ, ಎ.9 : ಶಿವಮೊಗ್ಗ ಸ್ಮಾರ್ಟ್ ಸಿಟಿ ಚೀಫ್ ಇಂಜಿನಿಯರ್ ಒಬ್ಬರು ಗುತ್ತಿಗೆ ಕಾಮಗಾರಿಯ ಬಿಲ್ ಪಾಸ್ ಮಾಡಲು ಒಂದು ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಸ್ಮಾರ್ಟ್ ಸಿಟಿಯ ಪ್ರಭಾರ ಚೀಫ್ ಇಂಜಿನಿಯರ್ ಕೃಷ್ಣಪ್ಪ ಸಿಕ್ಕಿಬಿದ್ದವರು.
ಶಿವಮೊಗ್ಗ ಸ್ಮಾರ್ಟ್ ಸಿಟಿಯಲ್ಲಿ ಎಲ್ಇಡಿ ಪರದೆಯ ಅಳವಡಿಕೆ ಹಾಗೂ ನಿರ್ವಹಣೆ ಮಾಡುತ್ತಿದ್ದ ಖಾಸಗಿ ಕಂಪನಿಯಿಂದ ಬಿಲ್ ಪಾಸ್ ಮಾಡಲು ಇಂಜಿನಿಯರ್ 1 ಲಕ್ಷ ರೂ. ಲಂಚ ಕೇಳಿದ್ದರು ಎಂದು ದೂರು ಬಂದಿತ್ತು. ಲಂಚದ ಹಣವನ್ನು ಸ್ಮಾರ್ಟ್ ಸಿಟಿ ಕಚೇರಿ ಆವರಣದಲ್ಲಿ ಪಡೆಯುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಖಾಸಗಿ ಕಂಪನಿಯು ಶಿವಮೊಗ್ಗ ಸ್ಮಾರ್ಟ್ ಸಿಟಿಯ ವ್ಯಾಪ್ತಿಯಲ್ಲಿ 7 ಕಡೆ ಡಿಸ್ಪ್ಲೇ ಬೋರ್ಡ್ ಅಳವಡಿಸಿ, ಅದರ ನಿರ್ವಹಣೆಯನ್ನು 5 ವರ್ಷ ಕಾಲ ಮಾಡಿತ್ತು. ಇವರಿಗೆ ಸ್ಮಾರ್ಟ್ ಸಿಟಿಯಿಂದ 11,16,100 ರೂ. ಬಿಲ್ ಪಾವತಿ ಮಾಡಬೇಕಾಗಿತ್ತು. ಇದಕ್ಕಾಗಿ ಕೃಷ್ಣಪ್ಪ ರೂ. 1 ಲಕ್ಷ ಹಣ ಲಂಚ ನೀಡುವಂತೆ ಕೇಳಿದ್ದರು. ಅದನ್ನು ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬುಧವಾರ (ಏಪ್ರಿಲ್ 9) ಕೃಷ್ಣಪ್ಪ ಅವರ ವೃತ್ತಿಯ ಕೊನೆ ದಿನವಾಗಿತ್ತು. ಕೃಷ್ಣಪ್ಪ ಅವರು ತಮ್ಮ ಹುದ್ದೆಯಿಂದ ಬಿಡುಗಡೆ ಹೊಂದಿ ಪಾಲಿಕೆ ಆಯುಕ್ತರಿಗೆ ಚಾರ್ಜ್ ವಹಿಸಬೇಕಿತ್ತು. ಇದೇ ವೇಳೆಯಲ್ಲಿ ಲಂಚದ ಹಣಕ್ಕೆ ಕೈಯೊಡ್ಡಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
Karnataka Lokayukta Police on Wednesday trapped and arrested M. Krishnappa, in-charge Chief Engineer of Shivamogga Smart City project, while accepting a bribe of ₹1 lakh from a representative of a private firm.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am