ಬ್ರೇಕಿಂಗ್ ನ್ಯೂಸ್
25-04-25 07:32 pm Bangalore Correspondent ಕರ್ನಾಟಕ
ಬೆಂಗಳೂರು, ಎ.25 : ಇಸ್ರೋ ಮಾಜಿ ಅಧ್ಯಕ್ಷ ಮತ್ತು ದೇಶದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಕೆ. ಕಸ್ತೂರಿರಂಗನ್(84) ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಅಸೌಖ್ಯದಲ್ಲಿದ್ದ ಕಸ್ತೂರಿರಂಗನ್ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದು ಏಪ್ರಿಲ್ 27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಸ್ತೂರಿರಂಗನ್ ಅವರು ಈ ಹಿಂದೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 2003-09ರ ಅವಧಿಯಲ್ಲಿ ರಾಜ್ಯಸಭೆ ಸದಸ್ಯರಾಗಿ ಮತ್ತು ಭಾರತದ ಯೋಜನಾ ಆಯೋಗದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಬಾಹ್ಯಾಕಾಶ ಕ್ಷೇತ್ರದಲ್ಲಿನ ಅತ್ಯುತ್ತಮ ಕೊಡುಗೆಗಳಿಗಾಗಿ ಕಸ್ತೂರಿರಂಗನ್ ಅವರಿಗೆ ಎಂಜಿನಿಯರಿಂಗ್ನಲ್ಲಿ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ, ಏರೋಸ್ಪೇಸ್ನಲ್ಲಿ ಡಾ. ವಿಕ್ರಮ್ ಸಾರಾಭಾಯ್ ಪ್ರೇರಿತ್ ಪ್ರಶಸ್ತಿ, ಖಗೋಳಶಾಸ್ತ್ರದಲ್ಲಿ ಎಂಪಿ ಬಿರ್ಲಾ ಸ್ಮಾರಕ ಪ್ರಶಸ್ತಿ, ಅನ್ವಯಿಕ ವಿಜ್ಞಾನದಲ್ಲಿ ಎಂಎಂ ಚುಗನಿ ಸ್ಮಾರಕ ಪ್ರಶಸ್ತಿ, ವಿಜ್ಞಾನದಲ್ಲಿ ಎಚ್ಕೆ ಫಿರೋದಿಯಾ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಸಂದಿವೆ. ಅಷ್ಟೇ ಅಲ್ಲದೆ, ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳು ಕೂಡ ಬಂದಿವೆ. ಖಗೋಳಶಾಸ್ತ್ರ, ಬಾಹ್ಯಾಕಾಶ ವಿಜ್ಞಾನ, ಬಾಹ್ಯಾಕಾಶ ಅಪ್ಲಿಕೇಷನ್ಸ್ಗಳ ಕ್ಷೇತ್ರಗಳಿಗೆ ಸಂಬಂಧಿಸಿ ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಕಸ್ತೂರಿರಂಗನ್ ಅವರ 200ಕ್ಕೂ ಹೆಚ್ಚು ಪ್ರಬಂಧಗಳು ಪ್ರಕಟವಾಗಿವೆ.
2013ರಲ್ಲಿ ಸಲ್ಲಿಸಲ್ಪಟ್ಟ ಪಶ್ಚಿಮ ಘಟ್ಟಗಳ ಕುರಿತಾದ ಕಸ್ತೂರಿರಂಗನ್ ವರದಿ ಅಪೂರ್ವ ಜೀವ ವೈವಿಧ್ಯಗಳ ತಾಣವಾಗಿರುವ ಪಶ್ಚಿಮ ಘಟ್ಟಗಳ ಶೇ. 37ರಷ್ಟು ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಲು ಸೂಚಿಸಿದ್ದರು. ಆದರೆ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಜನರು, ಎಸ್ಟೇಟ್ ಮಾಫಿಯಾಗಳ ವಿರೋಧದಿಂದಾಗಿ ವರದಿಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿರಲಿಲ್ಲ. ಶಿಕ್ಷಣ ವ್ಯವಸ್ಥೆಯಲ್ಲಿ ಸಮಾನತೆ ಮತ್ತು ಗುಣಮಟ್ಟ ಹೆಚ್ಚಿಸುವ ದೃಷ್ಟಿಯಿಂದ ದೇಶಾದ್ಯಂತ ಎನ್ಇಪಿ ಶಿಕ್ಷಣ ನೀತಿ ತರಲು ಪ್ರಸ್ತಾಪಿಸಿದ್ದರು.
Former Indian Space Research Organisation (Isro) chairman K Kasturirangan passed away in his Bengaluru residence on Friday. According to a statement by Isro, Kasturirangan died at 10.43 am. His body will be kept at Raman Research Institute in Bengaluru on Sunday, April 27 between 10 am and noon, for the public to pay respect.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm