ಬ್ರೇಕಿಂಗ್ ನ್ಯೂಸ್
04-05-25 01:18 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.04: ಸುಹಾಸ್ ಶೆಟ್ಟಿ ಮೇಲೂ ಕೊಲೆ ಸೇರಿದಂತೆ ಐದು ಕೇಸ್ಗಳಿವೆ. ಹೀಗಾಗಿ, ನಾವು ಅವರ ಮನೆಗೆ ಭೇಟಿ ಕೊಟ್ಟಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿಕೆ ನೀಡಿದರು.
ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರ್ಕಾರದಿಂದ ಭೇಟಿ ನೀಡಿ ಯಾರೂ ಸಾಂತ್ವನ ಹೇಳದ ವಿಚಾರವಾಗಿ ಮಾತನಾಡಿದ ಅವರು, ಇದು ಒಂದು ಕೊಲೆ ಪ್ರಕರಣ. ಸುಹಾಸ್ ಶೆಟ್ಟಿ ಮೇಲೂ ಕೇಸ್ಗಳಿವೆ, ಐದು ಕೇಸ್ಗಳು ಅವರ ಮೇಲಿವೆ. ಹಾಗಾಗಿ, ನಾವು ಭೇಟಿ ಕೊಟ್ಟಿಲ್ಲ. ಆದರೆ, ಸುಹಾಸ್ ಶೆಟ್ಟಿ ಮನೆಗೆ ನ್ಯಾಯ ಕೊಡಿಸುವ ಕೆಲಸ ಸರ್ಕಾರ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.
ಹಿಂದೂ ಕಾರ್ಯರ್ಕನ ಕೊಲೆ ಪ್ರಕರಣದಲ್ಲಿ ಬಂಧಿತರು ನಿಜವಾದ ಆರೋಪಿಗಳಾ ಎಂಬ ಅನುಮಾನ ವ್ಯಕ್ತವಾಗ್ತಿರುವ ಕುರಿತು ಪ್ರತಿಕ್ರಿಯಿಸಿ, ಯಾರನ್ನೋ ಹೇಗೆ ಆರೋಪಿ ಅಂತ ಹೇಳಲು ಆಗುತ್ತಾ? ಕೊಲೆ ಪ್ರಕರಣದಲ್ಲಿ ಯರ್ಯಾರನ್ನೋ ಬಂಧಿಸಲು ಆಗಲ್ಲ ಎಂದು ತಿಳಿಸಿದರು.
ನಿನ್ನೆ ಮುಸ್ಲಿಂ ಸಮುದಾಯದ ಪ್ರಮುಖರು ಅವರೇ ಬಂದು ನನ್ನ ಭೇಟಿ ಮಾಡಿದ್ರು. ಬರೋರಿಗೆ ಬೇಡ ಅನ್ನೋಕ್ಕಾಗುತ್ತಾ? ಬೇರೆ ಸಮುದಾಯದವರೂ ಬರಬಹುದಿತ್ತು. ಯಾರೂ ಬರಲಿಲ್ಲ ಎಂದರು.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ವಹಿಸಲು ಬಿಜೆಪಿ ಒತ್ತಾಯದ ಬಗ್ಗೆ ಮಾತನಾಡಿ, ಅದು ಬಿಜೆಪಿಯವರ ಅಭಿಪ್ರಾಯ. ನಮ್ಮ ಪೊಲೀಸ್ ಇಲಾಖೆ ಸಮರ್ಥವಾಗಿ ಕೆಲಸ ಮಾಡ್ತಾ ಇದೆ. ಎಂಟು ಜನರನ್ನ ಪ್ರಕರಣದಲ್ಲಿ ಬಂಧಿಸಲಾಗಿದೆ. ತನಿಖೆ ಚೆನ್ನಾಗಿ ನಡೆಯುತ್ತಿದೆ ಎಂಬುದು ನಮ್ಮ ಅಭಿಪ್ರಾಯ. ಹಾಗಾಗಿ, ಈ ಪ್ರಕರಣ ಎನ್ಐಎಗೆ ಕೊಟ್ಟಿಲ್ಲ. ಆ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡ್ತೇವೆ. ಬಿಜೆಪಿ ಆರೋಪ ಸರಿಯಲ್ಲ, ಬಿಜೆಪಿಯವರ ಕಾಲದಲ್ಲೂ ಮರ್ಡರ್ಗಳು ಆಗಿವೆ ಎಂದು ಹೇಳಿದರು.
ನಾವು ಎಲ್ಲಾ ರೀತಿಯ ಕ್ರಮಗಳನ್ನ ತೆಗೆದುಕೊಳ್ಳುತ್ತಿದ್ದೇವೆ. ಮರ್ಡರ್ ಆಗುತ್ತೆ ಎಂದು ಕ್ಲೂ ಸಿಕ್ಕಿದರೂ ಅಲರ್ಟ್ ಮಾಡಿ ತಡೆಯುವ ಕೆಲಸ ಆಗ್ತಿದೆ. ಕೊಲೆ ನಂತರವೂ ಆರೋಪಿಗಳನ್ನು ಬಂಧಿಸಲಾಗ್ತಿದೆ. ಎಲ್ಲಾ ಎಚ್ಚರಿಕೆಗಳನ್ನೂ, ಸೂಚನೆಗಳನ್ನ ಎಸ್ಪಿಗಳಿಗೆ ಕೊಟ್ಟಿದ್ದೇವೆ ಎಂದರು.
Why Hand Over Suhas Shetty Murder Case to NIA? Our Police Are Capable, Says Parameshwar, Claims Suhas Faced 5 Cases, Yet No Visits to His Home
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am