ಬ್ರೇಕಿಂಗ್ ನ್ಯೂಸ್
17-04-25 05:01 pm Bangalore Correspondent ಕರ್ನಾಟಕ
ಬೆಂಗಳೂರು, ಎ.17 : ಗ್ರೇಸ್ ಮಿನಿಸ್ಟ್ರಿ ಸಂಸ್ಥೆ ವತಿಯಿಂದ ಎಪ್ರಿಲ್ 12- 13ರಂದು ಎರಡು ದಿನಗಳ ಪಸ್ಕ ಹಬ್ಬ ಹಾಗೂ ಒಡಂಬಡಿಕೆ ಮಂಜೂಷ ಪೆಟ್ಟಿಗೆಯ ಸ್ಥಾಪನೆ ಮಂಗಳೂರಿನ ವಳಚ್ಚಿಲ್ ಮತ್ತು ಬೆಂಗಳೂರಿನ ಬೂದಿಗೆರೆಯಲ್ಲಿ ಆಚರಿಸಲಾಯಿತು.
ಪಸ್ಕ ಹಬ್ಬ ಸಂದರ್ಭದಲ್ಲಿ ಗುಡ್ ಫ್ರೈಡೇ ಸಡಗರದ ಜೊತೆಗೆ ಇದೇ ಮೊದಲ ಬಾರಿಗೆ ಚರ್ಚ್ ಆವರಣದಲ್ಲಿ ಬೈಬಲ್ ಪ್ರೇರಿತ ಒಡಂಬಡಿಕೆ ಮಂಜೂಷ ಪೆಟ್ಟಿಗೆಯನ್ನ ಅದ್ದೂರಿಯಾಗಿ ಬರಮಾಡಿಕೊಂಡು ಏಳು ಸುತ್ತುಗಳ ಮೆರವಣಿಗೆಯ ನಂತರ ಬೆಂಗಳೂರಿನಲ್ಲಿ ಅನಾವರಣಗೊಳಿಸಲಾಯಿತು
ದೇಶವಿದೇಶಗಳಿಂದ ಹಾಗೂ ರಾಜ್ಯದ ಹಲವಾರು ಜಿಲ್ಲೆಗಳಿಂದ ಸಾವಿರಾರು ಭಕ್ತರು ಪಸ್ಕ ಹಬ್ಬದಲ್ಲಿ ಪಾಲ್ಗೊಂಡಿದ್ದು, ಬಿಷಪ್ ಡಾ. ಆಂಡ್ರೋ ರಿಚರ್ಡ್ ರವರು ಪಸ್ಕ ಹಾಗು ಮಂಜೂಷ ಪೆಟ್ಟಿಗೆಯ ಮಹತ್ವವನ್ನ ಭಕ್ತರಿಗೆ ಸಾರಿದರು.
ಇದೇ ವೇಳೆ ಗ್ರೇಸ್ ಮಿನಿಸ್ಟ್ರಿ ನಿರ್ದೇಶಕರು ಹಾಗೂ ಸಂಸ್ಥಾಪಕರಾದ ಡಾ.ಆಂಡ್ರ್ಯೂ ರಿಚರ್ಡ್ ರವರು ಮಾತನಾಡಿ, ಈ ವರ್ಷ ಪಸ್ಕ ಹಬ್ಬದ ಜೊತೆಗೆ ದೇಶದಲ್ಲೇ ಪ್ರಪ್ರಥಮ ಬಾರಿಗೆ ಮಂಜೂಷ ಪೆಟ್ಟಿಗೆಯ ಸ್ಥಾಪನೆ ಮಾಡಿರುವ ಸಂಸ್ಥೆ ಎಂದು ಹೇಳುವುದಕ್ಕೆ ಸಂತೋಷಪಡುತ್ತೇನೆ ಎಂದರು. ಹಬ್ಬದ ಪ್ರಯುಕ್ತ ಬಡ ಮಕ್ಕಳ ಉಚಿತ ಶಿಕ್ಷಣಕ್ಕಾಗಿ ನೆರವು ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಸಮುದಾಯದ ಮಕ್ಕಳನ್ನು ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಇನ್ನು 2024ರ ಪಸ್ಕ ಹಬ್ಬ ಆಚರಿಸಿದ ಸಂದರ್ಭ ಬಡ ಚರ್ಚ್ ಒಂದು ಹಣಕಾಸಿನ ತೊಂದರೆಯಿಂದಾಗಿ ಅರ್ಧದಲ್ಲಿ ನಿಂತು ಹೋಗಿತ್ತು, ಗ್ರೇಸ್ ಮಿನಿಸ್ಟ್ರಿ ಸಂಸ್ಥೆಯಿಂದ 8 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಆ ಚರ್ಚಿನ ಸಂಪೂರ್ಣ ನಿರ್ಮಾಣಕ್ಕೆ ಸಂಸ್ಥೆ ದಾರಿ ಮಾಡಿಕೊಟ್ಟಿದೆ ಎಂದರು.
ಪ್ರತಿ ವರ್ಷ ಪಸ್ಕ ಹಬ್ಬ ಆಯೋಜಿಸಲಾಗುತ್ತಿದ್ದು, ಆಮೂಲಕ ಬಡವರು, ಅನಾಥರು, ಬಡ ವಿದ್ಯಾರ್ಥಿಗಳಿಗೆ ಸಂಸ್ಥೆ ವತಿಯಿಂದ ನೆರವು ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ ಎಂದರು.
ಇನ್ನು ಒಡಂಬಡಿಕೆ ಮಂಜೂಷ ಪೆಟ್ಟಿಗೆ ಸ್ಥಾಪನೆಯ ನಂತರ ಸಾವಿರಾರು ಭಕ್ತಾದಿಗಳು ಸಾಲು ಸಾಲಿನಲ್ಲಿ ನಿಂತು ತಮ್ಮ ಪ್ರಾರ್ಥನ ಮನವಿಗಳನ್ನು ಸಲ್ಲಿಸಿ ದೇವರ ದರ್ಶನವನ್ನ ಪಡೆದುಕೊಂಡರು.
Grace Ministry joyfully celebrated the feast of Passover in Bangalore and Mangalore on April 12 and 13, uniting thousands of devotees from across Karnataka. The highlight of this year’s festivities was the establishment of a symbolic Ark of the Covenant at Budigere in Bangalore, marking the first of its kind in India and embodying the rich traditions and profound spiritual significance of the Passover celebration.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm