ಬ್ರೇಕಿಂಗ್ ನ್ಯೂಸ್
27-04-25 09:22 pm HK News Desk ಕರ್ನಾಟಕ
ಗಂಗಾವತಿ, ಏ 26: ಪಾಕಿಸ್ತಾನದ ವಿರುದ್ದ ಯುದ್ದ ಬೇಡ ಎಂದು ಹೇಳಿಕೆ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಓಲೈಕೆ ರಾಜಕೀಯದ ಕೊನೆಯ ಘಟ್ಟ ತಲುಪಿದ್ದಾರೆ. ಅವರು ಮುಂದಿನ ದಿನಗಳಲ್ಲಿ ಪಾಕಿಸ್ತಾನದಿಂದ `ದಿಲ್ ಸೇ ಪಾಕಿಸ್ತಾನ' ಪ್ರಶಸ್ತಿಗೆ ಭಾಜನರಾಗಬಹುದು ಎಂದು ಗಂಗಾವತಿ ಶಾಸಕ ಜಿ. ಜನಾರ್ದನರೆಡ್ಡಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಪಾಕಿಸ್ತಾನದೊಂದಿಗೆ ಯುದ್ಧ ಬೇಡ ಎಂದು ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರ ಹೇಳಿಕೆಗಳು ಪಾಕಿಸ್ತಾನದ ಮಾಧ್ಯಮಗಳಲ್ಲಿ ಸಿಎಂ ಸಿದ್ದರಾಮಯ್ಯ ಪರ ಸುದ್ದಿ ಪ್ರಸಾರವಾಗಿದ್ದಕ್ಕೆ ಶಾಸಕ ರೆಡ್ಡಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ (ಹಿಂದಿನ ಟ್ವಿಟ್ಟರ್) ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡುವ ಮೂಲಕ ಶಾಸಕ ಜನಾರ್ದನ ರೆಡ್ಡಿ ಪ್ರಕ್ರಿಯೆ ನೀಡಿದ್ದಾರೆ. ಯಾವ ಮುಖ್ಯಮಂತ್ರಿಯೂ ಶತ್ರು ರಾಷ್ಟ್ರದ ಹೃದಯ ಗೆದ್ದಿದ್ದಿಲ್ಲ. ಇದೀಗ ಸಿದ್ದರಾಮಯ್ಯನವರು ಪಾಕಿಸ್ತಾನದ ಹೃದಯ ಗೆದ್ದಿದ್ದಾರೆ. ಇದು ಸಿದ್ದರಾಮಯ್ಯನವರ ಓಲೈಕೆ ರಾಜಕೀಯಕ್ಕೆ ಸಂದ ಗೌರವ. ಕರ್ನಾಟಕದ ಮಾನವನ್ನು ಪಾಕಿಸ್ತಾನಕ್ಕೆ ಸಿದ್ದರಾಮಯ್ಯ ಅರ್ಪಿಸಿದ್ದಾರೆ ಎಂದು ರೆಡ್ಡಿ ಟೀಕಿಸಿದ್ದಾರೆ.
ಶತ್ರು ರಾಷ್ಟ್ರವಾದ ಪಾಕ್ ಮಾಧ್ಯಮಗಳ ಹೊಗಳಿಕೆಗೆ ಪಾತ್ರರಾದ ಸಿದ್ದರಾಮಯ್ಯಗೆ ಅಭಿನಂದನೆಗಳು ಎಂದು ಶಾಸಕ ರೆಡ್ಡಿ, ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನದಲ್ಲಿ ಪ್ರಸಾರವಾದ ಸುದ್ದಿಯ ಪೋಸ್ಟ್ ಹಾಕಿ, ಶಾಸಕ ರೆಡ್ಡಿ ಹರಿಹಾಯ್ದಿದ್ದಾರೆ.
ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ;
"ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವುದು, ಪ್ರತಿಯೊಬ್ಬ ಭಾರತೀಯರಿಗೆ ಸೂಕ್ತ ರಕ್ಷಣೆ ಕೊಡುವುದು ನಮ್ಮ ಈ ಕ್ಷಣದ ಆದ್ಯತೆಯಾಗಿದೆ. ಇದರಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ" ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಎರಡು ವರ್ಷ ಸರ್ಕಾರದ ಸಾಧನಾ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.
Siddaramaiah Wins Pakistan's Heart, MLA Janardhan Reddy Says He Deserves a 'Dil Se Pak' Award for Opposing War.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm