ಬ್ರೇಕಿಂಗ್ ನ್ಯೂಸ್
27-04-25 07:13 pm HK News Desk ಕರ್ನಾಟಕ
ಕಲಬುರಗಿ, ಏ 27: ಕಲಬುರಗಿ ನಗರದಲ್ಲಿ ಒಟ್ಟು 9 ಜನ ಪಾಕಿಸ್ತಾನದ ಪ್ರಜೆಗಳು ಅಧಿಕೃತವಾಗಿ ವಾಸವಿದ್ದು, ಅವರಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಹಿಂತಿರುಗಲು ಸೂಚಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ತಿಳಿಸಿದ್ದಾರೆ.
ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, "ಈ 9 ಜನರಲ್ಲಿ ಇಬ್ಬರು ದೀರ್ಘಾವಧಿ ವೀಸಾ ಹೊಂದಿದ್ದು, ಉಳಿದ 7 ಜನರು ಸಂದರ್ಶಕರ ವೀಸಾ ಹೊಂದಿದ್ದಾರೆ. ಇವರು ಕಳೆದ 20 ವರ್ಷಗಳಿಂದ ಕಲಬುರಗಿಯಲ್ಲಿ ವಾಸವಾಗಿದ್ದಾರೆ. ಎಲ್ಲರಿಗೂ ನಿಯಮಾನುಸಾರ ಹಿಂತಿರುಗುವಂತೆ ಸೂಚನೆ ನೀಡಲಾಗಿದೆ" ಎಂದು ಹೇಳಿದರು.
"ವಿಸಿಟರ್ಸ್ ವೀಸಾ ಹೊಂದಿದ ಏಳು ಜನರಲ್ಲಿ ಒಬ್ಬರು ಮಹಿಳೆ ಅನುಮತಿ ಪಡೆದು ಅಮೆರಿಕಾಕ್ಕೆ ತೆರಳಿದ್ದಾರೆ. ಉಳಿದ ಆರು ಜನರಲ್ಲಿ ಮೂವರು ಪುರುಷರು ಮತ್ತು ಮೂವರು ಮಹಿಳೆಯರು ಇದ್ದಾರೆ" ಎಂದು ಮಾಹಿತಿ ನೀಡಿದರು.
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪ್ರವಾಸಿ ತಾಣ ಪಹಲ್ಗಾಮ್ನಲ್ಲಿ ಭಯೋತ್ಪಾದಕರು 26 ಪ್ರವಾಸಿಗರನ್ನು ಕೊಂದಿದ್ದರು. ಇದರಿಂದ ಭಾರತ ಸರ್ಕಾರವು ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆ ರದ್ದುಗೊಳಿಸಿ ಪಾಕ್ಗೆ ಕಠಿಣ ಸಂದೇಶ ರವಾನಿಸಿದೆ. ಹೀಗಾಗಿ ಭಾರತದಲ್ಲಿರುವ ಪಾಕ್ ಪ್ರಜೆಗಳಿಗೆ ವಾಪಸ್ ತೆರಳಲು ಗಡುವು ನೀಡಲಾಗಿದೆ. ಕರ್ನಾಟಕದ ಮೈಸೂರು, ಉತ್ತರ ಕನ್ನಡ, ತುಮಕೂರು ಮತ್ತು ದಾವಣಗೆರೆ ಮುಂತಾದ ಕಡೆಗಳಲ್ಲಿ ಒಟ್ಟು 92 ಜನ ಪಾಕ್ ಪ್ರಜೆಗಳು ವಾಸವಿದ್ದಾರೆ ಎಂದು ಆಯಾ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಕಾರ್ಯಾಚರಣೆಯಲ್ಲಿ ತಿಳಿದು ಬಂದಿದೆ.
ಪ್ರಾದೇಶಿಕ ನೋಂದಣಿ ಕೇಂದ್ರ (FRRO) ದಲ್ಲಿ ನೋಂದಾಯಿಸಲ್ಪಟ್ಟಿರುವ ಪಾಕ್ ಪ್ರಜೆಗಳ ಕುರಿತು ಈಗಾಗಲೇ ಆಯಾ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗಳಿಗೆ ಮಾಹಿತಿ ನೀಡಲಾಗಿದೆ. ಅದರನ್ವಯ ಆಯಾ ಜಿಲ್ಲೆಗಳಲ್ಲಿರುವ ಪಾಕ್ ಪ್ರಜೆಗಳು ಭಾರತ ತೊರೆಯಬೇಕಿದೆ. ನೋಂದಾಯಿಸಲ್ಪಡದ ಹಾಗೂ ಅನಧಿಕೃತವಾಗಿ ನೆಲೆಸಿರುವವರನ್ನ ಸ್ಥಳಿಯ ಪೊಲೀಸರು ಪತ್ತೆಹಚ್ಚಿ ಬಂಧಿಸಿ ಬಂಧನ ಕೇಂದ್ರದಲ್ಲಿರಿಸುತ್ತಾರೆ. ನಂತರ ರಾಜ್ಯ ಗೃಹ ಇಲಾಖೆಯಿಂದ ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಲಾಗುತ್ತದೆ.
ಕೇಂದ್ರ ಗೃಹ ಸಚಿವಾಲಯದ ಮೂಲಕ ಭಾರತದಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗುತ್ತದೆ. ಬಳಿಕ ರಾಯಭಾರ ಕಚೇರಿಯ ಅಧಿಕಾರಿಗಳು ವೆರಿಫಿಕೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ ತಮ್ಮ ಪ್ರಜೆಗಳನ್ನ ವಾಪಾಸ್ ಕಳಿಸಬೇಕಾಗುತ್ತದೆ.
9 Pakistani Nationals Residing in Kalaburagi for 20 Years, Police Commissioner Sharanappa Issues Deportation Notice.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am