ಬ್ರೇಕಿಂಗ್ ನ್ಯೂಸ್
15-04-25 12:51 pm HK News Desk ಕರ್ನಾಟಕ
ಬೆಂಗಳೂರು, ಎ.15: ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್(72) ಸೋಮವಾರ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಆರೋಗ್ಯ ಚೇತರಿಸದೇ ಕೋಮಾಗೆ ಜಾರಿದ್ದರು.
ಶ್ಯಾಮಸುಂದರ್ ಅವರು ಕನ್ನಡ ಪತ್ರಿಕೋದ್ಯಮಲ್ಲಿ ಸುಮಾರು 39 ವರ್ಷ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು. ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಉನ್ನತ ಜವಾಬ್ದಾರಿಯನ್ನು ನಿರ್ವಹಿಸಿರುವ ಶ್ಯಾಮಸುಂದರ್, ವನ್ ಇಂಡಿಯಾ ನಂಬರ್ ವನ್ ಆಗಿಸಿದ್ದು ಸೇರಿದಂತೆ ಕನ್ನಡ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ಪತ್ರಕರ್ತರ ಬಳಗದಲ್ಲಿ ಶಾಮಿ ಎಂದೇ ಪ್ರಸಿದ್ಧಿ ಪಡೆದಿದ್ದರು. ಅವಿವಾಹಿತರಾಗಿದ್ದ ಶ್ಯಾಮಸುಂದರ್, ಜಗ್ಗೇಶ್ ನಟನೆಯ ಎದ್ದೇಳು ಮಂಜುನಾಥ ಸಿನಿಮಾದಲ್ಲಿ ಬ್ಯಾಂಕ್ ಮ್ಯಾನೇಜರ್ ಪಾತ್ರವನ್ನೂ ನಿರ್ವಹಿಸಿದ್ದರು. ಶ್ಯಾಮಸುಂದರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿಗಳು, ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ಅವರ ನಿಧನದ ಸುದ್ದಿ ದುಃಖವುಂಟು ಮಾಡಿದೆ. ಬರಹವನ್ನೇ ಬದುಕಾಗಿಸಿಕೊಂಡಿದ್ದ ಶ್ಯಾಮಸುಂದರ್ ಅವರು ಸುದೀರ್ಘ ಕಾಲ ಪತ್ರಕರ್ತರಾಗಿ ದುಡಿದವರು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
The journalism community and the state of Karnataka are mourning the loss of esteemed veteran journalist S.K. Shyamsundar, who passed away on April 15th in Bangalore. Shyamsundar, recognized for his significant contributions to Kannada journalism, leaves behind a rich legacy that has inspired countless writers and reporters in the region.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm