ಬ್ರೇಕಿಂಗ್ ನ್ಯೂಸ್
27-04-25 07:13 pm HK News Desk ಕರ್ನಾಟಕ
ಕಲಬುರಗಿ, ಏ 27: ಕಲಬುರಗಿ ನಗರದಲ್ಲಿ ಒಟ್ಟು 9 ಜನ ಪಾಕಿಸ್ತಾನದ ಪ್ರಜೆಗಳು ಅಧಿಕೃತವಾಗಿ ವಾಸವಿದ್ದು, ಅವರಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಹಿಂತಿರುಗಲು ಸೂಚಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ತಿಳಿಸಿದ್ದಾರೆ.
ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, "ಈ 9 ಜನರಲ್ಲಿ ಇಬ್ಬರು ದೀರ್ಘಾವಧಿ ವೀಸಾ ಹೊಂದಿದ್ದು, ಉಳಿದ 7 ಜನರು ಸಂದರ್ಶಕರ ವೀಸಾ ಹೊಂದಿದ್ದಾರೆ. ಇವರು ಕಳೆದ 20 ವರ್ಷಗಳಿಂದ ಕಲಬುರಗಿಯಲ್ಲಿ ವಾಸವಾಗಿದ್ದಾರೆ. ಎಲ್ಲರಿಗೂ ನಿಯಮಾನುಸಾರ ಹಿಂತಿರುಗುವಂತೆ ಸೂಚನೆ ನೀಡಲಾಗಿದೆ" ಎಂದು ಹೇಳಿದರು.
"ವಿಸಿಟರ್ಸ್ ವೀಸಾ ಹೊಂದಿದ ಏಳು ಜನರಲ್ಲಿ ಒಬ್ಬರು ಮಹಿಳೆ ಅನುಮತಿ ಪಡೆದು ಅಮೆರಿಕಾಕ್ಕೆ ತೆರಳಿದ್ದಾರೆ. ಉಳಿದ ಆರು ಜನರಲ್ಲಿ ಮೂವರು ಪುರುಷರು ಮತ್ತು ಮೂವರು ಮಹಿಳೆಯರು ಇದ್ದಾರೆ" ಎಂದು ಮಾಹಿತಿ ನೀಡಿದರು.
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪ್ರವಾಸಿ ತಾಣ ಪಹಲ್ಗಾಮ್ನಲ್ಲಿ ಭಯೋತ್ಪಾದಕರು 26 ಪ್ರವಾಸಿಗರನ್ನು ಕೊಂದಿದ್ದರು. ಇದರಿಂದ ಭಾರತ ಸರ್ಕಾರವು ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆ ರದ್ದುಗೊಳಿಸಿ ಪಾಕ್ಗೆ ಕಠಿಣ ಸಂದೇಶ ರವಾನಿಸಿದೆ. ಹೀಗಾಗಿ ಭಾರತದಲ್ಲಿರುವ ಪಾಕ್ ಪ್ರಜೆಗಳಿಗೆ ವಾಪಸ್ ತೆರಳಲು ಗಡುವು ನೀಡಲಾಗಿದೆ. ಕರ್ನಾಟಕದ ಮೈಸೂರು, ಉತ್ತರ ಕನ್ನಡ, ತುಮಕೂರು ಮತ್ತು ದಾವಣಗೆರೆ ಮುಂತಾದ ಕಡೆಗಳಲ್ಲಿ ಒಟ್ಟು 92 ಜನ ಪಾಕ್ ಪ್ರಜೆಗಳು ವಾಸವಿದ್ದಾರೆ ಎಂದು ಆಯಾ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಕಾರ್ಯಾಚರಣೆಯಲ್ಲಿ ತಿಳಿದು ಬಂದಿದೆ.
ಪ್ರಾದೇಶಿಕ ನೋಂದಣಿ ಕೇಂದ್ರ (FRRO) ದಲ್ಲಿ ನೋಂದಾಯಿಸಲ್ಪಟ್ಟಿರುವ ಪಾಕ್ ಪ್ರಜೆಗಳ ಕುರಿತು ಈಗಾಗಲೇ ಆಯಾ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗಳಿಗೆ ಮಾಹಿತಿ ನೀಡಲಾಗಿದೆ. ಅದರನ್ವಯ ಆಯಾ ಜಿಲ್ಲೆಗಳಲ್ಲಿರುವ ಪಾಕ್ ಪ್ರಜೆಗಳು ಭಾರತ ತೊರೆಯಬೇಕಿದೆ. ನೋಂದಾಯಿಸಲ್ಪಡದ ಹಾಗೂ ಅನಧಿಕೃತವಾಗಿ ನೆಲೆಸಿರುವವರನ್ನ ಸ್ಥಳಿಯ ಪೊಲೀಸರು ಪತ್ತೆಹಚ್ಚಿ ಬಂಧಿಸಿ ಬಂಧನ ಕೇಂದ್ರದಲ್ಲಿರಿಸುತ್ತಾರೆ. ನಂತರ ರಾಜ್ಯ ಗೃಹ ಇಲಾಖೆಯಿಂದ ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಲಾಗುತ್ತದೆ.
ಕೇಂದ್ರ ಗೃಹ ಸಚಿವಾಲಯದ ಮೂಲಕ ಭಾರತದಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗುತ್ತದೆ. ಬಳಿಕ ರಾಯಭಾರ ಕಚೇರಿಯ ಅಧಿಕಾರಿಗಳು ವೆರಿಫಿಕೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ ತಮ್ಮ ಪ್ರಜೆಗಳನ್ನ ವಾಪಾಸ್ ಕಳಿಸಬೇಕಾಗುತ್ತದೆ.
9 Pakistani Nationals Residing in Kalaburagi for 20 Years, Police Commissioner Sharanappa Issues Deportation Notice.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am