ಬ್ರೇಕಿಂಗ್ ನ್ಯೂಸ್
21-04-25 07:27 pm Bangalore Correspondent ಕರ್ನಾಟಕ
ಬೆಂಗಳೂರು, ಎ.21: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರೇ ಜಾತಿಗಣತಿ ವರದಿಯ ಮೂಲಪ್ರತಿ ಇಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಸರ್ಕಾರ ಈಗ ಮಂಡಿಸುತ್ತಿರುವ ಜಾತಿ ಗಣತಿ ವರದಿಯೇ ನಕಲಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾದ ದತ್ತಾಂಶಗಳ ವರದಿ ನಕಲಿ ಎಂಬುದಕ್ಕೆ ಪುರಾವೆಯಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆಯವರು 5-10-2021ರಂದು ಸರ್ಕಾರಕ್ಕೆ ಬರದಿದ್ದ ಪತ್ರದ ಪ್ರಕಾರ ಮೂಲ ಅಥವಾ ಹಸ್ತಪ್ರತಿಯೇ ಇಲ್ಲ. ಸೀಲ್ಡ್ ಪೆಟ್ಟಿಗೆಯನ್ನು ಮಹಜರು ಮಾಡಿ ಅಧ್ಯಕ್ಷ, ಸದಸ್ಯರ ಸಮಕ್ಷಮ ತೆರೆದಾಗ ಸೀಲ್ಡ್ ಪೆಟ್ಟಿಗೆಯಲ್ಲಿಟ್ಟಿದ್ದ ಪ್ರತಿಯ ಮೇಲೆ ಸದಸ್ಯ ಕಾರ್ಯದರ್ಶಿ ಸಹಿಯೇ ಇರಲಿಲ್ಲವೆಂಬುದನ್ನು ತಿಳಿಸಿದ್ದಾರೆಂದು ಹೇಳಿದರು.
ಸರ್ಕಾರ ಈಗ ಹೇಳಲಿ. ಈ ಜಾತಿಗಣತಿ ವರದಿ ಅಸಲಿಯೇ? ಮೂಲ ವರದಿಯ ಹಸ್ತಪ್ರತಿಯೇ ಸೀಲ್ಡ್ ಪೆಟ್ಟಿಗೆಯಲ್ಲಿ ಇಲ್ಲ ಎಂದ ಮೇಲೆ ವರದಿ ಹೇಗೆ ವರ್ಜಿನಲ್ ಆಗುತ್ತದೆ? ಇದು ರಕ್ತ ಕಣ್ಣೀರು ಸಿನಿಮಾ ಎಂದು ವ್ಯಂಗ್ಯವಾಡಿದರು. ಮುಖ್ಯಮಂತ್ರಿ ತಮ್ಮ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಜಾತಿಗಣತಿ ವಿಚಾರವನ್ನು ಹೊರಗೆ ತಂದಿದ್ದಾರೆ. ಅವರು ಯಾವಾಗ ಬೇಕೋ ಆಗ ವರದಿ ನೀಡುತ್ತಾರೆ. ಇದಕ್ಕೆ ತಮ್ಮೊಂದಿಗೆ ನಾಟಕ ಕಂಪನಿಯನ್ನು ಇಟ್ಟುಕೊಂಡಿದ್ದಾರೆ ಎಂದು ಟೀಕಿಸಿದರು.
ಆಯೋಗದ ಅಧ್ಯಕ್ಷರೇ ವರದಿಯ ಮೂಲಪ್ರತಿ ಇಲ್ಲ ಎಂದಿದ್ದಾರೆ. ಅವರು ಸಮೀಕ್ಷೆ ಮಾಡಿದ್ದು 6 ಕೋಟಿ ಜನರನ್ನು. ಉಳಿದ ಒಂದು ಕೋಟಿ ಜನರಿಗೆ ನಾಮವೇ? ಎಂದು ಪ್ರಶ್ನಿಸಿದ ಅವರು, ಜಾತಿಗಣತಿಯ ವರ್ಜಿನಲ್ ಪ್ರತಿ ಸಿದ್ದರಾಮಯ್ಯನವರ ಮನೆಯಲ್ಲಿದೆ. ಈಗ ಮಂಡಿಸಿರುವ ವರದಿ ನಕಲಿ ಎಂದು ಆರೋಪಿಸಿದರು.
ಸಮೀಕ್ಷೆ ನಡೆಸಿದ ಮೂಲ ವರದಿ ಪ್ರತಿ ಕಾಣೆಯಾಗಿದ್ದರ ಬಗ್ಗೆ ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಒಳಪಡಿಸಬೇಕು. ಸಮೀಕ್ಷೆಯ ದಾಖಲೆಗಳು, 165 ಕೋಟಿ ರೂ. ಖರ್ಚು ಮಾಡಿದ್ದು ಹೇಗೆಂಬುದು? ಈ ತನಿಖೆಯ ವ್ಯಾಪ್ತಿಗೆ ತರಬೇಕು. ನಕಲಿ ವರದಿಯನ್ನೇ ಹಲವು ಸಚಿವರು ವೈಜ್ಞಾನಿಕ, ನಿಖರವೆಂದು ಹೇಳಿರುವುದು ಹಾಸ್ಯಾಸ್ಪದವೆಂದು ವ್ಯಂಗ್ಯವಾಡಿದರು.
Terming the present caste census report as “fake” since the original copy is reportedly missing, Leader of Opposition in the Assembly R. Ashok on Sunday demanded a judicial probe into the episode of the original copy missing from the Karnataka State Commission for Backward Classes.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm