ಬ್ರೇಕಿಂಗ್ ನ್ಯೂಸ್
02-05-25 10:52 am Bangalore Correspondent ಕರ್ನಾಟಕ
ಬೆಂಗಳೂರು, ಮೇ 2 : ಮಂಗಳೂರಿನ ಬಜಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಕೃತ್ಯ ಅತ್ಯಂತ ಭೀಭತ್ಸ ಮತ್ತು ಆಘಾತಕಾರಿ. ಈ ಘಟನೆಯಿಂದ ವೈಯಕ್ತಿಕವಾಗಿ ನಾನು ವಿಚಲಿತನಾಗಿದ್ದೇನೆ. ಮೇಲ್ನೋಟಕ್ಕೆ ಈ ಕೃತ್ಯ ಹಳೆ ದ್ವೇಷಕ್ಕೆ ನಡೆದಂತೆ ಕಂಡು ಬಂದರೂ ಇದರ ಹಿಂದಿನ ಉದ್ದೇಶ ಕರಾವಳಿಯಲ್ಲಿ ಶಾಂತಿ ಭಂಗ ಮಾಡುವಂತಿದೆ. ಹಾಗಾಗಿ ಈ ಕೃತ್ಯ ಎಸಗಿದ ಕ್ರಿಮಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಭಾಗಿಯಾದ ದುಷ್ಕರ್ಮಿಗಳನ್ನು ಯಾವುದೇ ಕಾರಣಕ್ಕೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಇಲ್ಲಿ ಯಾರ ಓಲೈಕೆಯೂ ಇಲ್ಲ. ಯಾರ ತುಷ್ಟೀಕರಣವೂ ಇಲ್ಲ. ಈಗಾಗಲೇ ಈ ಕೃತ್ಯದ ಕುರಿತು ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಹತ್ಯೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರಿಗೆ ಸೂಚಿಸಿದ್ದೇನೆ.
ಬಿಜೆಪಿಯವರು ಈಗಾಗಲೇ ಸುಹಾಸ್ ಪ್ರಕರಣವನ್ನು ರಾಜಕೀಯ ಮಾಡಲು ಹೊರಟಿದ್ದಾರೆ. ಹೆಣದ ಮೇಲೆ ರಾಜಕೀಯ ಮಾಡಲು ಹೊರಟಿರುವ ಬಿಜೆಪಿಯವರಿಗೆ ಒಂದು ಮಾತು. ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ನಿಮ್ಮದು ಕೂಡ ಇದೆ. ದ್ವೇಷ ಹರಡುವ ಮೂಲಕ, ಪ್ರಚೋದಿಸುವ ಮೂಲಕ ಮಂಗಳೂರಿನಲ್ಲಿ ಶಾಂತಿ ಭಂಗ ಮಾಡುವ ದುಷ್ಟ ಕೆಲಸಕ್ಕೆ ಕೈ ಹಾಕಬೇಡಿ. ಜವಾಬ್ದಾರಿಯಿಂದ ವರ್ತಿಸಿ.
ಕೊಲೆಯಾದ ಸುಹಾಸ್ ಕುಟುಂಬಕ್ಕೆ ನ್ಯಾಯ ಕೊಡಿಸುವುದು ನಮ್ಮ ಸರ್ಕಾರದ ಜವಾಬ್ದಾರಿ. ನಾವು ಕೇವಲ ಬಾಯಿ ಮಾತಿನಲ್ಲಿ ಕಠಿಣ ಕ್ರಮದ ಭರವಸೆ ನೀಡುವವರಲ್ಲ. ಬದಲಿಗೆ ಕಾನೂನಿನ ಅನುಸಾರ ಈ ಕೃತ್ಯ ಎಸಗಿದವರಿಗೆ ತಕ್ಕ ಪಾಠ ಕಲಿಸುವವರು. ಇದು ನಿಶ್ಚಿತ. ಅಂತಿಮವಾಗಿ ಭೀಕರ ಕೃತ್ಯದಲ್ಲಿ ಜೀವ ಕಳೆದುಕೊಂಡ ಸುಹಾಸ್ ಶೆಟ್ಟಿ ಆತ್ಮಕ್ಕೆ ಶಾಂತಿ ಬೇಡುತ್ತೇನೆ. ಸುಹಾಸ್ ಅಗಲಿಕೆಯ ನೋವಿನಿಂದ ಬಳಲುತ್ತಿರುವ ಅವರ ಕುಟುಂಬಕ್ಕೆ ನನ್ನ ಕಡೆಯಿಂದ ಮನಃಪೂರ್ವಕ ಸಾಂತ್ವನಗಳು ಎಂದು ದಿನೇಶ್ ಗುಂಡೂರಾವ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Incharge Minister Dinesh Gundu Rao has assured that swift and decisive action will be taken against those responsible for the murder of Suhas Shetty. Speaking to the media, Rao emphasized that the government is committed to ensuring justice and will not tolerate criminal activities that threaten public safety.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm