ಬ್ರೇಕಿಂಗ್ ನ್ಯೂಸ್
04-05-25 01:18 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.04: ಸುಹಾಸ್ ಶೆಟ್ಟಿ ಮೇಲೂ ಕೊಲೆ ಸೇರಿದಂತೆ ಐದು ಕೇಸ್ಗಳಿವೆ. ಹೀಗಾಗಿ, ನಾವು ಅವರ ಮನೆಗೆ ಭೇಟಿ ಕೊಟ್ಟಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿಕೆ ನೀಡಿದರು.
ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರ್ಕಾರದಿಂದ ಭೇಟಿ ನೀಡಿ ಯಾರೂ ಸಾಂತ್ವನ ಹೇಳದ ವಿಚಾರವಾಗಿ ಮಾತನಾಡಿದ ಅವರು, ಇದು ಒಂದು ಕೊಲೆ ಪ್ರಕರಣ. ಸುಹಾಸ್ ಶೆಟ್ಟಿ ಮೇಲೂ ಕೇಸ್ಗಳಿವೆ, ಐದು ಕೇಸ್ಗಳು ಅವರ ಮೇಲಿವೆ. ಹಾಗಾಗಿ, ನಾವು ಭೇಟಿ ಕೊಟ್ಟಿಲ್ಲ. ಆದರೆ, ಸುಹಾಸ್ ಶೆಟ್ಟಿ ಮನೆಗೆ ನ್ಯಾಯ ಕೊಡಿಸುವ ಕೆಲಸ ಸರ್ಕಾರ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.
ಹಿಂದೂ ಕಾರ್ಯರ್ಕನ ಕೊಲೆ ಪ್ರಕರಣದಲ್ಲಿ ಬಂಧಿತರು ನಿಜವಾದ ಆರೋಪಿಗಳಾ ಎಂಬ ಅನುಮಾನ ವ್ಯಕ್ತವಾಗ್ತಿರುವ ಕುರಿತು ಪ್ರತಿಕ್ರಿಯಿಸಿ, ಯಾರನ್ನೋ ಹೇಗೆ ಆರೋಪಿ ಅಂತ ಹೇಳಲು ಆಗುತ್ತಾ? ಕೊಲೆ ಪ್ರಕರಣದಲ್ಲಿ ಯರ್ಯಾರನ್ನೋ ಬಂಧಿಸಲು ಆಗಲ್ಲ ಎಂದು ತಿಳಿಸಿದರು.
ನಿನ್ನೆ ಮುಸ್ಲಿಂ ಸಮುದಾಯದ ಪ್ರಮುಖರು ಅವರೇ ಬಂದು ನನ್ನ ಭೇಟಿ ಮಾಡಿದ್ರು. ಬರೋರಿಗೆ ಬೇಡ ಅನ್ನೋಕ್ಕಾಗುತ್ತಾ? ಬೇರೆ ಸಮುದಾಯದವರೂ ಬರಬಹುದಿತ್ತು. ಯಾರೂ ಬರಲಿಲ್ಲ ಎಂದರು.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ವಹಿಸಲು ಬಿಜೆಪಿ ಒತ್ತಾಯದ ಬಗ್ಗೆ ಮಾತನಾಡಿ, ಅದು ಬಿಜೆಪಿಯವರ ಅಭಿಪ್ರಾಯ. ನಮ್ಮ ಪೊಲೀಸ್ ಇಲಾಖೆ ಸಮರ್ಥವಾಗಿ ಕೆಲಸ ಮಾಡ್ತಾ ಇದೆ. ಎಂಟು ಜನರನ್ನ ಪ್ರಕರಣದಲ್ಲಿ ಬಂಧಿಸಲಾಗಿದೆ. ತನಿಖೆ ಚೆನ್ನಾಗಿ ನಡೆಯುತ್ತಿದೆ ಎಂಬುದು ನಮ್ಮ ಅಭಿಪ್ರಾಯ. ಹಾಗಾಗಿ, ಈ ಪ್ರಕರಣ ಎನ್ಐಎಗೆ ಕೊಟ್ಟಿಲ್ಲ. ಆ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡ್ತೇವೆ. ಬಿಜೆಪಿ ಆರೋಪ ಸರಿಯಲ್ಲ, ಬಿಜೆಪಿಯವರ ಕಾಲದಲ್ಲೂ ಮರ್ಡರ್ಗಳು ಆಗಿವೆ ಎಂದು ಹೇಳಿದರು.
ನಾವು ಎಲ್ಲಾ ರೀತಿಯ ಕ್ರಮಗಳನ್ನ ತೆಗೆದುಕೊಳ್ಳುತ್ತಿದ್ದೇವೆ. ಮರ್ಡರ್ ಆಗುತ್ತೆ ಎಂದು ಕ್ಲೂ ಸಿಕ್ಕಿದರೂ ಅಲರ್ಟ್ ಮಾಡಿ ತಡೆಯುವ ಕೆಲಸ ಆಗ್ತಿದೆ. ಕೊಲೆ ನಂತರವೂ ಆರೋಪಿಗಳನ್ನು ಬಂಧಿಸಲಾಗ್ತಿದೆ. ಎಲ್ಲಾ ಎಚ್ಚರಿಕೆಗಳನ್ನೂ, ಸೂಚನೆಗಳನ್ನ ಎಸ್ಪಿಗಳಿಗೆ ಕೊಟ್ಟಿದ್ದೇವೆ ಎಂದರು.
Why Hand Over Suhas Shetty Murder Case to NIA? Our Police Are Capable, Says Parameshwar, Claims Suhas Faced 5 Cases, Yet No Visits to His Home
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am