ಬ್ರೇಕಿಂಗ್ ನ್ಯೂಸ್
27-04-25 09:22 pm HK News Desk ಕರ್ನಾಟಕ
ಗಂಗಾವತಿ, ಏ 26: ಪಾಕಿಸ್ತಾನದ ವಿರುದ್ದ ಯುದ್ದ ಬೇಡ ಎಂದು ಹೇಳಿಕೆ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಓಲೈಕೆ ರಾಜಕೀಯದ ಕೊನೆಯ ಘಟ್ಟ ತಲುಪಿದ್ದಾರೆ. ಅವರು ಮುಂದಿನ ದಿನಗಳಲ್ಲಿ ಪಾಕಿಸ್ತಾನದಿಂದ `ದಿಲ್ ಸೇ ಪಾಕಿಸ್ತಾನ' ಪ್ರಶಸ್ತಿಗೆ ಭಾಜನರಾಗಬಹುದು ಎಂದು ಗಂಗಾವತಿ ಶಾಸಕ ಜಿ. ಜನಾರ್ದನರೆಡ್ಡಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಪಾಕಿಸ್ತಾನದೊಂದಿಗೆ ಯುದ್ಧ ಬೇಡ ಎಂದು ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರ ಹೇಳಿಕೆಗಳು ಪಾಕಿಸ್ತಾನದ ಮಾಧ್ಯಮಗಳಲ್ಲಿ ಸಿಎಂ ಸಿದ್ದರಾಮಯ್ಯ ಪರ ಸುದ್ದಿ ಪ್ರಸಾರವಾಗಿದ್ದಕ್ಕೆ ಶಾಸಕ ರೆಡ್ಡಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ (ಹಿಂದಿನ ಟ್ವಿಟ್ಟರ್) ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡುವ ಮೂಲಕ ಶಾಸಕ ಜನಾರ್ದನ ರೆಡ್ಡಿ ಪ್ರಕ್ರಿಯೆ ನೀಡಿದ್ದಾರೆ. ಯಾವ ಮುಖ್ಯಮಂತ್ರಿಯೂ ಶತ್ರು ರಾಷ್ಟ್ರದ ಹೃದಯ ಗೆದ್ದಿದ್ದಿಲ್ಲ. ಇದೀಗ ಸಿದ್ದರಾಮಯ್ಯನವರು ಪಾಕಿಸ್ತಾನದ ಹೃದಯ ಗೆದ್ದಿದ್ದಾರೆ. ಇದು ಸಿದ್ದರಾಮಯ್ಯನವರ ಓಲೈಕೆ ರಾಜಕೀಯಕ್ಕೆ ಸಂದ ಗೌರವ. ಕರ್ನಾಟಕದ ಮಾನವನ್ನು ಪಾಕಿಸ್ತಾನಕ್ಕೆ ಸಿದ್ದರಾಮಯ್ಯ ಅರ್ಪಿಸಿದ್ದಾರೆ ಎಂದು ರೆಡ್ಡಿ ಟೀಕಿಸಿದ್ದಾರೆ.
ಶತ್ರು ರಾಷ್ಟ್ರವಾದ ಪಾಕ್ ಮಾಧ್ಯಮಗಳ ಹೊಗಳಿಕೆಗೆ ಪಾತ್ರರಾದ ಸಿದ್ದರಾಮಯ್ಯಗೆ ಅಭಿನಂದನೆಗಳು ಎಂದು ಶಾಸಕ ರೆಡ್ಡಿ, ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನದಲ್ಲಿ ಪ್ರಸಾರವಾದ ಸುದ್ದಿಯ ಪೋಸ್ಟ್ ಹಾಕಿ, ಶಾಸಕ ರೆಡ್ಡಿ ಹರಿಹಾಯ್ದಿದ್ದಾರೆ.
ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ;
"ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವುದು, ಪ್ರತಿಯೊಬ್ಬ ಭಾರತೀಯರಿಗೆ ಸೂಕ್ತ ರಕ್ಷಣೆ ಕೊಡುವುದು ನಮ್ಮ ಈ ಕ್ಷಣದ ಆದ್ಯತೆಯಾಗಿದೆ. ಇದರಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ" ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಎರಡು ವರ್ಷ ಸರ್ಕಾರದ ಸಾಧನಾ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.
Siddaramaiah Wins Pakistan's Heart, MLA Janardhan Reddy Says He Deserves a 'Dil Se Pak' Award for Opposing War.
27-04-25 09:22 pm
HK News Desk
Pakistani Nationals Kalaburagi, Police Commis...
27-04-25 07:13 pm
Ex- ISRO chief, K Kasturirangan: ಎನ್ಇಪಿ ಶಿಕ್ಷ...
25-04-25 07:32 pm
ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ, ಕಾಶ್...
25-04-25 07:30 pm
ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್ ಸ...
25-04-25 06:30 pm
27-04-25 08:42 pm
HK News Desk
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
ಪಾಕ್ ಗಡಿಯಲ್ಲಿ ಯುದ್ಧ ಕಾರ್ಮೋಡ ; ಗಡಿ ಜಿಲ್ಲೆಗಳಲ್ಲ...
27-04-25 06:35 pm
ಸಿಂಧು ನದಿಯನ್ನು ತಡೆದರೆ ರಕ್ತ ಹರಿಯುತ್ತದೆ ; ಮಾಜಿ...
26-04-25 08:21 pm
Iran Blast: ಇರಾನ್ ಬಂದರಿನಲ್ಲಿ ಭಯಾನಕ ಸ್ಫೋಟ ; 4...
26-04-25 07:46 pm
27-04-25 11:09 pm
Mangalore Correspondent
Murali krishna, puttur, FIR: ಪೆಟ್ರೋಲ್ ಪಂಪ್ ವ್...
27-04-25 06:25 pm
Vhp, Mangalore, Railway Exam, Janivara: ರೈಲ್ವ...
27-04-25 05:28 pm
Harish Poonja, U T Khader, Mangalore: ಹರೀಶ್ ಪ...
27-04-25 01:00 pm
KMF Elections 2025, Belupu Deviprasad Shetty:...
26-04-25 08:03 pm
27-04-25 10:59 pm
Mangalore Correspondent
Mangalore Crime, Sexual Harrasment: ಸರ್ಕಾರಿ ಸ...
24-04-25 12:58 pm
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm