ಬ್ರೇಕಿಂಗ್ ನ್ಯೂಸ್
29-04-25 10:45 pm Bangalore Correspondent ಕರ್ನಾಟಕ
ಬೆಂಗಳೂರು, ಏ 29 : ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಅಟ್ಟಹಾಸಕ್ಕೆ ಬರೋಬ್ಬರಿ 26 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ಕುರಿತು ಇಡೀ ದೇಶ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಬೇಡಿಕೆ ಇಡುತ್ತಿದೆ. ಇತ್ತ ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಮಾತನಾಡುವಾಗ ಯುದ್ಧ ಅನಿವಾರ್ಯತೆ ಇಲ್ಲ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿಕೆ ನೀಡಿದ್ದರು. ಇದು ರಾಜ್ಯ ಬಿಜೆಪಿ ನಾಯಕರಿಗೆ ಅಸ್ತ್ರವಾಗಿದ್ದು, ಇಂದು ಕೂಡ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ನವರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ;
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಅಶೋಕ್, ದೇಶದ ಪ್ರಧಾನಿಗಳ ಫೋಟೋ ಇಟ್ಟು ಅವಹೇಳನ ಮಾಡಿದ್ದು ಮಹಾ ಅಪರಾಧ. ಈಗಾಗಲೇ ಕಾಂಗ್ರೆಸ್ಸಿನ ಜಯರಾಮ್ ರಮೇಶ್, ಅವನು ಯಾವನೋ ಪುಂಗಿದಾಸ ಆರ್ ಬಿ ತಿಮ್ಮಾಪುರ್ ನಮಗೂ ಅದಕ್ಕೂ ಸಂಬಂಧ ಇಲ್ಲ ಅಂದಿದ್ದಾರೆ. ಅವರೇ ನಮ್ಮ ಹೇಳಿಕೆ ಅಲ್ಲ ಅಂದಮೇಲೆ ಕಾಂಗ್ರೆಸ್ ನವರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ. ಸಿದ್ದರಾಮಯ್ಯಗೆ ಕಾಂಗ್ರೆಸ್ ನಲ್ಲೇ ಬೆಲೆ ಕೊಡುತ್ತಿಲ್ಲ. ರಹೀಂ ಖಾನ್ ಎಷ್ಟನೇ ಕ್ಲಾಸ್ ಓದಿದ್ದಾರೋ ಗೊತ್ತಿಲ್ಲ, ಸಿಂಧು ನದಿ ನೀರನ್ನು ಹೇಗೆ ಉಪಯೋಗ ಮಾಡಿಕೊಳ್ತೀರಾ ಎಂದು ಕೇಳಿದ್ದಾರೆ. ರಹೀಂ ಖಾನ್ ಏನು ನೀರಾವರಿ ತಜ್ಞನಾ ? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ನವರಿಗೆ ನಾಚಿಕೆಯಾಗಬೇಕು, ಪಾಕಿಸ್ತಾನಕ್ಕೆ ಪರೋಕ್ಷವಾಗಿ ಬೆಂಬಲ ಕೊಡ್ತಿದ್ದಾರೆ. ರಹೀಂ ಖಾನೋ, ಕರೀಂ ಖಾನೋ ಅವನು ಗೊತ್ತಿಲ್ಲ. ಸಂಸದ ಓವೈಸಿಯೇ ಪಾಕಿಸ್ತಾನದ ಮೇಲೆ ಯುದ್ದ ಮಾಡಿ ಎಂದಿದ್ದಾನೆ. ಕಾಂಗ್ರೆಸ್ ನವರ ಯೋಗ್ಯತೆಗೆ ಪಾಕಿಸ್ತಾನಕ್ಕೆ ಸವಾಲು ಹಾಕುವ ಮಾತಾಡಿದ್ದಾರಾ.? ತೆಲಂಗಾಣ ಸಿಎಂ ರೇವಂತ ರೆಡ್ಡಿ ಬಳಿ ಹೋಗಿ ಪಾಠ ಹೇಳಿಸಿಕೊಂಡು ಬರಲಿ ಎಂದು ಆಕ್ರೋಶ ಹೊರಹಾಕಿದರು.
ಪಾಕಿಸ್ತಾನದಲ್ಲಿ ಫೇಮಸ್ ಅಂದರೆ ಸಿದ್ದರಾಮಯ್ಯ
ಪಾಕಿಸ್ತಾನದಲ್ಲಿ ಫೇಮಸ್ ಅಂದರೆ ಸಿದ್ದರಾಮಯ್ಯ. ಇಲ್ಲಿ ಸಿದ್ದರಾಮಯ್ಯ ಗೆಲ್ತಾ ಇರೋದೇ ಅವರಿಂದ, ಲಾಹೋರ್ನಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೆ ಒಂದು ಲಕ್ಷ ಅಂತರದಿಂದ ಗೆಲ್ಲುತ್ತಾರೆ. ಎರಡು ವರ್ಷಗಳಲ್ಲಿ ಸಿದ್ದರಾಮಯ್ಯರನ್ನು ಅಲ್ಲಿಗೆ ಕರೆದು ಪಾಕಿಸ್ತಾನ ರತ್ನ ಪ್ರಶಸ್ತಿ ಕೊಡ್ತಾರೆ. ಇಂತಹ ಸಿದ್ದರಾಮಯ್ಯರು ಪಾಕಿಸ್ತಾನಕ್ಕೆ ಬೇಕು ಎಂದು ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದರು.
ಎಸ್ಪಿ ಇವರ ಮನೆ ಕಸ ಗುಡಿಸೊ ಆಳ?
ಶಾಂತಿದೂತ ಸಿದ್ದರಾಮಯ್ಯ ನಿನ್ನೆ ಪೊಲಿಸ್ ಅಧಿಕಾರಿ ಕಪಾಳಕ್ಕೆ ಹೊಡಿಯೋಕೆ ಹೋಗಿದ್ದ, ಎಸ್ಪಿ ಇವರ ಮನೆ ಕಸ ಗುಡಿಸೊ ಆಳ?. ಡಿಸಿನ ಕತ್ ಹಿಡಿದು ತಳ್ಳೋದು, ಎಸ್ಪಿಗೆ ಏಕವಚನದಲ್ಲಿ ಮಾತಾಡೋದು ಸಿದ್ದರಾಮಯ್ಯ. ಕೆಲಸ ಮಾಡೋದೆ ಡಿಸಿ, ಅವರನ್ನೇ ಸ್ಟೇಜ್ನಿಂದ ತಳ್ತಾರೆ. ಸಿಎಂ ಆಗಿ ಬಹಳ ದಿನ ಇರಲ್ಲ. ನವಂಬರ್ ಲಾಸ್ಟ್, ಅದೇ ಒತ್ತಡದಲ್ಲಿ ಸಿಎಂ ಮಾತಾಡ್ತಿದಾರೆ. ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸಿಎಂ ನಡೆಗೆ ವಿರೋಧವಾಗಿದ್ದಾರೆ. ಪೊಲೀಸ್ ಇಲಾಖೆಗೆ ಸಿಎಂ ಅವಮಾನ ಮಾಡಿದ್ದಾರೆ. ಪೊಲೀಸ್ ಕುಟುಂಬಗಳಿಗೆ ನೋವಾಗಿದೆ ಎಂದು ಏಕವಚನದಲ್ಲಿ ಆರೋಪಿಸಿದರು. ಪೊಲಿಸರನ್ನ ಯಾರ್ ಬೇಕಾದ್ರು ಹೊಡಿಬಹುದು ಎಂಬ ಮೆಸೇಜ್ ಸಿಎಂ ಕೊಟ್ಟಿದಾರೆ ಎಂದರು.
Senior BJP leader R Ashok launched a scathing attack on the Congress party, accusing it of indirectly supporting Pakistan. In a controversial statement, Ashok said, “Congress leaders should be ashamed. They are indirectly backing Pakistan in their rhetoric and actions.”
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm