ಬ್ರೇಕಿಂಗ್ ನ್ಯೂಸ್
04-05-25 09:15 pm HK News Desk ಕರ್ನಾಟಕ
ಬಾಗಲಕೋಟೆ, ಮೇ 4 : ಅರಸನ ಅರಮನೆಗೆ ಕಾರ್ಮೋಡ ಕವಿದಿತ್ತು. ಈ ವರ್ಷ ವಾಯು ಸುನಾಮಿ, ಜಲ ಸುನಾಮಿ, ಭೂ ಸುನಾಮಿ, ಅಗ್ನಿ ಸುನಾಮಿ ಉಂಟಾಗುತ್ತದೆ. ಹಿಮಾಲಯ ಗೌರಿಶಂಕರ ಶಿಖರ ಶಿವ ಶಿವ ಎಂದೀತು. ಸುನಾಮಿ ಆದೀತು, ಹಿಮಾಲಯದಿಂದ ಡೆಲ್ಲಿಗೂ ಅಪಾಯ ಬಂದೀತು ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಉತ್ತರ ರಾಷ್ಟ್ರಗಳಿಗೆ ಅಪಾಯವಿದೆ, ಜಲಬಾಧೆ ಇದೆ. ದೊಡ್ಡ ದೊಡ್ಡ ನಾಯಕರಿಗೆ ಅಪಾಯವಿದೆ. ಜಗತ್ತಿನ ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯುವಿದೆ ಎಂದೂ ಸ್ವಾಮೀಜಿ ಹೇಳಿದ್ದಾರೆ.
ಸದ್ಯದಲ್ಲಿ ರಾಜ್ಯ ರಾಜಕಾರಣದಲ್ಲಿ ಯಾವುದೇ ಬದಲಾವಣೆ ಇಲ್ಲ. ಸಕ್ರಾಂತಿ ವರೆಗೂ ರಾಜ್ಯ ರಾಜಕೀಯದಲ್ಲಿ ಏನೂ ಬದಲಾವಣೆ ಆಗಲ್ಲ ಎಂದು ಹೇಳಿದ ಸ್ವಾಮೀಜಿ, ಪಹಲ್ಗಾಮ್ ದಾಳಿ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಯುಗಾದಿ ಮುಂಚಿತವಾಗಿ ನಾನು ಹೇಳಿದ್ದೆ, ಉತ್ತರ ನಾಡಿನಲ್ಲಿ ಹಬ್ಬಿತು ಹಗೆಯ ಬೇಗೆ. ಸುತ್ತುವರೆದು ಬರುವಾಗ ಜಗವೆಲ್ಲಾ ಕೂಲಾದೀತು. ನಾನು ಹೇಳಿದ ಒಂದು ವಾರದಲ್ಲಿ ಕಾಶ್ಮೀರದಲ್ಲಿ ಹಗೆ ಆಯ್ತು, ಮೃತ್ಯು ಆಯ್ತು. ಅದು ಆಲ್ ಇಂಡಿಯಾ ಕವರ್ ಆಗುತ್ತಲ್ಲದೇ, ಜಗತ್ತಿಗೆಲ್ಲಾ ಹೋಗುತ್ತೆ.
ಈ ವರ್ಷ ಬಹುದೊಡ್ಡ ಅಪಾಯವಿದೆ, ಮತಾಂಧತೆ ಹೆಚ್ಚಾಗುತ್ತೆ. ಅದರಿಂದ ಒಂದು ದೊಡ್ಡ ಕಾಯಿಲೆ ಬರುತ್ತೆ, ಅದು ಐದು ವರ್ಷ ಇರುತ್ತೆ. ಶಾಂತಿ, ನೆಮ್ಮದಿ ಇರಲ್ಲ ಎಂದು ಕೋಡಿಶ್ರೀ ಭವಿಷ್ಯ ನುಡಿದರು. ನೈಸರ್ಗಿಕ ವಿಪತ್ತು, ರಾಜಕೀಯ ವಿಚಾರದಲ್ಲಿ ಕೋಡಿಶ್ರೀ ಭವಿಷ್ಯ ಹೆಚ್ಚು ಚರ್ಚೆಗೆ ಕಾರಣವಾಗುತ್ತದೆ.
There is a fear of war in the country. A tsunami will occur in the Himalayas and reach Delhi from there. A dark cloud will cover the king's house, predicted Shivananda Shivayogi Rajendra Swamiji
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 09:30 pm
HK News Staffer
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm