ಬ್ರೇಕಿಂಗ್ ನ್ಯೂಸ್
22-04-25 01:00 pm Bangalore Correspondent ಕರ್ನಾಟಕ
ಬೆಂಗಳೂರು, ಎ.22 : ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ಭಾರೀ ಆಕ್ರೋಶಕ್ಕೆ ಗುರಿಯಾಗಿ ತೀವ್ರ ವಿವಾದಕ್ಕೆ ತಿರುಗಿದೆ. ಇದರ ಬೆನ್ನಲ್ಲೇ ಆಕ್ರೋಶದ ಕಾವನ್ನು ಕಡಿಮೆಗೊಳಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳ ಕ್ರಮಕ್ಕೆ ರಾಜ್ಯ ಸರ್ಕಾರವೇ ತೀವ್ರ ಖಂಡನೆ ವ್ಯಕ್ತಪಡಿಸಿದೆ.
ವಿವಾದ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿ.ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಕ್ರಮ ನಿಯಮ ಬಾಹಿರವಾದುದ್ದು. ಪರೀಕ್ಷೆಯಲ್ಲಿ ಅಕ್ರಮ ನಡೆಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ ಮಾತ್ರವೇ ಕ್ರಮ ಕೈಗೊಳ್ಳಬೇಕು, ಅದು ಬಿಟ್ಟು ಅನವಶ್ಯಕವಾಗಿ ಇತರರ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾದ ನಿಯಮ ಹೇರಿಕೆ ಮಾಡಬಾರದು. ಇಂಥದ್ದನ್ನು ನಾವು ಸಹಿಸುವುದಿಲ್ಲ. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇದೇ ವೇಳೆ ರೋಹಿತ್ ವೆಮುಲಾ ಕಾಯ್ದೆ ಕುರಿತು ಮಾತನಾಡಿದ ಅವರು, ಕಾಯ್ದೆಯ ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಲಾಗಿದೆ, ಈ ಬಗ್ಗೆ ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದೇನೆ. ಸಾಧ್ಯತೆಗಳನ್ನು ಪರಿಶೀಲಿಸಿ ಕಾಯ್ದೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಜನಿವಾರ ವಿವಾದಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರೂ ಖಂಡನೆ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಜನಿವಾರ ಕಳಚಿದ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ನೀಡಲು ಸರ್ಕಾರ ಬದ್ಧ ಎಂದು ಹೇಳಿದ್ದಾರೆ. ಧರ್ಮ ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವ ಒಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ, ಕರ್ಮ ಹಲವಾದರೂ ನಿಷ್ಠೆ ಒಂದೇ, ದೇವನೊಬ್ಬ ನಾಮ ಹಲವು. ಧರ್ಮದ ಆಚರಣೆ ವಿಚಾರದಲ್ಲಿ ಸರ್ಕಾರ ಎಂದಿಗೂ ಮಧ್ಯಪ್ರವೇಶ ಮಾಡುವುದಿಲ್ಲ. ಆಯಾ ಧರ್ಮ ಉಳಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ನಮ್ಮ ಸರ್ಕಾರ ಎಲ್ಲರನ್ನೂ ಸಾಮರಸ್ಯದಿಂದ ಒಗ್ಗೂಡಿಸಿಕೊಂಡು ಹೋಗುವ ಕೆಲಸ ಮಾಡಲಿದೆ ಎಂದು ತಿಳಿಸಿದ್ದಾರೆ.
ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯುತ್ತದೆ. ಬುಧವಾರ ಆದಿಚುಂಚನಗಿರಿ ಪಿಯು ಕಾಲೇಜು ಪರೀಕ್ಷಾ ಕೇಂದ್ರದ ಭದ್ರತಾ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯುವಂತೆ ಹೇಳಿದ್ದಾರೆ. ಈ ವೇಳೆ ವಿದ್ಯಾರ್ಥಿಯೊಬ್ಬ ಜನಿವಾರ ತೆಗೆಯಲು ನಿರಾಕರಿಸಿದರೆ, ಮತ್ತಿಬ್ಬರು ಜನಿವಾರ ತೆಗೆದು ಪರೀಕ್ಷಾ ಕೊಠಡಿ ಪ್ರವೇಶಿಸಿದ್ದರು.
Call for Reform, New Internal Reservation Policy Advocated to Address Inequities for Children of Street Sweepers and District Collectors.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm