ಬ್ರೇಕಿಂಗ್ ನ್ಯೂಸ್
19-12-20 12:03 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.19: ತಮ್ಮ ಬೇಡಿಕೆಗಳನ್ನು ಮುಂದಿಟ್ಟು ನಾಲ್ಕು ದಿನಗಳ ಪರ್ಯಂತ ಮುಷ್ಕರ ನಡೆಸಿದ ಸಾರಿಗೆ ನೌಕರರಿಗೆ ಮತ್ತೊಂದು ಶಾಕ್ ತಗುಲಿದೆ. ಮುಷ್ಕರಕ್ಕೆ ಕಾರಣಕರ್ತರು ಎನ್ನಲಾದ ನಾಲ್ಕು ನಿಗಮಗಳ ಸುಮಾರು 200 ರಷ್ಟು ನೌಕರರನ್ನು ಅಮಾನತುಗೊಳಿಸಲಾಗಿದೆ. ಸರ್ಕಾರದ ಈ ನಡೆಗೆ ನೌಕರರ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಹಾಗೂ ಆರನೇ ವೇತನ ಆಯೋಗ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಮುಷ್ಕರ ನಡೆಸಿದ್ದರು.


ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ನಡೆದ ಮುಷ್ಕರದಿಂದಾಗಿ ಸಾರಿಗೆ ಇಲಾಖೆಗೆ ಭಾರೀ ನಷ್ಟ ಉಂಟಾಗಿದೆ. ನೌಕರರ 10 ಬೇಡಿಕೆಗಳ ಪೈಕಿ ಪ್ರಮುಖ ಬೇಡಿಕೆಗಳನ್ನು ಹೊರತುಪಡಿಸಿ ಉಳಿದವುಗಳಿಗೆ ಸರ್ಕಾರ ಅಸ್ತು ಎಂದಿತ್ತು. ಆದರೆ ಇದೀಗ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರ ಪೈಕಿ 200 ಮಂದಿಗೆ ಅಮಾನತು ಶಿಕ್ಷೆ ನೀಡಲಾಗಿದೆ ಎಂಬ ಆರೋಪ ನೌಕರರ ಕಡೆಯಿಂದ ಕೇಳಿಬರುತ್ತಿದೆ.
ಸರ್ಕಾರದ ಈ ನಡೆಯಿಂದ ನೌಕರರು ಆಕ್ರೋಶಗೊಂಡಿದ್ದಾರೆ. ಮುಷ್ಕರದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾರಣಕ್ಕೆ ಅಮಾನತು ಮಾಡಲಾಗುತ್ತಿದೆ ಎಂದು ಆರೋಪ ಮಾಡುತ್ತಿದ್ದಾರೆ. ಸಾರಿಗೆ ನೌಕರರ ಮುಷ್ಕರ ರಾಜ್ಯಾದ್ಯಂತ ಭಾರೀ ಗಮನ ಸೆಳೆದಿತ್ತು. ನಾಲ್ಕು ದಿನಗಳ ದಿಢೀರ್ ಮುಷ್ಕರದಿಂದಾಗಿ ಸಾರ್ವಜನಿಕರಿಗೆ ಭಾರೀ ತೊಂದರೆ ಉಂಟಾಗಿತ್ತು. ಅಲ್ಲದೆ, ಸಾರಿಗೆ ನೌಕರರ ಸಂಘದ ಮುಖಂಡರು, ಮುಷ್ಕರದಲ್ಲಿ ಪಾಲ್ಗೊಂಡ ನೌಕರರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm