ಬ್ರೇಕಿಂಗ್ ನ್ಯೂಸ್
19-12-20 03:48 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.19: ಕೊನೆಗೂ ಶಾಲೆ ಆರಂಭಿಸುವತ್ತ ದಿಟ್ಟ ಹೆಜ್ಜೆ ಇಟ್ಟಿದೆ. ಜನವರಿ 1ರಿಂದಲೇ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಆರಂಭಿಸಲು ರಾಜ್ಯ ಸರಕಾರ ಹಸಿರು ನಿಶಾನೆ ನೀಡಿದೆ.
ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಪ್ರಮುಖ ಸಚಿವರ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಶಾಲೆ ಆರಂಭಿಸಲು ನಿರ್ಧಾರ ತೆಗೆದುಕೊಂಡಿದ್ದಾಗಿ ಪ್ರಕಟಿಸಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಕೊರೊನಾ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಈ ಬಗ್ಗೆ ವರದಿ ನೀಡಿತ್ತು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಮತ್ತು ಕೊರೊನಾ ಸೋಂಕಿನ ಪ್ರಮಾಣ ತಗ್ಗಿರುವ ಕಾರಣ ಜನವರಿ ಒಂದರಿಂದಲೇ 10 ಮತ್ತು 12ನೇ ತರಗತಿಗಳನ್ನು ಆರಂಭಿಸಲು ಸಲಹೆ ಮಾಡಿತ್ತು. ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡ ಅದಕ್ಕೆ ಒಪ್ಪಿದ್ದು, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದರು.

15 ದಿನಗಳ ನಂತರ 9ನೇ ತರಗತಿ ಮತ್ತು ಮೊದಲ ಪಿಯು ತರಗತಿಗಳನ್ನು ಆರಂಭಿಸಲು ಕೂಡ ಸಲಹಾ ಮಂಡಳಿ ವರದಿಯಲ್ಲಿ ಹೇಳಿದ್ದರು. ಆ ಬಗ್ಗೆ ಮುಖ್ಯಮಂತ್ರಿ ಈಗಲೇ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.
ಕೊರೊನಾ ಲಾಕ್ಡೌನ್ ಬಳಿಕ ಕಳೆದ 9 ತಿಂಗಳಿಂದ ಶಾಲೆ ಸ್ಥಗಿತಗೊಂಡಿತ್ತು. ಈ ನಡುವೆ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆದಿತ್ತು. ಅದು ಬಿಟ್ಟರೆ ಶಾಲೆ ಸಂಪೂರ್ಣವಾಗಿ ಸ್ಥಗಿತಗೊಂಡು ವಿದ್ಯಾರ್ಥಿಗಳಿಗೂ ಶಿಕ್ಷಣದ ಬಗ್ಗೆ ಆಸಕ್ತಿಯನ್ನೇ ಕಳಕೊಂಡಿದ್ದರು. ಇದೀಗ ಮತ್ತೆ ಶಾಲೆ ಆರಂಭಿಸುವುದರೊಂದಿಗೆ ಕೊರೊನಾ ಬಳಿಕ ವಿದ್ಯಾರ್ಥಿಗಳು ಮತ್ತೆ ಶಾಲೆಯ ಹಾದಿ ಹಿಡಿಯಲಿದ್ದಾರೆ. ಹಾಗಿದ್ದರೂ, ಶಾಲೆಗೆ ಆಗಮಿಸುವುದನ್ನು ಕಡ್ಡಾಯ ಮಾಡುವಂತಿಲ್ಲ ಎಂಬ ಸೂಚನೆಯನ್ನೂ ಶಿಕ್ಷಣ ಇಲಾಖೆ ಶಾಲಾಡಳಿತ ಮಂಡಳಿಗಳಿಗೆ ನೀಡಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm