ಬ್ರೇಕಿಂಗ್ ನ್ಯೂಸ್
29-04-25 09:51 pm Bangalore Correspondent ಕರ್ನಾಟಕ
ಬೆಂಗಳೂರು, ಎ.29 : "ಮಾನ್ಯ ಸಿದ್ದರಾಮಯ್ಯನವರೇ, ನೀವು ನಮ್ಮ ನಾಡಿನ ’ಏಕವಚನ’ದ ವ್ಯಾಕರಣ ಮೇಷ್ಟ್ರು. ಆದರೆ, ತಾವು ರಾಜ್ಯದ ಮುಖ್ಯಮಂತ್ರಿಗಳಾಗಿ, ಎಲ್ಲರಿಗೂ ಮೇಲ್ಪಂಕ್ತಿಯನ್ನು ಹಾಕಿ ಕೊಡಬೇಕಾಗಿರುವುದು ನಿಮ್ಮ ಜವಾಬ್ದಾರಿ ಎಂದು ಹಿರಿಯ ಬಿಜೆಪಿ ಶಾಸಕ, ಮಾಜಿ ಸಚಿವ ಸುರೇಶ್ ಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಕುಟುಕಿದ್ದಾರೆ.
ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ನಡೆದ ವಿದ್ಯಮಾನವನ್ನು ಉಲ್ಲೇಖಿಸಿ ಸುರೇಶ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಎಂದು ಖಂಡನಾ ಸಮಾವೇಶ ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು. ಆ ವೇಳೆ, ಬಿಜೆಪಿ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆಗೆ ಇಳಿದಿದ್ದರು. ಆ ವೇಳೆ, ಪೊಲೀಸ್ ಅಧಿಕಾರಿ ಒಬ್ಬರನ್ನು ವೇದಿಕೆಗೆ ಕರೆಸಿ, ಕೈಎತ್ತಿ ಬೈಯ್ದು ಸಿದ್ದರಾಮಯ್ಯ ಕಳುಹಿಸಿದ್ದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.
'ಅಂದು ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿ, ಇಂದು ಬೆಳಗಾವಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ... ನಿಮ್ಮ ಕೋಪ ತಾಪಕ್ಕೆ ಬಲಿಯಾಗಿದ್ದು ನಿಜಕ್ಕೂ ಒಳ್ಳೆಯ ಮೇಲ್ಬಂಕ್ತಿ ಅಲ್ಲ. ಮುಖ್ಯಮಂತ್ರಿಯೇ ತನ್ನ ರಾಜ್ಯದ ಓರ್ವ ಅಧಿಕಾರಿಯ ವಿರುದ್ಧ ತನ್ನ ಪ್ರತಾಪವನ್ನು ಬಹಿರಂಗವಾಗಿ ವೇದಿಕೆಯ ಮೇಲಿಂದ ತೋರಿಸಿದರೆ, ರಾಜಕೀಯ ಪಕ್ಷದ ಕಾರ್ಯಕರ್ತರು ಇನ್ನಷ್ಟು ಅಧಿಕಾರಿಗಳ ಮೇಲೆ ತಮ್ಮ ಪ್ರತಾಪವನ್ನು ನಿಮ್ಮ ಮೇಲ್ಪಂಕ್ತಿಯನ್ನು ಅನುಸರಿಸಿ ಇನ್ನಷ್ಟು ಉಗ್ರವಾಗಿಯೇ ತೋರಿಸುತ್ತಾರೆ".
ಇದು ವ್ಯವಸ್ಥೆ ದುರ್ಬಲವಾಗುವುದಕ್ಕೆ ಕಾರಣವಾಗುತ್ತದೆ. ಅಧಿಕಾರಿಗಳ ಮನೋಬಲವನ್ನು ಕುಗ್ಗಿಸುವ, ಅವರನ್ನು ಬಹಿರಂಗವಾಗಿ ಅವಮಾನಿಸುವ ಕಾರ್ಯ ಓರ್ವ ಮುಖ್ಯಮಂತ್ರಿಯಿಂದ ಆಗಬಾರದು. ಇದು ರಾಜ್ಯದ ಒಟ್ಟು ಆಡಳಿತ ಯಂತ್ರದ ಆರೋಗ್ಯದ ದೃಷ್ಟಿಯಿಂದ ಒಳಿತಲ್ಲ" ಎಂದು ಸುರೇಶ್ ಕುಮಾರ್, ಸಿಎಂ ಸಿದ್ದರಾಮಯ್ಯಗೆ ಹಿತವಚನ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ, 1994ರ ಬ್ಯಾಚಿನ ಮತ್ತು ಪೊಲೀಸ್ ಇಲಾಖೆಯಲ್ಲಿ ಉತ್ತಮ ಹೆಸರು ಪಡೆದಿರುವ ಧಾರವಾಡದ ಹೆಚ್ಚುವರಿ ಪೊಲೀಸ್ ವರಿಷ್ಠ ನಾರಾಯಣ ವಿ. ಭರಮನಿ ವೇದಿಕೆಗೆ ಆಗಮಿಸಿದ್ದರು.
ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದಾಗ, ಬಿಜೆಪಿಯ ಮಹಿಳಾ ಮೋರ್ಚಾ ಕಾರ್ಯಕರ್ತರು ವೇದಿಕೆ ಕೆಳಗೆ ಕಪ್ಪು ಬಾವುಟ ಹಿಡಿದು ಗಲಾಟೆ ಮಾಡುತ್ತಿದ್ದರು. ಇದರಿಂದ ಸಿಟ್ಟಾದ ಸಿಎಂ ಸಿದ್ದರಾಮಯ್ಯ, ಏ.. ಪೊಲೀಸ್ ಬಾರಯ್ಯ ಇಲ್ಲಿ .. ಯಾವನು ಅವನು ಎಸ್ಪಿ. ಏನು ಮಾಡ್ತಾ ಇದ್ದೀರಾ ಇಲ್ಲಿ ಎಂದು ಎಎಸ್ಪಿ ಭರಮನಿ ಅವರನ್ನು ಕರೆದು ಪ್ರಶ್ನೆ ಮಾಡಿದ್ದಾರೆ. ಭಾಷಣದ ಮಧ್ಯೆಯೇ ಸಿಎಂ ಪೊಲೀಸ್ ಅಧಿಕಾರಿಯ ಮೇಲೆ ಕೈಎತ್ತಿ ಗದರುವುದು ಟಿವಿಗಳಲ್ಲಿ ಲೈವ್ ಆಗಿ ಬಂದಿತ್ತು. ಇದರ ವಿಡಿಯೋ ವೈರಲ್ ಆಗಿದ್ದರಿಂದ ಸಾರ್ವಜನಿಕ ವಲಯದಲ್ಲಿ ಭಾರೀ ಟೀಕೆಗೆ ಗುರಿಯಾಗಿತ್ತು.
Former BJP minister and senior leader S. Suresh Kumar strongly criticized Karnataka Chief Minister Siddaramaiah over his recent behavior with a senior police officer during his visit to Belagavi. The incident, which has gone viral on social media, shows the Chief Minister appearing visibly agitated while addressing the top cop in front of the media and public.
12-12-25 08:47 pm
Bangalore Correspondent
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
ನಾಯಕತ್ವ ಗೊಂದಲ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾತ...
12-12-25 01:36 pm
12-12-25 11:00 pm
HK News Desk
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
12-12-25 10:28 pm
Mangalore Correspondent
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
12-12-25 01:58 pm
Mangalore Correspondent
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm