ಬ್ರೇಕಿಂಗ್ ನ್ಯೂಸ್
03-05-25 09:38 pm HK News Desk ಕರ್ನಾಟಕ
ಕಾರ್ಕಳ, ಮೇ 03 : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರ ಜತೆ ಕಾನೂನು-ಸುವ್ಯವಸ್ಥೆ ಸಭೆ ನಡೆಸಲು ಬಂದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಸ್ಲಿಂ ಮುಖಂಡರ ಜತೆಗೆ ಸಭೆ ನಡೆಸುವ ಮೂಲಕ ಪ್ರಕರಣದ ಹಾದಿ ತಪ್ಪಿಸಲು ಮುಂದಾಗಿದ್ದಾರೆ. ಅವಳಿ ಜಿಲ್ಲೆಯಲ್ಲಿ ಸರಕಾರ ಪ್ರಾರಂಭಿಸುವ ಆ್ಯಂಟಿ ಕಮ್ಯುನಲ್ ಫೋರ್ಸ್ ಹಿಂದುತ್ವದ ದಮನಕ್ಕೆ ಬಳಕೆಯಾಗಲಿದೆ ಬಿಜೆಪಿ ರಾಜ್ಯ ನಾಯಕ, ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಆರೋಪಿಸಿದ್ದಾರೆ.
ಗೃಹಸಚಿವರು ಪೊಲೀಸ್ ಅಧಿಕಾರಿಗಳ ಜತೆಗೆ ಸಭೆ ನಡೆಸುವುದಕ್ಕೆ ಮುನ್ನ ಮುಸ್ಲಿಂ ಮುಖಂಡರ ಜತೆ ಸಭೆ ನಡೆಸಿದ್ದಾರೆ. ಮುಸ್ಲಿಂ ಮುಖಂಡರು ಮೇಜು ಗುದ್ದಿ ಸರಕಾರಕ್ಕೆ ಧಮಕಿ ಹಾಕಿದ್ದಾರೆ. ಸರಕಾರದ ಮೇಲೆ ಸವಾರಿ ಮಾಡುವ ಹಂತಕ್ಕೆ ಇವರ ವರ್ತನೆ ತಲುಪಿದೆ. ಗೃಹ ಸಚಿವರು ಹಂತಕರ ರಾಗಕ್ಕೆ ತಾಳ ಹಾಕಲು ಹೊರಟಿದ್ದಾರೆ. ಗೃಹ ಇಲಾಖೆ ಕರಾವಳಿಯ ಜೆಹಾದಿಗಳ ಕಾಲ ಬುಡದಲ್ಲಿ ಅಡವಿಡುತ್ತೀರಾ ಎಂದು ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.
ಆ್ಯಂಟಿ ಕಮ್ಯುನಲ್ ಪೋರ್ಸ್ ರಚನೆ ಮಾಡುವುದರ ಉದ್ದೇಶ ಸ್ಪಷ್ಟವಾಗಿದೆ. ಹಿಂದುತ್ವದ ಪರವಾಗಿರುವ ಧ್ವನಿಯನ್ನು ಪೊಲೀಸ್ ಬಲ ಬಳಸಿ ದಮನಿಸುವುದು ಸರ್ಕಾರದ ಉದ್ದೇಶ. ಸರಕಾರಕ್ಕೆ ಶಾಂತಿಯ ಬದಲು ಪಿಎಫ್ಐ ಉಗ್ರರ ಹಿತಾಸಕ್ತಿ ರಕ್ಷಣೆ ಮಾಡುವುದೆ ಆದ್ಯತೆಯಾಗಿದೆ ಎಂದು ಟೀಕಿಸಿದ್ದಾರೆ.
ನಿನ್ನೆಯಷ್ಟೇ ಸ್ಪೀಕರ್ ಯು.ಟಿ. ಖಾದರ್ ಅವರು ಫಾಜಿಲ್ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿದ್ದರು. ಆದರೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲಾ ಫಾಜಿಲ್ ಸೋದರನೇ ಈ ಕೊಲೆಗೆ ಐದು ಲಕ್ಷ ರೂ. ಸುಪಾರಿ ನೀಡಿದ್ದಾನೆ ಎಂದು ಹೇಳಿದ್ದಾರೆ. ಹಾಗಾದರೆ ಯಾವುದು ಸತ್ಯ? ಫಾಜಿಲ್ ಸೋದರ ಸುಪಾರಿ ಕೊಟ್ಟಿದ್ದೇ ನಿಜವಾದರೆ ಸ್ಪೀಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.
Karkala MLA Sunil Kumar Slams Anti-Communal Force Concept, Accuses Home Minister of Bowing to Muslim Leaders.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm