ಬ್ರೇಕಿಂಗ್ ನ್ಯೂಸ್
16-04-25 09:07 pm Bangalore Correspondent ಕರ್ನಾಟಕ
ಬೆಂಗಳೂರು, ಎ.16 : ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸಲು ರಾಜ್ಯ ಶಿಕ್ಷಣ ಇಲಾಖೆ ಮುಂದಾಗಿದೆ. ಈ ಕುರಿತು ರಾಜ್ಯ ಶಿಕ್ಷಣ ನೀತಿ ಆಯೋಗ ಸಲ್ಲಿಸಿರುವ ವರದಿ ಆಧರಿಸಿ ಶಾಲಾ ಶಿಕ್ಷಣ ಇಲಾಖೆ ನಿರ್ಧಾರ ಪ್ರಕಟಿಸಿದೆ.
ರಾಜ್ಯದಲ್ಲಿ ಯಾವುದೇ ಶಾಲೆಗಳಲ್ಲಿ 1ನೇ ತರಗತಿಗೆ ಪ್ರವೇಶ ಪಡೆಯಬೇಕು ಎಂದರೆ ಮಕ್ಕಳಿಗೆ ಕಡ್ಡಾಯವಾಗಿ ಮೇ 31 ರೊಳಗೆ 6 ವರ್ಷ ಪೂರೈಸಿರಬೇಕಿತ್ತು. ಆದರೆ ಇದೀಗ ರಾಜ್ಯ ಸರ್ಕಾರ ಈ ವರ್ಷಕ್ಕೆ ಮಾತ್ರ ಅನ್ವಯಿಸುವಂತೆ ಮಕ್ಕಳ ಸೇರ್ಪಡೆಗೆ ವಯಸ್ಸಿನ ಸಡಿಲಿಕೆ ನೀಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಅದರ ಪ್ರಕಾರ, ಮೇ 31ಕ್ಕೆ 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1ನೇ ತರಗತಿಗೆ ದಾಖಲಾತಿ ಮಾಡಬಹುದಾಗಿದೆ. ಈವರೆಗೆ 1ನೇ ತರಗತಿಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು 6 ವರ್ಷ ಆಗಿರಬೇಕೆನ್ನುವುದು ಕಡ್ಡಾಯವಾಗಿತ್ತು. ಎಲ್ಕೆಜಿ, ಯುಕೆಜಿ ಪೂರೈಸಿದ್ದು ಮಕ್ಕಳಿಗೆ 5 ವರ್ಷ 5 ತಿಂಗಳಾಗಿದ್ದರೆ ಒಂದನೇ ತರಗತಿಗೆ ಪ್ರವೇಶ ನೀಡಲಾಗುವುದು. ಪೋಷಕರ ಒತ್ತಾಯದ ಮೇರೆಗೆ ಈ ಬಾರಿಗೆ ಮಾತ್ರ ವಯೋಮಿತಿ ಸಡಿಲಿಕೆ ಅವಕಾಶ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ 2022ರ ನವೆಂಬರ್ನಲ್ಲಿ ಹೊರಡಿಸಿದ ಆದೇಶ ಪ್ರಕಾರ, ಜೂನ್ 1 2025ರ ಒಳಗೆ ಆರು ವರ್ಷಗಳನ್ನು ಪೂರ್ಣಗೊಳಿಸಿದ ಮಕ್ಕಳು 2025-26ನೇ ಶೈಕ್ಷಣಿಕ ವರ್ಷಕ್ಕೆ ಒಂದನೇ ತರಗತಿಗೆ ಪ್ರವೇಶ ಪಡೆಯಲು ಅರ್ಹರಾಗಿದ್ದರು. ಇದರಿಂದ ಸಾವಿರಾರು ಮಕ್ಕಳ ಪ್ರವೇಶಕ್ಕೆ ಅಡ್ಡಿಯಾಗಿತ್ತು. ಮೊದಲು ಇದ್ದಂತೆ ಪೋಷಕರ ಇಚ್ಛೆಗೆ ಅನುಗುಣವಾಗಿ ಶಾಲೆಗೆ ಸೇರಿಸಲು ವಯೋಮಿತಿ ಸಡಿಲಿಕೆಗೆ ಅವಕಾಶ ನೀಡಬೇಕು ಎಂದು ಹಲವು ಪೋಷಕರು ಮನವಿ ಮಾಡಿದ್ದರು.
ಅಂದ್ರೆ 5 ವರ್ಷ 5 ತಿಂಗಳು ಇರುವ ಮಕ್ಕಳಿಗೆ ಈ ವರ್ಷ 1ನೇ ತರಗತಿ ನೋಂದಣಿಗೆ ಅವಕಾಶ ಮಾಡಲಾಗುತ್ತಿದೆ. 1ನೇ ತರಗತಿಯ ಅಡ್ಮಿಷನ್ ಜೊತೆಗೆ LKG ಪ್ರವೇಶ ಪಡೆಯುವ ಮಕ್ಕಳಿಗೆ 4 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಇದು ಕೇವಲ ರಾಜ್ಯಪಠ್ಯ ಕ್ರಮಕ್ಕೆ ಮಾತ್ರ ಅನ್ವಯ. ಐಸಿಎಸ್ಇ, ಸಿಬಿಎಸ್ಇ ಬೋರ್ಡ್ ಬಗ್ಗೆ ನಾವು ನಿರ್ಧಾರ ಮಾಡಲು ಆಗಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
The Karnataka government has decided to give exemption from the rule of 'minimum 6 years of age' for admission to class 1 in state schools only for this academic year.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm