ಬ್ರೇಕಿಂಗ್ ನ್ಯೂಸ್
29-04-25 04:28 pm HK News Desk ಕರ್ನಾಟಕ
ಬೆಂಗಳೂರು, ಎ.29 : ಮಂಗಳೂರಿನಲ್ಲಿ ಗಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ವ್ಯಕ್ತಿಯೊಬ್ಬ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಕ್ಕೆ ಅಪರಿಚಿತ ವ್ಯಕ್ತಿಯ ಮೇಲೆ ಗುಂಪಿನಿಂದ ಹಲ್ಲೆ ಆಗಿರುವ ಮಾಹಿತಿ ಲಭಿಸಿದೆ. ಹಲ್ಲೆ ನಂತರ, ಆ ವ್ಯಕ್ತಿ ಸಾವಿಗೀಡಾಗಿದ್ದಾನೆ. ವ್ಯಕ್ತಿಯ ಹೆಸರು ಗೊತ್ತಾಗಿಲ್ಲ. ಹೊರ ರಾಜ್ಯದ ವ್ಯಕ್ತಿ ಇರಬೇಕೆಂದು ಮಾಹಿತಿ ಇದೆ. ಘಟನೆ ಸಂಬಂಧಿಸಿ ಪೊಲೀಸರು 10-12 ಮಂದಿಯನ್ನು ಬಂಧಿಸಿದ್ದಾರೆ ಎಂದು ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ರಾಷ್ಟ್ರೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಲೋಕಲ್ ಕ್ರಿಕೆಟ್ ಆಡುತ್ತಿದ್ದಾಗ ವ್ಯಕ್ತಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ. ಇದರಿಂದ ಸಿಟ್ಟುಗೊಂಡ ಉದ್ರಿಕ್ತರು ಗುಂಪು ಸೇರಿ ಹಲ್ಲೆ ಕೃತ್ಯ ನಡೆಸಿದ್ದಾರೆ. ಇದರಿಂದ ಆತನಿಗೆ ಗಾಯವಾಗಿತ್ತು. ಗಾಯಗೊಂಡಿದ್ದ ವ್ಯಕ್ತಿ ಬಳಿಕ ಸಾವಿಗೀಡಾಗಿದ್ದಾನೆ. ಇನ್ನೂ ಆ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಆತನ ಹಿನ್ನೆಲೆ ಪತ್ತೆಗಾಗಿ ಪೊಲೀಸರು ತಂಡ ರಚಿಸಿದ್ದಾರೆ.
ಕರ್ನಾಟಕದಂತಹ ಶಾಂತಿಯುತ ರಾಜ್ಯದಲ್ಲಿ ಇಂತಹ ಸ್ಥಿತಿಯಾಗಬಾರದು. ಯಾವುದೇ ಕಾರಣಕ್ಕು ಕಾನೂನು ಕೈಗೆತ್ತಿಕೊಳ್ಳುವ ಸ್ಥಿತಿ ಬರಬಾರದು. ಘಟನೆ ಹಿಂದೆ ಯಾರಿದ್ದಾರೆ, ನಿರ್ದಿಷ್ಟವಾಗಿ ಯಾರಿದ್ದಾರೆ ಅಂತ ಗೊತ್ತಾಗಿಲ್ಲ. ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಮಂಗಳೂರಿನಂತಹ ಕೋಮು ಸೂಕ್ಷ್ಮ ಪ್ರದೇಶದಲ್ಲಿ ಸಾರ್ವಜನಿಕರು ಶಾಂತಿ, ಸಾಮರಸ್ಯ ಕಾಪಾಡಬೇಕೆಂದು ಮನವಿ ಮಾಡುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಮಂಗಳೂರು ಪೊಲೀಸರು ಗುಂಪು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ 15 ಜನರನ್ನು ಬಂಧಿಸಿದ್ದಾರೆ. ಆದರೆ ಯಾವ ಕಾರಣಕ್ಕೆ ಗಲಾಟೆ ಆಗಿತ್ತು. ಹಲ್ಲೆ ಯಾವ ಕಾರಣಕ್ಕೆ ನಡೆಸಿದ್ದರು ಎನ್ನುವುದರ ಬಗ್ಗೆ ಮಾಹಿತಿ ನೀಡಿಲ್ಲ. ಆರೋಪಿಗಳನ್ನು ತನಿಖೆ ನಡೆಸಿದ ಬಳಿಕವಷ್ಟೇ ಇದರ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದೇ ವೇಳೆ, ದೇಶ ವಿರೋಧಿ ಘೋಷಣೆ ಕೂಗಿದ್ದಕ್ಕಾಗಿ ಗುಂಪು ಹಲ್ಲೆ ನಡೆಸಿರುವುದಾಗಿ ವದಂತಿ ಸೃಷ್ಟಿಯಾಗಿದೆ.
Mangalore Kudupu Mob Attack and Murder Incident, Man Allegedly Raised Anti National Slogans While Playing Cricket, Minister Parameshwar Responds.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am