ಬ್ರೇಕಿಂಗ್ ನ್ಯೂಸ್
19-12-20 04:04 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.19: ಹೋರಾಟದ ಹೆಸರಿನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಅಕ್ರಮ ಆಸ್ತಿ ಮಾಡಿದ್ದಾರೆ. ಸರಕಾರಗಳನ್ನು ಬ್ಲಾಕ್ ಮೇಲ್ ಮಾಡಿಸಿ, ಐಷಾರಾಮಿ ಕಾರು, ಬಂಗಲೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸರಕಾರ ತನಿಖೆ ನಡೆಸಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಆಗ್ರಹಿಸಿದ್ದಾರೆ.
ಕೋಡಿಹಳ್ಳಿ ನಕಲಿ ರೈತ ಹೋರಾಟಗಾರ. ಹಸಿರು ಶಾಲು ಹಾಕಿಕೊಂಡು ರೈತರನ್ನು ವಂಚಿಸುವ ದಲ್ಲಾಳಿ. ಸಿದ್ದರಾಮಯ್ಯ, ಕುಮಾರಸ್ವಾಮಿ ಸರಕಾರ ಇದ್ದಾಗ ಮೈಸೂರು, ಮಂಡ್ಯದಲ್ಲಿ ರೈತರು ಸಾವಿಗೆ ಶರಣಾದಾಗ, ಈ ರೈತ ನಾಯಕ ತುಟಿಗೆ ಬೀಗ ಹಾಕಿಕೊಂಡಿದ್ದ. ಇವನ ಹೆಸರಿನಲ್ಲಿ ಹಿಂದೆ ಎರಡು ಎಕರೆ ಆಸ್ತಿ ಇದ್ದದ್ದು ಈಗ ಕೋಟ್ಯಂತರ ಆಸ್ತಿ ಮಾಡಿದ್ದಾನೆ. ಅದು ಎಲ್ಲಿಂದ ಬಂತು ಎನ್ನೋದನ್ನು ರಾಜ್ಯದ ಜನರಿಗೆ ಹೇಳಬಹುದಾ..? ಬೆಂಗಳೂರಿನಲ್ಲಿ ಬಂಗಲೆ ಕಟ್ಟಿಕೊಂಡು ವಾಸ್ತವ್ಯ ಹೂಡಿರುವ ನೀನು ಯಾವ ಸೀಮೆಯ ರೈತ ನಾಯಕ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಈವರೆಗೆ ರೈತರಿಗೆ ದ್ರೋಹ ಮಾಡಿದ್ದೀಯಾ.. ಈಗ ಸಾರಿಗೆ ನೌಕರರ ಜೊತೆ ಸೇರಿ ಸರಕಾರದ ವಿರುದ್ಧ ಎತ್ತಿಕಟ್ಟುತ್ತೀಯಾ.. ನಾಲ್ಕು ದಿನ ಬಸ್ ಸಂಚಾರ ಸ್ಥಗಿತಗೊಳಿಸಿ ರಾಜ್ಯದ ಜನರಿಗೆ ಆಗಿರುವ ನಷ್ಟಕ್ಕೆ ಈತನೇ ಕಾರಣ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಇರುವುದಕ್ಕೆ ಈತ ಕಾಂಗ್ರೆಸಿನವರ ಜೊತೆ ಸೇರಿ ರೈತರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾನೆ ಎಂದು ಮೂದಲಿಸಿದರು.
200 ಜನರಿಗೆ ಮೋಸ ಮಾಡಿ ಅಕ್ರಮ ಆಸ್ತಿ
ಬೆಂಗಳೂರು ನಗರದ ಆರ್ ಪಿಸಿ ಬಡಾವಣೆಯಲ್ಲಿ ಮನೆ ನಿರ್ಮಿಸಿಕೊಡುವುದಾಗಿ ಹೇಳಿ 2012ರಲ್ಲಿ 200ಕ್ಕಿಂತಲೂ ಹೆಚ್ಚು ಮಂದಿಗೆ ಮೋಸ ಮಾಡಿದ್ದೀಯಾ.. ಪ್ರತಿ ಕುಟುಂಬದಿಂದ 3ರಿಂದ 6 ಲಕ್ಷ ರೂ. ಪಡೆದು ಮೋಸ ಮಾಡಿದ್ದಾನೆ. ಭೈರಯ್ಯ ಎಂಬವರಿಂದ ಆರು ಲಕ್ಷ ರೂ. ಪಡೆದು ಮೋಸ ಆಗಿರುವ ಬಗ್ಗೆ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗ ಸಿದ್ದರಾಮಯ್ಯ ಸರಕಾರ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬೆಂಬಲಿಸಿತ್ತು. ಹಣ ಕೇಳಿದ ಭೈರಯ್ಯ ವಿರುದ್ಧ ಗೂಂಡಾಗಿರಿ ನಡೆಸಿದ್ದರು. ಆಬಳಿಕ ಬೈರಯ್ಯರಿಗೆ 1.50 ಲಕ್ಷ ರೂ. ಕೊಟ್ಟಿದ್ದ. ಹೀಗೆ 200 ಮಂದಿಯ ಹಣ ಪಡೆದು ಮೋಸ ಮಾಡಿದ್ದಾನೆ ಎಂದು ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದ್ದಾರೆ.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm