ಬ್ರೇಕಿಂಗ್ ನ್ಯೂಸ್
23-04-25 01:06 pm Bangalore Correspondent ಕರ್ನಾಟಕ
ಬೆಂಗಳೂರು, ಎ.23 : ಸ್ಪೀಕರ್ ಯು.ಟಿ ಖಾದರ್ ಅವರ ಧರ್ಮದ ಹೆಸರೆತ್ತಿ ಆಕ್ಷೇಪ ಸೂಚಿಸಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ ಶಾಸಕರು ಹಕ್ಕುಚ್ಯುತಿ ಮಂಡಿಸಲು ದೂರು ನೀಡಿದ್ದು, ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಭೀತಿ ಕಾಡುವಂತಾಗಿದೆ.
ಸ್ಪೀಕರ್ ಖಾದರ್ ಇತ್ತೀಚೆಗೆ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದರು. ಈ ಅಮಾನತು ಆವೇಶವನ್ನು ಪ್ರಶ್ನಿಸಿ ಖಾಸಗಿ ಚಾನೆಲ್ ಒಂದಕ್ಕೆ ಪ್ರತಿಕ್ರಿಯೆ ನೀಡಿದ ಸಂದರ್ಭದಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಸ್ಪೀಕರ್ ಯುಟಿ ಖಾದರ್ ಅವರ ಧರ್ಮದ ಬಗ್ಗೆ ಆಕ್ಷೇಪ ಎತ್ತಿದ್ದರು. ಹೀಗಾಗಿ ಹರೀಶ್ ಪೂಂಜಾ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕರು ಹಕ್ಕುಚ್ಯುತಿ ಮಂಡಿಸಲು ಹಕ್ಕು ಬಾಧ್ಯತಾ ಸಮಿತಿ ಅಧ್ಯಕ್ಷರಿಗೆ ದೂರು ನೀಡಿದ್ದಾರೆ.
ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ಣ ಸೇರಿ ಕೆಲ ಶಾಸಕರು ಹರೀಶ್ ಪೂಂಜಾ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ದೂರು ನೀಡಿದ್ದಾರೆ. ಶಾಸಕ ಹರೀಶ್ ಪೂಂಜಾ ಅವರು ಸ್ಪೀಕರ್ ಧರ್ಮದ ವಿಚಾರ ಪ್ರಸ್ತಾಪಿಸಿದ್ದಾರೆ. ಆದ್ದರಿಂದ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಮನವಿ ಮಾಡಲಾಗಿದೆ. ಹಕ್ಕು ಭಾಧ್ಯತಾ ಸಮಿತಿ ಅಧ್ಯಕ್ಷ ಮಹಾಂತೇಶ ಕೌಜಲಗಿ ಅವರು ಈ ದೂರನ್ನು ಪರಿಶೀಲನೆ ನಡೆಸಲಿದ್ದಾರೆ.
ಸ್ಪೀಕರ್ ಯು.ಟಿ ಖಾದರ್ ವಿರುದ್ಧದ ವಿಚಾರ ಆಗಿರೋದ್ರಿಂದ ಈ ದೂರನ್ನು ಹಕ್ಕು ಭಾದ್ಯತೆ ಸಮಿತಿ ಸಭಾಧ್ಯಕ್ಷ ಯು.ಟಿ ಖಾದರ್ಗೆ ರವಾನೆ ಮಾಡುವ ಸಾಧ್ಯತೆ ಇದೆ. ಶಾಸಕ ಹರೀಶ್ ಪೂಂಜಾ ಪ್ರಕರಣದಲ್ಲಿ ಸ್ಪೀಕರ್ ಏನು ಕ್ರಮ ಕೈಗೊಳ್ಳುತ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ.
Congress lawmakers, led by Government Chief Whip Ashok Pattan, on Tuesday lodged a breach-of-privilege complaint against BJP’s Belthangady MLA Harish Poonja for allegedly disrespecting Speaker U T Khader.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am