ಬ್ರೇಕಿಂಗ್ ನ್ಯೂಸ್
11-04-25 03:45 pm Bangalore Correspondent ಕರ್ನಾಟಕ
ಬೆಂಗಳೂರು, ಎ.11 : ಬೆಂಗಳೂರಿನ ಹೈಕೋರ್ಟ್ ಕಟ್ಟಡದಲ್ಲಿ ಜನ್ಮದಿನದ ನೆಪದಲ್ಲಿ ಮೋಜು - ಮಸ್ತಿ ಮಾಡಿದ ಆರೋಪದಲ್ಲಿ ಐವರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಹೈಕೋರ್ಟ್ ಕಟ್ಟಡದ ನೆಲಮಾಳಿಗೆಯ ವಿಶೇಷ ಕಟ್ಟಡದಲ್ಲಿ ಸಿಸಿ ಕ್ಯಾಮರಾ ಆಫ್ ಮಾಡಿಕೊಂಡು ಮೋಜು - ಮಸ್ತಿ ಮಾಡಿದ್ದು ಸಹಾಯಕ ಎಂಜಿನಿಯರ್ ಎ.ಟಿ. ಮೀನಾ ಸೇರಿ ನಾಲ್ವರು ಸಿಬ್ಬಂದಿಯನ್ನು ಲೋಕೋಪಯೋಗಿ ಇಲಾಖೆ ಸೇವೆಯಿಂದ ಅಮಾನತು ಮಾಡಿದೆ.
ಜನ್ಮದಿನ ಆಚರಿಸಿಕೊಂಡ ಸಹಾಯಕ ಎಂಜಿನಿಯರ್ ಎ.ಟಿ. ಮೀನಾ ಹಾಗೂ ಆ ಸಂದರ್ಭದಲ್ಲಿ ಅವರ ಜತೆ ಪಾಲ್ಗೊಂಡಿದ್ದ ಸಿಬ್ಬಂದಿ ಸಿಸಿ ಕ್ಯಾಮೆರಾ ಆಫ್ ಮಾಡಿಸಿರುವುದು ಭದ್ರತೆ ಮತ್ತು ಕರ್ತವ್ಯ ಲೋಪ ಎಸಗಿದ ಕೆಲಸವಾಗಿದೆ. ಕಚೇರಿಯ ಘನತೆ ಹಾಗೂ ಗೌರವ ಕಾಪಾಡಿಕೊಳ್ಳುವಲ್ಲಿ ವಿಫಲವಾಗಿದ್ದಾರೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಲೋಕೋಪಯೋಗಿ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಜಿ.ಎಚ್. ಚಿಕ್ಕೇಗೌಡ, ಸಹಾಯಕ ಎಂಜಿನಿಯರ್ಗಳಾದ ಲಾವಣ್ಯ, ನವೀನ್ ಮತ್ತು ಅಮೀನ್ ಎಸ್. ಅನ್ನದಿನ್ನಿ ಸರಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿದ್ದಾರೆ. ಕರ್ನಾಟಕ ರಾಜ್ಯ ನಾಗರಿಕ (ನಡತೆ) ನಿಯಮಗಳು - 2012ರ ನಿಯಮ 3(1) (1ರಿಂದ 4) ಅನ್ನು ಸ್ಪಷ್ಟವಾಗಿ ಉಲ್ಲಂಘಿಸಿರುತ್ತಾರೆ. ಹಾಗಾಗಿ, ಅವರೆಲ್ಲರನ್ನೂ ಅಮಾನತುಗೊಳಿಸಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.
ಸರಕಾರದಿಂದ ಅಧಿಸೂಚಿಸಲ್ಪಟ್ಟ ಪ್ರಮುಖ ಹಾಗೂ ಗಣ್ಯ ವ್ಯಕ್ತಿಗಳ ಜಯಂತಿ ಮತ್ತು ಕಾರ್ಯಕ್ರಮಗಳನ್ನು ಮಾತ್ರ ಸರಕಾರಿ ಕಚೇರಿ ಹಾಗೂ ಆಚರಿಸಲು ಕಾನೂನುಬದ್ಧ ಅವಕಾಶವಿದೆ. ಉಳಿದ ಜಯಂತಿ, ಕಾರ್ಯಕ್ರಮಗಳಿಗೆ ಅವಕಾಶ ಇರುವುದಿಲ್ಲ. ಈ ಬಗ್ಗೆ ದೂರಿನ ಕುರಿತಂತೆ ವಿಚಾರಣೆ ನಡೆಸಿದ್ದ ಶಿವಮೊಗ್ಗದ ಸಂಪರ್ಕ ಮತ್ತು ಕಟ್ಟಡ ವಿಭಾಗದ ಇಲಾಖಾ ಮುಖ್ಯ ಎಂಜಿನಿಯರ್ ಸಲ್ಲಿಸಿದ ವರದಿ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.
Four assistant engineers and a first division assistant with Public Works Department (PWD) were suspended for organising a birthday party after switching off CCTV cameras at the special buildings division of PWD at the Karnataka high court, a designated high-security building.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 07:24 pm
Mangalore Correspondent
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
ಮನವಿ ಕೊಡಲು ಬಂದವರನ್ನು ತಡೆದ ಪೊಲೀಸರು, ಬೆಳ್ತಂಗಡಿ...
27-10-25 04:36 pm
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm