ಬ್ರೇಕಿಂಗ್ ನ್ಯೂಸ್
19-12-20 04:04 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.19: ಹೋರಾಟದ ಹೆಸರಿನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಅಕ್ರಮ ಆಸ್ತಿ ಮಾಡಿದ್ದಾರೆ. ಸರಕಾರಗಳನ್ನು ಬ್ಲಾಕ್ ಮೇಲ್ ಮಾಡಿಸಿ, ಐಷಾರಾಮಿ ಕಾರು, ಬಂಗಲೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸರಕಾರ ತನಿಖೆ ನಡೆಸಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಆಗ್ರಹಿಸಿದ್ದಾರೆ.
ಕೋಡಿಹಳ್ಳಿ ನಕಲಿ ರೈತ ಹೋರಾಟಗಾರ. ಹಸಿರು ಶಾಲು ಹಾಕಿಕೊಂಡು ರೈತರನ್ನು ವಂಚಿಸುವ ದಲ್ಲಾಳಿ. ಸಿದ್ದರಾಮಯ್ಯ, ಕುಮಾರಸ್ವಾಮಿ ಸರಕಾರ ಇದ್ದಾಗ ಮೈಸೂರು, ಮಂಡ್ಯದಲ್ಲಿ ರೈತರು ಸಾವಿಗೆ ಶರಣಾದಾಗ, ಈ ರೈತ ನಾಯಕ ತುಟಿಗೆ ಬೀಗ ಹಾಕಿಕೊಂಡಿದ್ದ. ಇವನ ಹೆಸರಿನಲ್ಲಿ ಹಿಂದೆ ಎರಡು ಎಕರೆ ಆಸ್ತಿ ಇದ್ದದ್ದು ಈಗ ಕೋಟ್ಯಂತರ ಆಸ್ತಿ ಮಾಡಿದ್ದಾನೆ. ಅದು ಎಲ್ಲಿಂದ ಬಂತು ಎನ್ನೋದನ್ನು ರಾಜ್ಯದ ಜನರಿಗೆ ಹೇಳಬಹುದಾ..? ಬೆಂಗಳೂರಿನಲ್ಲಿ ಬಂಗಲೆ ಕಟ್ಟಿಕೊಂಡು ವಾಸ್ತವ್ಯ ಹೂಡಿರುವ ನೀನು ಯಾವ ಸೀಮೆಯ ರೈತ ನಾಯಕ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಈವರೆಗೆ ರೈತರಿಗೆ ದ್ರೋಹ ಮಾಡಿದ್ದೀಯಾ.. ಈಗ ಸಾರಿಗೆ ನೌಕರರ ಜೊತೆ ಸೇರಿ ಸರಕಾರದ ವಿರುದ್ಧ ಎತ್ತಿಕಟ್ಟುತ್ತೀಯಾ.. ನಾಲ್ಕು ದಿನ ಬಸ್ ಸಂಚಾರ ಸ್ಥಗಿತಗೊಳಿಸಿ ರಾಜ್ಯದ ಜನರಿಗೆ ಆಗಿರುವ ನಷ್ಟಕ್ಕೆ ಈತನೇ ಕಾರಣ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಇರುವುದಕ್ಕೆ ಈತ ಕಾಂಗ್ರೆಸಿನವರ ಜೊತೆ ಸೇರಿ ರೈತರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾನೆ ಎಂದು ಮೂದಲಿಸಿದರು.

200 ಜನರಿಗೆ ಮೋಸ ಮಾಡಿ ಅಕ್ರಮ ಆಸ್ತಿ
ಬೆಂಗಳೂರು ನಗರದ ಆರ್ ಪಿಸಿ ಬಡಾವಣೆಯಲ್ಲಿ ಮನೆ ನಿರ್ಮಿಸಿಕೊಡುವುದಾಗಿ ಹೇಳಿ 2012ರಲ್ಲಿ 200ಕ್ಕಿಂತಲೂ ಹೆಚ್ಚು ಮಂದಿಗೆ ಮೋಸ ಮಾಡಿದ್ದೀಯಾ.. ಪ್ರತಿ ಕುಟುಂಬದಿಂದ 3ರಿಂದ 6 ಲಕ್ಷ ರೂ. ಪಡೆದು ಮೋಸ ಮಾಡಿದ್ದಾನೆ. ಭೈರಯ್ಯ ಎಂಬವರಿಂದ ಆರು ಲಕ್ಷ ರೂ. ಪಡೆದು ಮೋಸ ಆಗಿರುವ ಬಗ್ಗೆ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗ ಸಿದ್ದರಾಮಯ್ಯ ಸರಕಾರ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬೆಂಬಲಿಸಿತ್ತು. ಹಣ ಕೇಳಿದ ಭೈರಯ್ಯ ವಿರುದ್ಧ ಗೂಂಡಾಗಿರಿ ನಡೆಸಿದ್ದರು. ಆಬಳಿಕ ಬೈರಯ್ಯರಿಗೆ 1.50 ಲಕ್ಷ ರೂ. ಕೊಟ್ಟಿದ್ದ. ಹೀಗೆ 200 ಮಂದಿಯ ಹಣ ಪಡೆದು ಮೋಸ ಮಾಡಿದ್ದಾನೆ ಎಂದು ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದ್ದಾರೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm