ಬ್ರೇಕಿಂಗ್ ನ್ಯೂಸ್
14-04-25 02:06 pm Bangalore Correspondent ಕರ್ನಾಟಕ
ಬೆಂಗಳೂರು, ಎ.14 : ವಕೀಲೆ ಎಸ್. ಜೀವಾ ಆತ್ಮಹತ್ಯೆ ಪ್ರಕರಣದಲ್ಲಿ ಸಿಐಡಿ ವಿಶೇಷ ತನಿಖಾ ದಳದ (ಎಸ್ಐಟಿ) ಅಧಿಕಾರಿಗಳು ಹೈಕೋರ್ಟ್ಗೆ ಆರೋಪಪಟ್ಟಿ ಸಲ್ಲಿಸಿದ್ದು, ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ವಿಚಾರಣೆ ನೆಪದಲ್ಲಿ ಮಹಿಳಾ ವಕೀಲೆಗೆ ಚಿತ್ರಹಿಂಸೆ ನೀಡಿದ್ದೇ ಆಕೆಯ ಸಾವಿಗೆ ಕಾರಣ ಎಂದು ವರದಿ ನೀಡಿದ್ದಾರೆ.
ಜೀವಾ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಬರೆದಿಟ್ಟಿದ್ದ ಪತ್ರದಲ್ಲಿ ಡಿವೈಎಸ್ಪಿ ಕನಕಲಕ್ಷ್ಮಿ ವಿರುದ್ಧ ಮಾಡಿದ್ದ ಆರೋಪಗಳು ಶೇ. 90ರಷ್ಟು ಸತ್ಯವಾಗಿರುವುದಾಗಿ ಎಸ್ಐಟಿ ಅಧಿಕಾರಿಗಳು ತನಿಖಾ ವರದಿಯಲ್ಲಿ ಬೊಟ್ಟು ಮಾಡಿದ್ದಾರೆ. ಕೋರ್ಟಿಗೆ ಸಲ್ಲಿಸಿರುವ 2,300 ಪುಟಗಳ ಆರೋಪ ಪಟ್ಟಿಯಲ್ಲಿ ಈ ಮಾಹಿತಿ ಉಲ್ಲೇಖಿಸಿದ್ದಾರೆ.
ವಿಚಾರಣೆ ನೆಪದಲ್ಲಿ ವಕೀಲೆ ಜೀವಾ ಅವರಿಗೆ ಕಿರುಕುಳ ನೀಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಪ್ರಕರಣ ಸಂಬಂಧಿಸಿ ಜೀವಾ ಅವರ ಸಹೋದರಿ ಸಂಗೀತಾ, ಡಿವೈಎಸ್ಪಿ ಕನಕಲಕ್ಷ್ಮಿ ಜೊತೆಗೆ ತಂಡದಲ್ಲಿದ್ದ ಕೆಲವು ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿ 80ಕ್ಕೂ ಹೆಚ್ಚು ಸಾಕ್ಷಿಗಳ ಹೇಳಿಕೆ ಪಡೆಯಲಾಗಿದೆ. ಕನಕಲಕ್ಷ್ಮೀ ಅವರು ಪ್ರಕರಣದಲ್ಲಿ ದೊಡ್ಡ ಮೊತ್ತದ ಹಣಕ್ಕಾಗಿ ಬೇಡಿಕೆ ಮುಂದಿಟ್ಟು ಜೀವಾ ಮೇಲೆ ಹಲ್ಲೆ ನಡೆಸಿ, ಚಿತ್ರಹಿಂಸೆ ಕೊಟ್ಟಿದ್ದರು ಎಂದು ದೂರಲಾಗಿತ್ತು. 25 ಲಕ್ಷ ರೂ. ಲಂಚ ಕೊಡುವಂತೆ ಬೆದರಿಸಿದ್ದರು ಎಂಬುದಾಗಿ ಎಸ್ಐಟಿ ಅಧಿಕಾರಿಗಳು ವರದಿಯಲ್ಲಿ ತಿಳಿಸಿದ್ದಾರೆ.
ಜೀವಾ ಮೇಲೆ ಹಲ್ಲೆ ನಡೆಸಿರುವುದು ಹಾಗೂ ಚಿತ್ರಹಿಂಸೆ ನೀಡಿರುವುದಕ್ಕೆ ಸಂಬಂಧಪಟ್ಟ ವಿಡಿಯೋ ಸಾಕ್ಷ್ಯಗಳು, ನಕಲಿ ದಾಖಲೆಗಳನ್ನು ಅಧಿಕಾರಿಗಳು ಆರೋಪಪಟ್ಟಿ ಜತೆ ಕೋರ್ಟ್ಗೆ ಸಲ್ಲಿಸಿದ್ದಾರೆ.
ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಭೋವಿ ಅಭಿವೃದ್ಧಿ ನಿಗಮದಿಂದ ನೀಡಲಾಗಿದ್ದ ಸಾಲದ ಯೋಜನೆಯಲ್ಲಿ 2021 ಮತ್ತು 2022ರಲ್ಲಿ ಅವ್ಯವಹಾರ ನಡೆದಿತ್ತು. ನಿಗಮದ ಅಧಿಕಾರಿಗಳು ಸಾಲದ ನೆಪದಲ್ಲಿ ಜೀವಾ ಅವರ ಮಾಲೀಕತ್ವದ ಅನ್ನಿಕಾ ಎಂಟರ್ಪ್ರೈಸಸ್ಗೆ ಅಕ್ರಮವಾಗಿ 7.16 ಕೋಟಿ ರೂ. ಮತ್ತು ಅವರ ಸಹೋದರಿ ಹೆಸರಲ್ಲಿರುವ ಹರ್ನಿತಾ ಕ್ರಿಯೇಷನ್ಸ್ ಸಂಸ್ಥೆಗೆ 3.79 ಕೋಟಿ ರೂ. ವರ್ಗಾಯಿಸಿದ್ದರು ಎನ್ನುವ ವಿಚಾರದ ಬಗ್ಗೆ ತನಿಖೆ ನಡೆಸಲಾಗಿತ್ತು. ಕಾಂಗ್ರೆಸ್ ಸರ್ಕಾರ ತನಿಖೆಗೆ ನೇಮಿಸಿದ್ದ ಸಿಐಡಿ ಅಧಿಕಾರಿಗಳು ಜೀವಾ ಸೇರಿದಂತೆ ಬೋವಿ ಅಭಿವೃದ್ಧಿ ನಿಗಮದ ಅಧಿಕಾರಿಗಳ ವಿರುದ್ಧ ಕೇಸು ದಾಖಲಿಸಿ ತನಿಖೆ ನಡೆಸಿದ್ದರು. ಇದೇ ವೇಳೆ, ವಕೀಲೆ ಜೀವಾ ಅವರನ್ನು ವಿವಸ್ತ್ರಗೊಳಿಸಿ ಹಲ್ಲೆ ಮತ್ತು ಕಿರುಕುಳ ನೀಡಲಾಗಿತ್ತು.
ಚಿತ್ರಹಿಂಸೆಯಿಂದ ಬೇಸತ್ತ ಜೀವಾ ಅವರು ಬನಶಂಕರಿಯ ರಾಘವೇಂದ್ರ ಲೇಔಟ್ನ ಮನೆಯಲ್ಲಿ 2024ರ ನ.22ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಡಿವೈಎಸ್ಪಿ ಕನಕಲಕ್ಷ್ಮಿ ಅವರ ಕಿರುಕುಳ ಮತ್ತು ಚಿತ್ರಹಿಂಸೆಯ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅವರು ಸುದೀರ್ಘ ಪತ್ರ ಬರೆದಿಟ್ಟಿದ್ದರು. ಜೀವಾ ಅವರ ಸಹೋದರಿ ಸಂಗೀತಾ ಅವರು ಕನಕಲಕ್ಷ್ಮಿ ವಿರುದ್ಧ ಬನಶಂಕರಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಹೈಕೋರ್ಟ್ ಪ್ರಕರಣದ ತನಿಖೆಗೆ ಸಿಬಿಐ ಎಸ್ಪಿ ವಿನಾಯಕ್ ವರ್ಮಾ, ಸಿಸಿಬಿ ಡಿಸಿಪಿ ಅಕ್ಷಯ್ ಮಚಿಂದ್ರ, ನಿಶಾ ಜೇಮ್ಸ್ ಅವರನ್ನು ಒಳಗೊಂಡ ಎಸ್ಐಟಿ ರಚಿಸಿತ್ತು.
A Special Investigation Team (SIT) of Karnataka Police has submitted its final report in connection with the suicide of a 33-year-old Bengaluru-based lawyer, who had accused CID deputy superintendent of police (DySP) BM Kanakalakshmi of harassment and torture during questioning in an inquiry she attended in November 2024.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am