ಬ್ರೇಕಿಂಗ್ ನ್ಯೂಸ್
19-04-25 12:24 pm HK News Desk ಕರ್ನಾಟಕ
ಶಿವಮೊಗ್ಗ, ಎ.19: ಇಲ್ಲಿನ ಆದಿಚುಂಚನಗಿರಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದ ಪ್ರಕರಣ ವಿವಾದಕ್ಕೆ ಕಾರಣವಾಗುತ್ತಲೇ ಇದಕ್ಕೆ ಕಾರಣವಾದ ಇಬ್ಬರು ಹೋಮ್ ಗಾರ್ಡ್ ಗಳನ್ನು ಜಿಲ್ಲಾಡಳಿತ ಅಮಾನತು ಮಾಡಿದೆ. ಬ್ರಾಹ್ಮಣ ಸಂಘದ ದೂರಿನಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪರೀಕ್ಷಾ ಕೇಂದ್ರದ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ಕೈಗೊಂಡಿದ್ದಾರೆ.
ತಪಾಸಣೆ ವೇಳೆ ಒಬ್ಬ ಅಭ್ಯರ್ಥಿ ಜನಿವಾರವನ್ನು ತಾನೇ ತೆಗೆದು ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸುತ್ತಾನೆ. ಇನ್ನೊಬ್ಬ ಜನಿವಾರ ತೆಗೆಯದೇ ಹೊರಗಡೆ ಕಾಯುತ್ತಿದ್ದ. ಇದನ್ನು ಗಮನಿಸಿ ಕೇಂದ್ರದ ಮೇಲ್ವಿಚಾರಕರು ಸ್ಥಳಕ್ಕೆ ದೌಡಾಯಿಸಿ ಹೋಮ್ ಗಾರ್ಡ್ಗೆ ಬುದ್ಧಿ ಹೇಳುತ್ತಾರೆ. ಬಳಿಕ ಆ ಅಭ್ಯರ್ಥಿಯನ್ನು ಒಳಕ್ಕೆ ಬಿಟ್ಟಿದ್ದಾರೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರ ಹಂತದಲ್ಲಿ ಕರ್ತವ್ಯಲೋಪ ಆಗಿಲ್ಲ. ಹೀಗಾಗಿ, ಜನಿವಾರ ತೆಗೆಯಲು ಸೂಚನೆ ನೀಡಿದ ಇಬ್ಬರು ಹೋಮ್ ಗಾರ್ಡ್ಗಳನ್ನು ಅಮಾನತುಗೊಳಿಸಿದ್ದು, ಇಲಾಖಾ ತನಿಖೆ ಕಾಯ್ದಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಶಿವಮೊಗ್ಗ ಹಾಗೂ ಬೀದರ್ ನಲ್ಲಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಘಟನೆಗಳು ನಡೆದಿದ್ದವು. ಏ.17ರಂದು ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಗಳು ಸಹಜವಾಗಿ ಅವರ ಜಾತಿಗೆ ತಕ್ಕಂತೆ ಶಿವದಾರ, ಜನಿವಾರ ಧರಿಸಿದ್ದರು. ಆದರೆ, ಪರೀಕ್ಷೆ ಹಾಲ್ ಗೆ ಪ್ರವೇಶಿಸುವ ಮುನ್ನ ಹೋಂ ಗಾರ್ಡ್ ಗಳು ಅಭ್ಯರ್ಥಿಗಳನ್ನು ಚೆಕ್ ಮಾಡುವಾಗ ಕಟ್ಟಿಕೊಂಡಿದ್ದ ತಾಯತ ಅಥವಾ ಯಾವುದೇ ದಾರಗಳನ್ನು ತೆಗೆದು ಹಾಕುವಂತೆ ಸೂಚಿಸಿದ್ದರು. ಅದೇ ವೇಳೆ, ಕೆಲವು ಅಭ್ಯರ್ಥಿಗಳ ಜನಿವಾರಗಳನ್ನೂ ಸಹ ತೆಗೆಯುವಂತೆ ಸೂಚಿಸಿದ್ದು ವಿವಾದಕ್ಕೆ ಕಾರಣವಾಗಿದೆ.
Two home guards deployed at a Common Entrance Test (CET) examination centre in Shivamogga, Karnataka, have been suspended after they allegedly forced two students to remove their janivara (sacred thread) before entering the exam hall. The incident occurred on April 16 at Aadichunchanagiri Independent PU College in Sharavathinagara, sparking outrage from the local Brahmin community and prompting swift action from district authorities.
28-12-25 09:03 pm
Bangalore Correspondent
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:45 am
Mangalore Correspondent
ಮಂಗಳೂರು ಕಂಬಳದಲ್ಲಿ ಹೊಸ ಇತಿಹಾಸ ; ಹುಸೇನ್ ಬೋಲ್ಟ್...
28-12-25 09:37 pm
ಮನೆ ಕಂಪೌಂಡ್ ಹೊರಗೆ ನಿಲ್ಲಿಸಿದ್ದ ಆಟೋ ರಿಕ್ಷಾ ಕಳವು...
28-12-25 09:12 pm
ಸಂಸದ ಬ್ರಿಜೇಶ್ ಚೌಟರ 'ಬ್ಯಾಕ್ ಟು ಊರು' ಪರಿಕಲ್ಪನೆ...
28-12-25 03:44 pm
Mangalore, Pandeshwar ASI : ಪಾಂಡೇಶ್ವರ ಠಾಣೆ ಎಎ...
28-12-25 11:50 am
28-12-25 05:19 pm
HK News Desk
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm