ಬ್ರೇಕಿಂಗ್ ನ್ಯೂಸ್
19-12-20 03:48 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.19: ಕೊನೆಗೂ ಶಾಲೆ ಆರಂಭಿಸುವತ್ತ ದಿಟ್ಟ ಹೆಜ್ಜೆ ಇಟ್ಟಿದೆ. ಜನವರಿ 1ರಿಂದಲೇ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಆರಂಭಿಸಲು ರಾಜ್ಯ ಸರಕಾರ ಹಸಿರು ನಿಶಾನೆ ನೀಡಿದೆ.
ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಪ್ರಮುಖ ಸಚಿವರ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಶಾಲೆ ಆರಂಭಿಸಲು ನಿರ್ಧಾರ ತೆಗೆದುಕೊಂಡಿದ್ದಾಗಿ ಪ್ರಕಟಿಸಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಕೊರೊನಾ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಈ ಬಗ್ಗೆ ವರದಿ ನೀಡಿತ್ತು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಮತ್ತು ಕೊರೊನಾ ಸೋಂಕಿನ ಪ್ರಮಾಣ ತಗ್ಗಿರುವ ಕಾರಣ ಜನವರಿ ಒಂದರಿಂದಲೇ 10 ಮತ್ತು 12ನೇ ತರಗತಿಗಳನ್ನು ಆರಂಭಿಸಲು ಸಲಹೆ ಮಾಡಿತ್ತು. ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡ ಅದಕ್ಕೆ ಒಪ್ಪಿದ್ದು, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದರು.

15 ದಿನಗಳ ನಂತರ 9ನೇ ತರಗತಿ ಮತ್ತು ಮೊದಲ ಪಿಯು ತರಗತಿಗಳನ್ನು ಆರಂಭಿಸಲು ಕೂಡ ಸಲಹಾ ಮಂಡಳಿ ವರದಿಯಲ್ಲಿ ಹೇಳಿದ್ದರು. ಆ ಬಗ್ಗೆ ಮುಖ್ಯಮಂತ್ರಿ ಈಗಲೇ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.
ಕೊರೊನಾ ಲಾಕ್ಡೌನ್ ಬಳಿಕ ಕಳೆದ 9 ತಿಂಗಳಿಂದ ಶಾಲೆ ಸ್ಥಗಿತಗೊಂಡಿತ್ತು. ಈ ನಡುವೆ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆದಿತ್ತು. ಅದು ಬಿಟ್ಟರೆ ಶಾಲೆ ಸಂಪೂರ್ಣವಾಗಿ ಸ್ಥಗಿತಗೊಂಡು ವಿದ್ಯಾರ್ಥಿಗಳಿಗೂ ಶಿಕ್ಷಣದ ಬಗ್ಗೆ ಆಸಕ್ತಿಯನ್ನೇ ಕಳಕೊಂಡಿದ್ದರು. ಇದೀಗ ಮತ್ತೆ ಶಾಲೆ ಆರಂಭಿಸುವುದರೊಂದಿಗೆ ಕೊರೊನಾ ಬಳಿಕ ವಿದ್ಯಾರ್ಥಿಗಳು ಮತ್ತೆ ಶಾಲೆಯ ಹಾದಿ ಹಿಡಿಯಲಿದ್ದಾರೆ. ಹಾಗಿದ್ದರೂ, ಶಾಲೆಗೆ ಆಗಮಿಸುವುದನ್ನು ಕಡ್ಡಾಯ ಮಾಡುವಂತಿಲ್ಲ ಎಂಬ ಸೂಚನೆಯನ್ನೂ ಶಿಕ್ಷಣ ಇಲಾಖೆ ಶಾಲಾಡಳಿತ ಮಂಡಳಿಗಳಿಗೆ ನೀಡಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm