ಬ್ರೇಕಿಂಗ್ ನ್ಯೂಸ್
03-05-25 09:38 pm HK News Desk ಕರ್ನಾಟಕ
ಕಾರ್ಕಳ, ಮೇ 03 : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರ ಜತೆ ಕಾನೂನು-ಸುವ್ಯವಸ್ಥೆ ಸಭೆ ನಡೆಸಲು ಬಂದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಸ್ಲಿಂ ಮುಖಂಡರ ಜತೆಗೆ ಸಭೆ ನಡೆಸುವ ಮೂಲಕ ಪ್ರಕರಣದ ಹಾದಿ ತಪ್ಪಿಸಲು ಮುಂದಾಗಿದ್ದಾರೆ. ಅವಳಿ ಜಿಲ್ಲೆಯಲ್ಲಿ ಸರಕಾರ ಪ್ರಾರಂಭಿಸುವ ಆ್ಯಂಟಿ ಕಮ್ಯುನಲ್ ಫೋರ್ಸ್ ಹಿಂದುತ್ವದ ದಮನಕ್ಕೆ ಬಳಕೆಯಾಗಲಿದೆ ಬಿಜೆಪಿ ರಾಜ್ಯ ನಾಯಕ, ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಆರೋಪಿಸಿದ್ದಾರೆ.
ಗೃಹಸಚಿವರು ಪೊಲೀಸ್ ಅಧಿಕಾರಿಗಳ ಜತೆಗೆ ಸಭೆ ನಡೆಸುವುದಕ್ಕೆ ಮುನ್ನ ಮುಸ್ಲಿಂ ಮುಖಂಡರ ಜತೆ ಸಭೆ ನಡೆಸಿದ್ದಾರೆ. ಮುಸ್ಲಿಂ ಮುಖಂಡರು ಮೇಜು ಗುದ್ದಿ ಸರಕಾರಕ್ಕೆ ಧಮಕಿ ಹಾಕಿದ್ದಾರೆ. ಸರಕಾರದ ಮೇಲೆ ಸವಾರಿ ಮಾಡುವ ಹಂತಕ್ಕೆ ಇವರ ವರ್ತನೆ ತಲುಪಿದೆ. ಗೃಹ ಸಚಿವರು ಹಂತಕರ ರಾಗಕ್ಕೆ ತಾಳ ಹಾಕಲು ಹೊರಟಿದ್ದಾರೆ. ಗೃಹ ಇಲಾಖೆ ಕರಾವಳಿಯ ಜೆಹಾದಿಗಳ ಕಾಲ ಬುಡದಲ್ಲಿ ಅಡವಿಡುತ್ತೀರಾ ಎಂದು ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.
ಆ್ಯಂಟಿ ಕಮ್ಯುನಲ್ ಪೋರ್ಸ್ ರಚನೆ ಮಾಡುವುದರ ಉದ್ದೇಶ ಸ್ಪಷ್ಟವಾಗಿದೆ. ಹಿಂದುತ್ವದ ಪರವಾಗಿರುವ ಧ್ವನಿಯನ್ನು ಪೊಲೀಸ್ ಬಲ ಬಳಸಿ ದಮನಿಸುವುದು ಸರ್ಕಾರದ ಉದ್ದೇಶ. ಸರಕಾರಕ್ಕೆ ಶಾಂತಿಯ ಬದಲು ಪಿಎಫ್ಐ ಉಗ್ರರ ಹಿತಾಸಕ್ತಿ ರಕ್ಷಣೆ ಮಾಡುವುದೆ ಆದ್ಯತೆಯಾಗಿದೆ ಎಂದು ಟೀಕಿಸಿದ್ದಾರೆ.
ನಿನ್ನೆಯಷ್ಟೇ ಸ್ಪೀಕರ್ ಯು.ಟಿ. ಖಾದರ್ ಅವರು ಫಾಜಿಲ್ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿದ್ದರು. ಆದರೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲಾ ಫಾಜಿಲ್ ಸೋದರನೇ ಈ ಕೊಲೆಗೆ ಐದು ಲಕ್ಷ ರೂ. ಸುಪಾರಿ ನೀಡಿದ್ದಾನೆ ಎಂದು ಹೇಳಿದ್ದಾರೆ. ಹಾಗಾದರೆ ಯಾವುದು ಸತ್ಯ? ಫಾಜಿಲ್ ಸೋದರ ಸುಪಾರಿ ಕೊಟ್ಟಿದ್ದೇ ನಿಜವಾದರೆ ಸ್ಪೀಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.
Karkala MLA Sunil Kumar Slams Anti-Communal Force Concept, Accuses Home Minister of Bowing to Muslim Leaders.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am