ಬ್ರೇಕಿಂಗ್ ನ್ಯೂಸ್
09-04-25 09:31 pm HK News Desk ಕರ್ನಾಟಕ
ಶಿವಮೊಗ್ಗ, ಎ.9 : ಶಿವಮೊಗ್ಗ ಸ್ಮಾರ್ಟ್ ಸಿಟಿ ಚೀಫ್ ಇಂಜಿನಿಯರ್ ಒಬ್ಬರು ಗುತ್ತಿಗೆ ಕಾಮಗಾರಿಯ ಬಿಲ್ ಪಾಸ್ ಮಾಡಲು ಒಂದು ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಸ್ಮಾರ್ಟ್ ಸಿಟಿಯ ಪ್ರಭಾರ ಚೀಫ್ ಇಂಜಿನಿಯರ್ ಕೃಷ್ಣಪ್ಪ ಸಿಕ್ಕಿಬಿದ್ದವರು.
ಶಿವಮೊಗ್ಗ ಸ್ಮಾರ್ಟ್ ಸಿಟಿಯಲ್ಲಿ ಎಲ್ಇಡಿ ಪರದೆಯ ಅಳವಡಿಕೆ ಹಾಗೂ ನಿರ್ವಹಣೆ ಮಾಡುತ್ತಿದ್ದ ಖಾಸಗಿ ಕಂಪನಿಯಿಂದ ಬಿಲ್ ಪಾಸ್ ಮಾಡಲು ಇಂಜಿನಿಯರ್ 1 ಲಕ್ಷ ರೂ. ಲಂಚ ಕೇಳಿದ್ದರು ಎಂದು ದೂರು ಬಂದಿತ್ತು. ಲಂಚದ ಹಣವನ್ನು ಸ್ಮಾರ್ಟ್ ಸಿಟಿ ಕಚೇರಿ ಆವರಣದಲ್ಲಿ ಪಡೆಯುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಖಾಸಗಿ ಕಂಪನಿಯು ಶಿವಮೊಗ್ಗ ಸ್ಮಾರ್ಟ್ ಸಿಟಿಯ ವ್ಯಾಪ್ತಿಯಲ್ಲಿ 7 ಕಡೆ ಡಿಸ್ಪ್ಲೇ ಬೋರ್ಡ್ ಅಳವಡಿಸಿ, ಅದರ ನಿರ್ವಹಣೆಯನ್ನು 5 ವರ್ಷ ಕಾಲ ಮಾಡಿತ್ತು. ಇವರಿಗೆ ಸ್ಮಾರ್ಟ್ ಸಿಟಿಯಿಂದ 11,16,100 ರೂ. ಬಿಲ್ ಪಾವತಿ ಮಾಡಬೇಕಾಗಿತ್ತು. ಇದಕ್ಕಾಗಿ ಕೃಷ್ಣಪ್ಪ ರೂ. 1 ಲಕ್ಷ ಹಣ ಲಂಚ ನೀಡುವಂತೆ ಕೇಳಿದ್ದರು. ಅದನ್ನು ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬುಧವಾರ (ಏಪ್ರಿಲ್ 9) ಕೃಷ್ಣಪ್ಪ ಅವರ ವೃತ್ತಿಯ ಕೊನೆ ದಿನವಾಗಿತ್ತು. ಕೃಷ್ಣಪ್ಪ ಅವರು ತಮ್ಮ ಹುದ್ದೆಯಿಂದ ಬಿಡುಗಡೆ ಹೊಂದಿ ಪಾಲಿಕೆ ಆಯುಕ್ತರಿಗೆ ಚಾರ್ಜ್ ವಹಿಸಬೇಕಿತ್ತು. ಇದೇ ವೇಳೆಯಲ್ಲಿ ಲಂಚದ ಹಣಕ್ಕೆ ಕೈಯೊಡ್ಡಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
Karnataka Lokayukta Police on Wednesday trapped and arrested M. Krishnappa, in-charge Chief Engineer of Shivamogga Smart City project, while accepting a bribe of ₹1 lakh from a representative of a private firm.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm