ಬ್ರೇಕಿಂಗ್ ನ್ಯೂಸ್
19-12-20 03:48 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.19: ಕೊನೆಗೂ ಶಾಲೆ ಆರಂಭಿಸುವತ್ತ ದಿಟ್ಟ ಹೆಜ್ಜೆ ಇಟ್ಟಿದೆ. ಜನವರಿ 1ರಿಂದಲೇ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಆರಂಭಿಸಲು ರಾಜ್ಯ ಸರಕಾರ ಹಸಿರು ನಿಶಾನೆ ನೀಡಿದೆ.
ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಪ್ರಮುಖ ಸಚಿವರ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಶಾಲೆ ಆರಂಭಿಸಲು ನಿರ್ಧಾರ ತೆಗೆದುಕೊಂಡಿದ್ದಾಗಿ ಪ್ರಕಟಿಸಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಕೊರೊನಾ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಈ ಬಗ್ಗೆ ವರದಿ ನೀಡಿತ್ತು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಮತ್ತು ಕೊರೊನಾ ಸೋಂಕಿನ ಪ್ರಮಾಣ ತಗ್ಗಿರುವ ಕಾರಣ ಜನವರಿ ಒಂದರಿಂದಲೇ 10 ಮತ್ತು 12ನೇ ತರಗತಿಗಳನ್ನು ಆರಂಭಿಸಲು ಸಲಹೆ ಮಾಡಿತ್ತು. ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡ ಅದಕ್ಕೆ ಒಪ್ಪಿದ್ದು, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದರು.

15 ದಿನಗಳ ನಂತರ 9ನೇ ತರಗತಿ ಮತ್ತು ಮೊದಲ ಪಿಯು ತರಗತಿಗಳನ್ನು ಆರಂಭಿಸಲು ಕೂಡ ಸಲಹಾ ಮಂಡಳಿ ವರದಿಯಲ್ಲಿ ಹೇಳಿದ್ದರು. ಆ ಬಗ್ಗೆ ಮುಖ್ಯಮಂತ್ರಿ ಈಗಲೇ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.
ಕೊರೊನಾ ಲಾಕ್ಡೌನ್ ಬಳಿಕ ಕಳೆದ 9 ತಿಂಗಳಿಂದ ಶಾಲೆ ಸ್ಥಗಿತಗೊಂಡಿತ್ತು. ಈ ನಡುವೆ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆದಿತ್ತು. ಅದು ಬಿಟ್ಟರೆ ಶಾಲೆ ಸಂಪೂರ್ಣವಾಗಿ ಸ್ಥಗಿತಗೊಂಡು ವಿದ್ಯಾರ್ಥಿಗಳಿಗೂ ಶಿಕ್ಷಣದ ಬಗ್ಗೆ ಆಸಕ್ತಿಯನ್ನೇ ಕಳಕೊಂಡಿದ್ದರು. ಇದೀಗ ಮತ್ತೆ ಶಾಲೆ ಆರಂಭಿಸುವುದರೊಂದಿಗೆ ಕೊರೊನಾ ಬಳಿಕ ವಿದ್ಯಾರ್ಥಿಗಳು ಮತ್ತೆ ಶಾಲೆಯ ಹಾದಿ ಹಿಡಿಯಲಿದ್ದಾರೆ. ಹಾಗಿದ್ದರೂ, ಶಾಲೆಗೆ ಆಗಮಿಸುವುದನ್ನು ಕಡ್ಡಾಯ ಮಾಡುವಂತಿಲ್ಲ ಎಂಬ ಸೂಚನೆಯನ್ನೂ ಶಿಕ್ಷಣ ಇಲಾಖೆ ಶಾಲಾಡಳಿತ ಮಂಡಳಿಗಳಿಗೆ ನೀಡಿದೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm