ಬ್ರೇಕಿಂಗ್ ನ್ಯೂಸ್
19-12-20 12:03 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.19: ತಮ್ಮ ಬೇಡಿಕೆಗಳನ್ನು ಮುಂದಿಟ್ಟು ನಾಲ್ಕು ದಿನಗಳ ಪರ್ಯಂತ ಮುಷ್ಕರ ನಡೆಸಿದ ಸಾರಿಗೆ ನೌಕರರಿಗೆ ಮತ್ತೊಂದು ಶಾಕ್ ತಗುಲಿದೆ. ಮುಷ್ಕರಕ್ಕೆ ಕಾರಣಕರ್ತರು ಎನ್ನಲಾದ ನಾಲ್ಕು ನಿಗಮಗಳ ಸುಮಾರು 200 ರಷ್ಟು ನೌಕರರನ್ನು ಅಮಾನತುಗೊಳಿಸಲಾಗಿದೆ. ಸರ್ಕಾರದ ಈ ನಡೆಗೆ ನೌಕರರ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಹಾಗೂ ಆರನೇ ವೇತನ ಆಯೋಗ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಮುಷ್ಕರ ನಡೆಸಿದ್ದರು.
ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ನಡೆದ ಮುಷ್ಕರದಿಂದಾಗಿ ಸಾರಿಗೆ ಇಲಾಖೆಗೆ ಭಾರೀ ನಷ್ಟ ಉಂಟಾಗಿದೆ. ನೌಕರರ 10 ಬೇಡಿಕೆಗಳ ಪೈಕಿ ಪ್ರಮುಖ ಬೇಡಿಕೆಗಳನ್ನು ಹೊರತುಪಡಿಸಿ ಉಳಿದವುಗಳಿಗೆ ಸರ್ಕಾರ ಅಸ್ತು ಎಂದಿತ್ತು. ಆದರೆ ಇದೀಗ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರ ಪೈಕಿ 200 ಮಂದಿಗೆ ಅಮಾನತು ಶಿಕ್ಷೆ ನೀಡಲಾಗಿದೆ ಎಂಬ ಆರೋಪ ನೌಕರರ ಕಡೆಯಿಂದ ಕೇಳಿಬರುತ್ತಿದೆ.
ಸರ್ಕಾರದ ಈ ನಡೆಯಿಂದ ನೌಕರರು ಆಕ್ರೋಶಗೊಂಡಿದ್ದಾರೆ. ಮುಷ್ಕರದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾರಣಕ್ಕೆ ಅಮಾನತು ಮಾಡಲಾಗುತ್ತಿದೆ ಎಂದು ಆರೋಪ ಮಾಡುತ್ತಿದ್ದಾರೆ. ಸಾರಿಗೆ ನೌಕರರ ಮುಷ್ಕರ ರಾಜ್ಯಾದ್ಯಂತ ಭಾರೀ ಗಮನ ಸೆಳೆದಿತ್ತು. ನಾಲ್ಕು ದಿನಗಳ ದಿಢೀರ್ ಮುಷ್ಕರದಿಂದಾಗಿ ಸಾರ್ವಜನಿಕರಿಗೆ ಭಾರೀ ತೊಂದರೆ ಉಂಟಾಗಿತ್ತು. ಅಲ್ಲದೆ, ಸಾರಿಗೆ ನೌಕರರ ಸಂಘದ ಮುಖಂಡರು, ಮುಷ್ಕರದಲ್ಲಿ ಪಾಲ್ಗೊಂಡ ನೌಕರರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm