ಬ್ರೇಕಿಂಗ್ ನ್ಯೂಸ್
12-04-25 11:09 pm Bangalore Correspondent ಕರ್ನಾಟಕ
ಬೆಂಗಳೂರು, ಎ.12 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎ.17ರಂದು ವಿಶೇಷ ಸಚಿವ ಸಂಪುಟ ಸಭೆ ಕರೆದು ವಿವಾದಿತ ಜಾತಿ ಗಣತಿ ವರದಿ ಬಗ್ಗೆ ಚರ್ಚೆ ನಡೆಸಲು ಮುಂದಾಗಿದ್ದಾರೆ. ಆದರೆ ಸಿಎಂ ಅವರ ಈ ನಡೆಗೆ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳು ವಿರೋಧಿಸಿದ್ದು, ಹೊಸದಾಗಿ ವರದಿ ರೂಪಿಸುವಂತೆ ಒತ್ತಾಯ ಮಾಡಿವೆ.
ಜಾತಿ ಗಣತಿ ವರದಿ ದೋಷಪೂರಿತವಾಗಿದೆ ಎಂದು ಕರ್ನಾಟಕ ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಬಿ.ಕೆಂಚಪ್ಪ ಗೌಡ ಹೇಳಿದ್ದು ಈ ಸಮೀಕ್ಷಾ ವರದಿಗೆ ಯಾವುದೇ ಆಧಾರವಿಲ್ಲ. ಇದು ಸಂಪೂರ್ಣ ದೋಷಪೂರಿತ. 2011ರ ಜನಗಣತಿ ಆಧರಿಸಿ ಈ ವರದಿಯನ್ನು ತಯಾರಿಸಲಾಗಿದೆ. ಇದು ಇಂದಿನ ಸಂದರ್ಭದಲ್ಲಿ ಅರ್ಥಹೀನವಾಗಿದೆ. ನಮ್ಮ ಸಮುದಾಯದ ಯಾರೂ ಗಣತಿದಾರರನ್ನು ನೋಡಿಲ್ಲ. ಹೀಗಾಗಿ ಜಾತಿ ಗಣತಿ ನಡೆಸಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಹೇಳಿದರು.
ನಿವೃತ್ತ ಐಎಎಸ್ ಅಧಿಕಾರಿ, ಜಾಗತಿಕ ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಜಾಮದಾರ್ ಹೇಳಿಕೆ ನೀಡಿದ್ದು, ಜಾತಿ ಗಣತಿ ಅಕ್ರಮ ಮತ್ತು ದೋಷಪೂರಿತವಾಗಿದೆ. ಭಾರತೀಯ ಜನಗಣತಿ ಕಾಯ್ದೆಯಡಿ ರಾಜ್ಯ ಸರ್ಕಾರಕ್ಕೆ ಜನಗಣತಿ ನಡೆಸುವ ಅಧಿಕಾರವಿಲ್ಲ. ಭಾರತ ಸರ್ಕಾರ ಮಾತ್ರ ಇದನ್ನು ಮಾಡಬಹುದು. 1931ರ ನಂತರ ಇದನ್ನು ಇಲ್ಲಿಯ ವರೆಗೆ ಮಾಡಿಲ್ಲ. ಕೇಂದ್ರ ಸರ್ಕಾರ ಹೊರತುಪಡಿಸಿ ಯಾವುದೇ ಪ್ರಾಧಿಕಾರ ಮಾಡುವ ಜಾತಿ ಗಣತಿ ಕಾನೂನು ಬಾಹಿರವಾಗುತ್ತದೆ ಎಂದು ಹೇಳಿದರು.
ಸಮೀಕ್ಷೆ ಸಮಯದಲ್ಲಿ ತಮ್ಮ ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಮೀಸಲಾತಿ ಪಡೆಯುವ ಉದ್ದೇಶದಿಂದ ವಂಚಿಸಲಾಗಿದೆ. ಮೀಸಲಾತಿ ಸೌಲಭ್ಯ ಪಡೆಯಲು ಜನರು ತಮ್ಮ ಜಾತಿಗಳನ್ನು ಹಿಂದುಳಿದ ಸಮುದಾಯಗಳಿಗೆ ಸೇರಿಸಿದ್ದಾರೆ ಎಂದು ಹೇಳಿದ್ದಾರೆ.
ಚಿತ್ರದುರ್ಗದ ಮುರುಘಾ ಮಠದ ಪ್ರಭಾರಿ ಬಸವಪ್ರಭು ಸ್ವಾಮೀಜಿ ಮಾತನಾಡಿ, ಜಾತಿ ಗಣತಿ ವರದಿ ಶಿಫಾರಸ್ಸುಗಳು ಬಹಿರಂಗವಾಗುವವರೆಗೂ ಕಾಯುತ್ತೇವೆ, ಪರವಾಗಿದೆಯೋ ಅಥವಾ ವಿರೋಧವಾಗಿದೆಯೋ ಕಾದು ನೋಡಬೇಕು, ಅಖಿಲ ಭಾರತ ವೀರಶೈವ ಮಹಾಸಭಾ ಅಂತಿಮ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದರು.
ಜಾತಿ ಸಮೀಕ್ಷೆಗೆ ರಾಜ್ಯ ಸರ್ಕಾರ 165 ಕೋಟಿ ರೂ. ವೆಚ್ಚ ಮಾಡಿರುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಯಾವುದೇ ಸಚಿವರು ವರದಿಗೆ ವಿರುದ್ಧವಾಗಿಲ್ಲ. ಈ ಬಗ್ಗೆ ಸೂಕ್ತ ಸಮಾಲೋಚನೆಯ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
Vokkaliga and Lingayat Leaders Challenge Legitimacy of Caste Survey, Claims of Flawed Methodology and State Overreach.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am