ಬ್ರೇಕಿಂಗ್ ನ್ಯೂಸ್
25-04-25 07:30 pm HK News Desk ಕರ್ನಾಟಕ
ಮೈಸೂರು, ಎ.25 : ಪಹಲ್ಗಾಮ್ನಲ್ಲಿ ಮುಸ್ಲಿಮರೇ ಬಹಳಷ್ಟು ಜನರನ್ನು ಕಾಪಾಡಿದ್ದಾರೆ. ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ. ಸುಮ್ಮನೆ ಮುಸ್ಲಿಮರು, ಮುಸ್ಲಿಮರು ಎಂದು ಬಿಜೆಪಿಗರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ದೇಶದ ಜನರ ರಕ್ತದ ಮೇಲೆ ಅಧಿಕಾರ ಹಿಡಿಯುವುದು ಬಿಜೆಪಿಯ ಚಟವಾಗಿದೆ. ಘಟನೆ ನಡೆದ ದಿನ ಅಲ್ಲಿ ಸೇನೆ ಮತ್ತು ಪೊಲೀಸ್ ಯಾಕೆ ಇರಲಿಲ್ಲ. ಇದರ ಹಿಂದೆ ಬೇರೆ ಏನೋ ಉದ್ದೇಶವಿದೆ.
ಈ ಬಗ್ಗೆ ಅಂತಾರಾಷ್ಟ್ರೀಯ ಏಜೆನ್ಸಿ ಮೂಲಕ ತನಿಖೆ ಆಗಬೇಕು. ಹಿಂದೂ, ಮುಸ್ಲಿಮರ ನಡುವೆ ಕಂದಕ ಉಂಟು ಮಾಡಿ ಚುನಾವಣೆ ಗೆಲ್ಲುವುದೇ ಬಿಜೆಪಿಯ ಉದ್ದೇಶ. ಮುಸ್ಲಿಮರೆಲ್ಲಾ ಭಯೋತ್ಪಾದಕರು ಎಂದು ಬಿಂಬಿಸುವ ಕೆಲಸ ಶುರುವಾಗಿದೆ ಎಂದು ಕಿಡಿಕಾರಿದರು.
ನಾಲ್ಕು ಮರಗಳಿಗೆ ಗುಂಡು ಹಾರಿಸಿ, ಅದನ್ನೇ ಸರ್ಜಿಕಲ್ ಸ್ಟ್ರೈಕ್ ಎಂದು ಬಿಜೆಪಿ ಬಿಂಬಿಸಿತ್ತು, ಈ ರೀತಿ ಮಾಡಿ ಜನರನ್ನು ಮೂರ್ಖರನ್ನಾಗಿಸುವುದು ಬಿಜೆಪಿಯವರ ಕೆಲಸ ಎಂದು ಲಕ್ಷ್ಮಣ್ ಹರಿಹಾಯ್ದಿದ್ದಾರೆ.
ಪಹಲ್ಗಾಮ್ ಸ್ಫೋಟದ ಬಳಿಕ ಅಲ್ಲಿ ಕೊಲ್ಲಲ್ಪಟ್ಟ ಪುರುಷರ ಪತ್ನಿಯರೇ ಈ ರೀತಿಯ ಹೇಳಿಕೆ ನೀಡಿದ್ದರು. ನಮ್ಮನ್ನು ಹಿಂದುವಾ ಎಂದು ಐಡಿ ಕೇಳಿ ತಲೆಗೆ ಗುಂಡಿಟ್ಟು ಕೊಂದಿದ್ದರು ಎಂದು ಘಟನೆ ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಆದರೆ ಕಾಂಗ್ರೆಸ್ ನಾಯಕ ಲಕ್ಷ್ಮಣ್ ಅದನ್ನು ಲೆಕ್ಕಿಸದೆ ಬಿಜೆಪಿ ಸೃಷ್ಟಿ ಎಂದು ಹೇಳಿ ಉಗ್ರರ ಪರ ವಹಿಸಿದ್ದಾರೆ.
Congress Spokesperson Laxman Denies Victims Claims, Accuses BJP of Misinformation Over Kashmir Attack.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm