ಬ್ರೇಕಿಂಗ್ ನ್ಯೂಸ್
23-04-25 01:06 pm Bangalore Correspondent ಕರ್ನಾಟಕ
ಬೆಂಗಳೂರು, ಎ.23 : ಸ್ಪೀಕರ್ ಯು.ಟಿ ಖಾದರ್ ಅವರ ಧರ್ಮದ ಹೆಸರೆತ್ತಿ ಆಕ್ಷೇಪ ಸೂಚಿಸಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ ಶಾಸಕರು ಹಕ್ಕುಚ್ಯುತಿ ಮಂಡಿಸಲು ದೂರು ನೀಡಿದ್ದು, ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಭೀತಿ ಕಾಡುವಂತಾಗಿದೆ.
ಸ್ಪೀಕರ್ ಖಾದರ್ ಇತ್ತೀಚೆಗೆ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದರು. ಈ ಅಮಾನತು ಆವೇಶವನ್ನು ಪ್ರಶ್ನಿಸಿ ಖಾಸಗಿ ಚಾನೆಲ್ ಒಂದಕ್ಕೆ ಪ್ರತಿಕ್ರಿಯೆ ನೀಡಿದ ಸಂದರ್ಭದಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಸ್ಪೀಕರ್ ಯುಟಿ ಖಾದರ್ ಅವರ ಧರ್ಮದ ಬಗ್ಗೆ ಆಕ್ಷೇಪ ಎತ್ತಿದ್ದರು. ಹೀಗಾಗಿ ಹರೀಶ್ ಪೂಂಜಾ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕರು ಹಕ್ಕುಚ್ಯುತಿ ಮಂಡಿಸಲು ಹಕ್ಕು ಬಾಧ್ಯತಾ ಸಮಿತಿ ಅಧ್ಯಕ್ಷರಿಗೆ ದೂರು ನೀಡಿದ್ದಾರೆ.
ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ಣ ಸೇರಿ ಕೆಲ ಶಾಸಕರು ಹರೀಶ್ ಪೂಂಜಾ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ದೂರು ನೀಡಿದ್ದಾರೆ. ಶಾಸಕ ಹರೀಶ್ ಪೂಂಜಾ ಅವರು ಸ್ಪೀಕರ್ ಧರ್ಮದ ವಿಚಾರ ಪ್ರಸ್ತಾಪಿಸಿದ್ದಾರೆ. ಆದ್ದರಿಂದ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಮನವಿ ಮಾಡಲಾಗಿದೆ. ಹಕ್ಕು ಭಾಧ್ಯತಾ ಸಮಿತಿ ಅಧ್ಯಕ್ಷ ಮಹಾಂತೇಶ ಕೌಜಲಗಿ ಅವರು ಈ ದೂರನ್ನು ಪರಿಶೀಲನೆ ನಡೆಸಲಿದ್ದಾರೆ.
ಸ್ಪೀಕರ್ ಯು.ಟಿ ಖಾದರ್ ವಿರುದ್ಧದ ವಿಚಾರ ಆಗಿರೋದ್ರಿಂದ ಈ ದೂರನ್ನು ಹಕ್ಕು ಭಾದ್ಯತೆ ಸಮಿತಿ ಸಭಾಧ್ಯಕ್ಷ ಯು.ಟಿ ಖಾದರ್ಗೆ ರವಾನೆ ಮಾಡುವ ಸಾಧ್ಯತೆ ಇದೆ. ಶಾಸಕ ಹರೀಶ್ ಪೂಂಜಾ ಪ್ರಕರಣದಲ್ಲಿ ಸ್ಪೀಕರ್ ಏನು ಕ್ರಮ ಕೈಗೊಳ್ಳುತ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ.
Congress lawmakers, led by Government Chief Whip Ashok Pattan, on Tuesday lodged a breach-of-privilege complaint against BJP’s Belthangady MLA Harish Poonja for allegedly disrespecting Speaker U T Khader.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am