ಬ್ರೇಕಿಂಗ್ ನ್ಯೂಸ್
21-04-25 07:10 pm Bangalore Correspondent ಕರ್ನಾಟಕ
ಬೆಂಗಳೂರು, ಎ.21 : ನಾಲ್ವರು ಹಿರಿಯ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶ, ಕೇರಳ ರಾಜ್ಯದ ಒಟ್ಟು ಏಳು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಇತ್ತೀಚೆಗೆ ನ್ಯಾಯಮೂರ್ತಿಗಳ ಬಗ್ಗೆ ಆಕ್ಷೇಪ ಕೇಳಿಬಂದ ಹಿನ್ನೆಲೆಯಲ್ಲಿ ದೀರ್ಘ ಕಾಲ ಒಂದೇ ಕಡೆ ಇದ್ದ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ.
ಸುಪ್ರೀಂ ಕೋರ್ಟ್ ಕೊಲಿಜಿಯಂ ಮಾಡಿದ ಶಿಫಾರಸಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು ವರ್ಗಾವಣೆ ಆದೇಶ ಹೊರಡಿಸಿದೆ. ಹೈಕೋರ್ಟ್ ಆಡಳಿತದ ಗುಣಮಟ್ಟವನ್ನು ಬಲಪಡಿಸುವ ಉದ್ದೇಶಕ್ಕೆ ವರ್ಗಾವಣೆ ಮಾಡಲಾಗಿದೆ ಎನ್ನಲಾಗುತ್ತಿದೆ. ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅಧ್ಯಕ್ಷತೆಯಲ್ಲಿ ಏಪ್ರಿಲ್ 15 ಮತ್ತು 19 ರಂದು ನಡೆದ ಸಭೆಗಳಲ್ಲಿ ನ್ಯಾಯಾಲಯಗಳ ನ್ಯಾಯಾಧೀಶರ ವರ್ಗಾವಣೆಗೆ ಶಿಫಾರಸು ಮಾಡಲಾಗಿತ್ತು. ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿಕೆ ಪ್ರಕಾರ, ಹೈಕೋರ್ಟ್ ಆಡಳಿತ ವ್ಯವಸ್ಥೆಯ ಗುಣಮಟ್ಟವನ್ನು ಬಲಪಡಿಸುವ ಉದ್ದೇಶದಿಂದ ವರ್ಗಾವಣೆ ಮಾಡಲಾಗಿದ್ಯಂತೆ.
ಕರ್ನಾಟಕ ಹೈಕೋರ್ಟ್ನಲ್ಲಿದ್ದ ನ್ಯಾಯಾಧೀಶ ಹೇಮಂತ್ ಚಂದನ ಗೌಡರ್ ಅವರನ್ನು ಮದ್ರಾಸ್ ಹೈಕೋರ್ಟ್ಗೆ ವರ್ಗಾವಣೆ ಮಾಡಲಾಗಿದೆ. ನ್ಯಾ.ಕೃಷ್ಣನ್ ನಟರಾಜನ್ ಕರ್ನಾಟಕ ಹೈಕೋರ್ಟ್ನಿಂದ ಕೇರಳ ಹೈಕೋರ್ಟ್ಗೆ ವರ್ಗಾಯಿಸಲಾಗಿದೆ.
ನ್ಯಾ.ಎನ್.ಶ್ರೀನಿವಾಸ ಸಂಜಯ್ ಗೌಡ ಅವರನ್ನು ಕರ್ನಾಟಕ ಹೈಕೋರ್ಟ್ನಿಂದ ಗುಜರಾತ್ ಹೈಕೋರ್ಟಿಗೆ ವರ್ಗಾವಣೆ ಮಾಡಲಾಗಿದೆ. ನ್ಯಾ.ಕೃಷ್ಣ ದೀಕ್ಷಿತ್ ಅವರನ್ನು ಕರ್ನಾಟಕ ಹೈಕೋರ್ಟ್ನಿಂದ ಒಡಿಶಾ ಹೈಕೋರ್ಟ್ಗೆ ವರ್ಗಾಯಿಸಲಾಗಿದೆ.
ತೆಲಂಗಾಣ ಹೈಕೋರ್ಟ್ನಲ್ಲಿದ್ದ ನ್ಯಾ.ಪೆರುಗು ಶ್ರೀಸುಧಾ ಅವರನ್ನು ಕರ್ನಾಟಕ ಹೈಕೋರ್ಟಿಗೆ ವರ್ಗಾವಣೆ ಮಾಡಲಾಗಿದೆ. ನ್ಯಾ.ಕೆ.ಸುರೇಂದರ್ ಅವರನ್ನು ತೆಲಂಗಾಣ ಹೈಕೋರ್ಟ್ನಿಂದ ಮದ್ರಾಸ್ ಹೈಕೋರ್ಟ್ಗೆ ವರ್ಗಾಯಿಸಲಾಗಿದೆ.
ನ್ಯಾಯಾಧೀಶ ಡಾ.ಕೆ.ಮನ್ಮಧ ರಾವ್ ಅವರನ್ನು ಆಂಧ್ರ ಪ್ರದೇಶ ಹೈಕೋರ್ಟ್ನಿಂದ ಕರ್ನಾಟಕ ಹೈಕೋರ್ಟ್ಗೆ ವರ್ಗಾಯಿಸಿ ಆದೇಶ ಮಾಡಲಾಗಿದೆ.
The Supreme Court Collegium has recommended the transfer of four Karnataka High Court judges to other High Courts. The judges who have been recommended for transfer are Justices Krishna Dixit, K Natarajan, Hemant Chandangoudar and Sanjay Gowda.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am